ಧಾರವಾಡ | ಲಿಂಗಾಯತ ಸ್ವತಂತ್ರ ಧರ್ಮ ಆಗುವುದರಿಂದ ಹಿಂದುತ್ವಕ್ಕೆ ಧಕ್ಕೆಯಾಗದು: ಸಿದ್ಧರಾಮ‌ ಸ್ವಾಮೀಜಿ

Date:

ಲಿಂಗಾಯತ ಧರ್ಮವನ್ನಾಗಿ ಮಾಡಲು ನಾವು ಸರ್ಕಾರಗಳಿಗೆ ಯಾವುದೇ ಗಡುವು ನೀಡುವುದಿಲ್ಲ. ಬದಲಾಗಿ ಹೋರಾಟ ಮಾಡುತ್ತೇವೆ. ಇಂದು ಸಿಖ್ ಮತ್ತು ಜೈನ ಧರ್ಮಗಳು ಸ್ವತಂತ್ರ ಧರ್ಮಾಗಿರುವುದಕ್ಕೆ ಹೋರಾಟವೇ ಕಾರಣ ಎಂದು ಗದುಗಿನ ತೋಂಟದಾರ್ಯ ಡಾ. ಸಿದ್ದರಾಮ ಸ್ವಾಮೀಜಿ ಹೇಳಿದರು.

ಧಾರವಾಡ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸತ್ಯಕ್ಕೆ ನ್ಯಾಯ ಸಿಗುವ ಭರವಸೆ ನಮಗಿದೆ. ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮ ಮಾನ್ಯತೆ ನೀಡುವಂತೆ ಆಗ್ರಹಿಸಿ ರಾಜ್ಯ ಸರ್ಕಾರವು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಲಿಂಗಾಯತ ಮಠಾಧಿಪತಿ ಒಕ್ಕೂಟದಿಂದ ಮನವಿ ಸಲ್ಲಿಸಲಾಗುವುದು” ಎಂದು ಹೇಳಿದರು.

“ಸರ್ಕಾರದ ಎಲ್ಲ ದಾಖಲೆಗಳಲ್ಲಿ ಲಿಂಗಾಯತ ಎಂಬ ಶಬ್ದ ಮಾತ್ರ ಬಳಕೆಯಲ್ಲಿದೆ. ಎಲ್ಲಿಯೂ ವೀರಶೈವ ಲಿಂಗಾಯತ ಎಂಬ ಪದವಿಲ್ಲ. ವೀರಶೈವವೂ ಕೂಡ ಲಿಂಗಾಯತ ಧರ್ಮದ ಒಂದು ಒಳಪಂಗಡ. ಕೆಲವರು ವೀರಶೈವ ಲಿಂಗಾಯತ ಶಬ್ದ ಬಳಸಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಹೀಗಾಗಿ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮವನ್ನಾಗಿ ಘೋಷಿಸಬೇಕು. ಈ ಕುರಿತಂತೆ ಶಾಸಕರು, ಸಚಿವರು ಹಾಗೂ ರಾಜ್ಯ ಲೋಕಸಭಾ ಸದಸ್ಯರಿಗೆ ಮನವಿ ಮೂಲಕ ಆಗ್ರಹಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2008ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಲಿಂಗಾಯತ ಹೋರಾಟಕ್ಕೆ ಮಣಿದು ನ್ಯಾಯಮೂರ್ತಿ ಎಚ್ ಎನ್ ನಾಗಮೋಹನದಾಸ ನೇತೃತ್ವದ ಸಮಿತಿಯನ್ನು ನೇಮಿಸಿತ್ತು. ಈ ಸಮಿತಿಯು ಸಮಗ್ರ ಅಧ್ಯಯನ ನಡೆಸಿ ವಿಸ್ತೃತವಾದ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ಬಳಿಕ ರಾಜ್ಯ ಸರ್ಕಾರವು ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಅಭಿಪ್ರಾಯ ಪಡೆದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು” ಎಂದು ತಿಳಿಸಿದರು.

