ಧಾರವಾಡ | ಮನುಷ್ಯನಲ್ಲಿ ಉತ್ತಮ ಸಂಸ್ಕಾರ ಬೆಳೆಸುವ ಶಕ್ತಿ ಸಾಹಿತ್ಯಕ್ಕಿದೆ: ಬಸವರಾಜ ಸಾದರ

Date:

ಮನುಷ್ಯನಲ್ಲಿ ಉತ್ತಮ ಸಂಸ್ಕಾರ ಬೆಳೆಸುವ ಶಕ್ತಿಯನ್ನು ಸಾಹಿತ್ಯ ಹೊಂದಿದ್ದು, ಜನಸಾಮಾನ್ಯರೂ ತಮ್ಮ ಇಷ್ಟದ ಕೃತಿಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ, ಬೆಂಗಳೂರು ಆಕಾಶವಾಣಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ. ಬಸವರಾಜ ಸಾದರ ಹೇಳಿದರು.

ಕೇಂದ್ರ ಸಾಹಿತ್ಯ ಅಕಾಡೆಮಿಯ ದಕ್ಷಿಣ ಪ್ರಾದೇಶಿಕ ಕಚೇರಿ ನೇತೃತ್ವದಲ್ಲಿ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹುಲ್ಲಂಬಿಯಲ್ಲಿ ಬೇಗೂರು ಗ್ರಾಮ ಪಂಚಾಯಿತಿ, ಕೃಷಿ ಜ್ಯೋತಿ ರೈತ ಉತ್ಪಾದಕ ಕಂಪನಿ, ಗ್ರಾಮದ ಹಲವು ಯುವಕ ಮಂಡಳಿಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಗ್ರಾಮಲೋಕ ಕಾರ್ಯಕ್ರಮದಲ್ಲಿ ಮಾತನಾಡಿದರು.

“ನಮ್ಮ ಪರಂಪರೆಯಲ್ಲಿನ ಶರಣರು, ಸಂತರು, ದಾಸರು, ಸಮಾಜ ಸುಧಾರಕರೆಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಸಾಹಿತ್ಯವನ್ನು ಆಶ್ರಯಿಸಿ ಮನುಕುಲದ ಕಲ್ಯಾಣಕ್ಕೆ ದುಡಿದಿದ್ದಾರೆ. ತಮ್ಮ ಸಾಹಿತ್ಯದಲ್ಲಿ ಹುಟ್ಟೂರು ಮತ್ತು ಬಾಲ್ಯದ ಸಂಗತಿಗಳೇ ತುಂಬಿದ್ದು, ಬರೆದರೂ ತೀರದಷ್ಟು ಸಾಮಗ್ರಿಯನ್ನು ಒದಗಿಸುತ್ತಿದೆ. ಊರಿನ ಋಣವನ್ನು ತೀರಿಸಲು ಸಾಧ್ಯವಿಲ್ಲದಿದ್ದರೂ ಅದರ ಬಗೆಗಿನ ಕೃತಜ್ಞತಾ ಭಾವವು ನಮ್ಮಲ್ಲಿ ಮಾನವೀಯ ಸೆಲೆಯನ್ನು ಹುಟ್ಟುಹಾಕುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ತಂದೆ ತಾಯಿಯವರ ಹೆಸರಿನಲ್ಲಿ ಹುಲ್ಲಂಬಿ ಸರ್ಕಾರಿ ಶಾಲೆಯ ಏಳನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸುವ ಇಬ್ಬರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ₹25,000 ಶಾಶ್ವತ ಠೇವಣಿಯನ್ನು ಮುಖ್ಯೋಪಾದ್ಯಾಯ‌ ದ್ಯಾವಪ್ಪವನವರ ಅವರಿಗೆ ಹಸ್ತಾಂತರಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಪೂರ್ವ ಪ್ರಾಥಮಿಕ ಶಿಕ್ಷಣ ಕೇಂದ್ರಗಳಿಗೆ ಬೇಕಿದೆ ಪ್ರಥಮ ಚಿಕಿತ್ಸೆ

ಶಿವಪ್ಪ ಕುಡಬಾಯಿ, ಶಂಕ್ರಪ್ಪ ಸಾದರ, ಗುರುನಾಥ ಹರಿಜನ, ಶಿವಪ್ಪ ನೀರಲಕಟ್ಟಿ, ರಾಚಪ್ಪ ಬಿಸರಳ್ಳಿ, ಸ್ಕೋಪ್ ಸಂಸ್ಥೆಯ ಬಂಡೇರಾವ ಪಟವಾರಿ, ನಿಡಗುಂದಿ, ಬಸಪ್ಪ ಶೀಗಿಗಟ್ಟಿ, ಸಾವಕ್ಕ ಮನಗುಂಡಿ, ನಾಗಲಿಂಗ ಸಾದರ ಸೇರಿದಂತೆ ಅಪಾರ ಸಂಖ್ಯೆಯ ಗ್ರಾಮಸ್ಥರು, ಯುವಜನರು, ಮಕ್ಕಳು ಸಭೆಯಲ್ಲಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...