ಧಾರವಾಡ | ಕೃಷಿಕರ ಸಮಸ್ಯೆಗಳಿಗೆ ಪರಿಹಾರ ನೀಡುವಲ್ಲಿ ಕೃಷಿ ಮೇಳ ಯಶಸ್ವಿಯಾಗಲಿ: ಸಂತೋಷ್ ಲಾಡ್

Date:

ಕೃಷಿ ಮೇಳವು ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನಗಳು, ನೂತನ ಬೆಳೆ ಪದ್ಧತಿಗಳು ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಕುರಿತು ಮಾಹಿತಿ ನೀಡುವ ಪ್ರಮುಖ ವೇದಿಕೆಯಾಗಿದೆ. ಕೃಷಿ ಮೇಳವನ್ನು ಯಶಸ್ವಿಗೊಳಿಸಲು ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಕಾರ್ಮಿಕ ಇಲಾಖೆಯ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾ ಭವನದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಕೃಷಿ ಮೇಳದ ಕುರಿತು ಸಭೆ ಜರುಗಿಸಿ ಮಾತನಾಡಿದ ಅವರು, “ಕೃಷಿ ಮೇಳಕ್ಕೆ ಆಗಮಿಸುವ ರೈತರು ಮತ್ತು ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೃಷಿ ಮೇಳವನ್ನು ಅರ್ಥಪೂರ್ಣವಾಗಿ ಆಯೋಜಿಸಬೇಕು. ಮೇಳಕ್ಕೆ ಆಗಮಿಸುವ ರೈತರಿಗೆ, ಪ್ರಗತಿಪರ ರೈತರಿಗೆ ವಿಶೇಷ ಉಪನ್ಯಾಸಗಳ ಲಾಭ ಸಿಗಬೇಕು. ಮೇಳಕ್ಕೆ ಆಗಮಿಸುವ ಲಕ್ಷಾಂತರ ರೈತರಿಗೆ ಕೃಷಿ ಸುಧಾರಣೆ, ಅಭಿವೃದ್ಧಿ, ಉತ್ತಮ ಕೃಷಿ ಅಭ್ಯಾಸಗಳು ಗೊತ್ತಾಗಬೇಕು. ಅದರ ಲಾಭ ಎಲ್ಲರಿಗೂ ಸಿಗಬೇಕು” ಎಂದರು.