“ಕೇಂದ್ರ ಸರ್ಕಾರ ಆ ಕುರಿತು ಯಾವುದೇ ಸಮಾಲೋಚನೆ ಮಾಡದೇ ಸಂಬಂಧಿಸಿದ ಇಲಾಖೆಗಳ ಅಭಿಪ್ರಾಯ ಸಂಗ್ರಹಿಸದೆ ಪ್ರಸ್ತಾವನೆಯನ್ನು ವಾಪಸ್ ಕಳಿಸಿತ್ತು. ಈ ಹಿನ್ನೆಲೆಯಲ್ಲಿ ಈಗ ಸಭೆ ಸೇರಿದ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಮಹಾಸ್ವಾಮಿಗಳು ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಸಿದ್ಧಪಡಿಸಿದ ಪ್ರಸ್ತಾವನೆಯನ್ನು ಸೂಕ್ತ ಆಧಾರಗಳು ಹಾಗೂ ತಿದ್ದುಪಡಿಗಳೊಂದಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಈ ಚಿಂತನ ಮಂಥನ ಸಭೆಯ ಮೂಲಕ ಆಗ್ರಹಿಸುತ್ತೇವೆ” ಎಂದು ತಿಳಿಸಿದರು.

ಕಾನೂನು ಹೋರಾಟಕ್ಕೆ ಚಿಂತನೆ

ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, “ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆ ನೀಡಲು ರಾಜ್ಯದ ಸಂಸದರನ್ನು ಸಂಪರ್ಕಿಸುತ್ತೇವೆ. ಚುನಾವಣೆ ಸಂದರ್ಭದಲ್ಲಿ ರಾಜಕೀಯ ವ್ಯಕ್ತಿಗಳನ್ನು ಹೆದರಿಸುವುದಕ್ಕಾಗಿ ಈ ರೀತಿ ಮಾಡುತ್ತಿಲ್ಲ. ನ್ಯಾಯೋಚಿತವಾದ ಬೇಡಿಕೆಯನ್ನು ಈಡೇರಿಸುವಂತೆ ಹೋರಾಡುತ್ತಿದ್ದೇವೆ. ಈ ಬಗ್ಗೆ ಕಾನೂನು ಹೋರಾಟ ನಡೆಸಲು ಈಗಾಗಲೇ ಚಿಂತನೆಯೂ ಸಾಗಿದೆ” ಎಂದರು.

ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆ ನೀಡಬೇಕು

ಬಾಲ್ಕಿ ಮಠದ ಡಾ. ಬಸವಲಿಂಗ ಪಟ್ಟದ್ದೇವರು ಮಾತನಾಡಿ, “ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ನೂರಕ್ಕೂ ಅಧಿಕ ಸ್ವಾಮೀಜಿಗಳ ನೇತೃತ್ವದಲ್ಲಿ ರವಿವಾರ ಧಾರವಾಡದಲ್ಲಿ ಸಭೆ ಕೈಗೊಂಡು, ಚಿಂತನ-ಮಂಥನದ ಬಳಿಕ ಒಮ್ಮತದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟವನ್ನು ನಿರಂತರವಾಗಿ ಮುಂದುವರೆಸುತ್ತೇವೆ. ಕರ್ನಾಟಕ ರಾಜ್ಯದಲ್ಲಿ ಇರುವ ಲಿಂಗಾಯತ ಧರ್ಮದ ಎಲ್ಲ ಒಳಪಂಗಡಗಳನ್ನು ಕೇಂದ್ರ ಸರ್ಕಾರವು ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಸೇರಿಸಬೇಕು. ಇದರ ಜತೆಗೆ ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಪ್ರತಿಭಟನೆ ಕಾಣದ ಕೈಗಳ ವಿರುದ್ಧವೇ ಹೊರತು ಕೋರ್ಟ್ ವಿರುದ್ಧ ಅಲ್ಲ: ಗಂಗಾಧರ ದೊಡವಾಡ

ಈ ಸಂದರ್ಭದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಭಾಲ್ಕಿ ಮಠದ ಬಸವಲಿಂಗ ಪಟ್ಟದದೇವರು, ಕೂಡಲಸಂಗಮ ಧರ್ಮ ಪೀಠದ ಡಾ. ಗಂಗಾಮಾತಾಜಿ, ಹುಬ್ಬಳ್ಳಿಯ ಮೂರು ಸಾವಿರ ಮಠದ ಗುರುಸಿದ್ದರಾಜ ಯೋಗೇಂದ್ರ ಸ್ವಾಮೀಜಿ, ಇಳಕಲ್ಲಿನ ಗುರುಮಹಾಂತ ಸ್ವಾಮೀಜಿ, ಮೈಸೂರಿನ ಚಿದಾನಂದ ಸ್ವಾಮೀಜಿ, ಅಥಣಿ ಪ್ರಭು ಚನ್ನಬಸವ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...