“ಕೃಷಿ ಮೇಳವು ವಾಣಿಜ್ಯ ಚಟುವಟಿಕೆಗಳಿಗೆ, ವ್ಯಾಪರಗಳಿಗೆ ಸೀಮಿತವಾಗಬಾರದು. ಜನಜಂಗುಳಿ ಸೇರುವ ಜಾತ್ರೆಯಾಗದೇ ನಿಜವಾಗಿಯೂ ರೈತರ ಜಾತ್ರೆಯಾಗಿ ಕೃಷಿ ಮೇಳವು ಯಶಸ್ವಿಯಾಗುವಂತೆ ಮಾಡಬೇಕು. ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ಅಂದಾಜು 1 ಲಕ್ಷ ಹೇಕ್ಟೆರ್ ಬೆಳೆ ನಾಶವಾದ ವರದಿಯಾಗಿದೆ. ಈ ಕುರಿತು ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು, ತಜ್ಞರು ಮತ್ತು ಕೃಷಿ ವಿದ್ಯಾರ್ಥಿಗಳು ಕ್ಷೇತ್ರ ಭೇಟಿ ಮೂಲಕ ರೈತರ ಜಮೀನುಗಳಿಗೆ ತೆರಳಿ, ಕಾರಣ ತಿಳಿದು ಅಧ್ಯಯನ ಮಾಡಬೇಕು. ಕೃಷಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರುವಲ್ಲಿ ವಿಶ್ವವಿದ್ಯಾಲಯ ಮುಖ್ಯ ಪಾತ್ರ ವಹಿಸಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, “ಈ ವರ್ಷದ ಕೃಷಿ ಮೇಳದ ವಿಭಿನ್ನ ಕಾರ್ಯಕ್ರಮಗಳನ್ನು, ರೈತರ ಉಪಯೋಗಿ ಉಪನ್ಯಾಸಗಳನ್ನು ಆಯೋಜಿಸಬೇಕು. ಮುಖ್ಯವಾಗಿ ಜಿಲ್ಲೆಯಲ್ಲಿ ಬೆಳೆ ವಿಮೆ ಕುರಿತು ವೈಜ್ಞಾನಿಕ ಅಧ್ಯಯನವಾಗಬೇಕು. ಮತ್ತು ಮಾವು ವಿಮೆಯು ಎಲ್ಲ ರೈತರಿಗೆ ಸಕಾಲಕ್ಕೆ ಲಭಿಸುತ್ತಿಲ್ಲ. ವಿಮೆ ಪರಿಹಾರದ ಹಣ ವಿಮೆ ತುಂಬಿದ ಒಬ್ಬ ರೈತನಿಗೆ ದೊರೆತರೆ ಅದೇ ಪಕ್ಕದ ಗ್ರಾಮದ ರೈತರಿಗೆ ಮಾವು ವಿಮೆ ಸಿಗುತ್ತಿಲ್ಲ ಎಂಬ ದೂರಿದೆ. ಈ ಕುರಿತು ಸಮರ್ಪಕ ಅಧ್ಯಯನವಾಗಬೇಕು. ಉತ್ತರ ಕರ್ನಾಟಕ ವಿಶೇಷವಾಗಿ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟ, ಗದಗ ಜಿಲ್ಲೆಗಳಲ್ಲಿ ರೈತರ ಆತ್ಮಹತ್ಯೆಗಳು ಹೆಚ್ಚುತ್ತಿವೆ ಎಂಬ ವರದಿ ಇದೆ. ಸರ್ಕಾರ ಮತ್ತು ಜಿಲ್ಲಾಡಳಿತಗಳು ವಿವಿಧ ಇಲಾಖೆಗಳ ಮೂಲಕ ರೈತರಿಗೆ ಅಗತ್ಯ ತಿಳುವಳಿಕೆ, ಸಹಾಯ, ಪರಿಹಾರಗಳನ್ನು ನೀಡಲಾಗುತ್ತಿದೆ. ಆದರೂ ಯಾವ ಕಾರಣಕ್ಕಾಗಿ ಮತ್ತು ಸಾಮಾಜಿಕ, ಆರ್ಥಿಕ, ಇತರ ಕಾರಣಗಳ ಕುರಿತು ವೈಜ್ಞಾನಿಕ ಅಧ್ಯಯನವಾಗಬೇಕು. ಅನೇಕ ರೈತರು ಜಮೀನುಗಳಲ್ಲಿ ಬಿತ್ತಿದ ಬೀಜಗಳು ಮೊಳಕೆ ಒಡೆಯುತ್ತಿಲ್ಲ, ಇದಕ್ಕೆ ಪರಿಹಾರ ನೀಡುವಂತೆ ಕೋರುತ್ತಾರೆ. ಇಂತಹ ಸಂದರ್ಭಗಳಲ್ಲಿ ಸರ್ಕಾರದ ನೀತಿ ಯಾವ ರೀತಿ ಇರಬೇಕೆಂಬುವುದರ ಬಗ್ಗೆ ಹಿರಿಯ ವಿಜ್ಞಾನಿಗಳಿಂದ ಅಧ್ಯಯನವಾಗಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಧಾರವಾಡ | ಎಲ್‌ಇಡಿ ಬೀದಿದೀಪ ಯೋಜನೆಗೆ ಎಚ್‌ಡಿಎಂಸಿ ಅನುಮೋದನೆ

ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಪಿ.ಎಲ್. ಪಾಟೀಲ ಮಾತನಾಡಿ, “ಕೃಷಿ ಮೇಳವನ್ನು ಸೆಪ್ಟೆಂಬರ್ 13 ರಿಂದ 16 ರವರೆಗೆ ಆಯೋಜಿಸಲಾಗಿದೆ. ಈ ವರ್ಷದ ಕೃಷಿ ಮೇಳವು ಆಹಾರದ ಪೋಷಕಾಂಶಗಳು ಮತ್ತು ಮಣ್ಣಿನ ಬಗ್ಗೆ ಹಾಗೂ ತಳಿಗಳ ಬಗ್ಗೆ ಕೃಷಿ ಸಂಸ್ಕರಣೆ ಎಂಬ ವಿಷಯದ ಮೇಲೆ ಕೇಂದ್ರೀಕರಿಸಲಿದೆ. ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ಮಾರುಕಟ್ಟೆ ಅವಕಾಶಗಳ ಬಗ್ಗೆ ರೈತರಿಗೆ ಸಮಗ್ರ ಮಾಹಿತಿ ನೀಡಲಾಗುವುದು. ಆಧುನಿಕ ಕೃಷಿ ಉಪಕರಣಗಳ ಪ್ರದರ್ಶನ, ನೂತನ ಬೀಜಗಳ ಪರಿಚಯ, ಸಾವಯವ ಕೃಷಿ ಪದ್ಧತಿಗಳು ಮತ್ತು ಜಲಸಂಪನ್ಮೂಲಗಳ ಸಮರ್ಪಕ ಬಳಕೆ ಕುರಿತು ತಜ್ಞರಿಂದ ಮಾಹಿತಿ ನೀಡಲಾಗುವುದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...