ಧಾರವಾಡ | ಹಾಲು, ವಿದ್ಯುತ್ ದರ ಏರಿಕೆ: ತಕ್ಷಣ ಹಿಂಪಡೆಯಲು ಒತ್ತಾಯ

Date:

ರಾಜ್ಯದಲ್ಲಿ ಶಾಸಕರಿಗೆ, ಸಚಿವರಿಗೆ ವೇತನ ಹೆಚ್ಚಳದ ಸಿಹಿಯನ್ನು ನೀಡಿ, ಜನರಿಗೆ ಮತ್ತೆ ಹಾಲಿನ ದರ ಮತ್ತು ವಿದ್ಯುತ್ ದರ ಏರಿಸಿ ಕಹಿಯನ್ನು ಉಣಬಡಿಸಿರುವ ಸರ್ಕಾರದ ನೀತಿಯನ್ನು ಖಂಡಿಸಿ ಧಾರವಾಡದ ವಿವೇಕಾನಂದ ವೃತ್ತದಲ್ಲಿ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ ಜಡಗಣ್ಣವರ ಮಾತನಾಡಿ, ಹೈನುಗಾರರ ಉತ್ಪಾದನಾ ವೆಚ್ಚ ಹೆಚ್ಚಾಗಿದೆ ಎಂಬುದು ನಿಜವೇ. ಇದನ್ನು ಕಡಿಮೆ ಮಾಡಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಪಶು ಆಹಾರ, ಮೇವು, ಪಶು ವೈದ್ಯಕೀಯ ವೆಚ್ಚ ಮೊದಲಾದ ಹೈನುಗಾರಿಕೆಯ ಒಳಸುರಿಗಳ ವೆಚ್ಚವನ್ನು ಸರ್ಕಾರ ಕಡಿತ ಮಾಡಬೇಕಿತ್ತು; ಬದಲಿಗೆ ಪ್ರತಿಬಾರಿಯೂ ವೆಚ್ಚದ ಹೊರೆಯನ್ನು ಸಾಮಾನ್ಯ ಗ್ರಾಹಕರ ಮೇಲೆ ಹೇರುವುದು ಜನಪರ ಸರ್ಕಾರದ ನೀತಿಯೇ ಎಂದು ಪ್ರಶ್ನಿಸಿದರು.

ಇನ್ನು ವಿದ್ಯುತ್ ದರವನ್ನು ಮತ್ತೆ ಪರಿಷ್ಕರಣೆ ಮಾಡಲಾಗಿದೆ. ಸಧ್ಯಕ್ಕೆ ಗೃಹಜ್ಯೋತಿ ಯೋಜನೆಯ ಕಾರಣಕ್ಕೆ ಇದರಿಂದ ಬಹುಪಾಲು ಗೃಹ ಬಳಕೆದಾರರಿಗೆ ಸಮಸ್ಯೆ ಆಗದೇ ಇರಬಹುದು. ಆದರೆ ವಾಣಿಜ್ಯ ಮತ್ತು ಸಣ್ಣ ಕೈಗಾರಿಕೆಗಳಿಗೆ ಇದು ವಿದ್ಯುತ್ ದುಬಾರಿ ಮತ್ತು ಅಂತಿಮವಾಗಿ ಉತ್ಪನ್ನಗಳ ದರ ಹೆಚ್ಚಳ ಮಾಡಿ ಇದರಿಂದ ಬಡ, ಮಧ್ಯಮ ವರ್ಗದ ಜನರ ಮೇಲೆಯೇ ಹೊರೆ ಬೀಳಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಎಂಎಫ್ ಮತ್ತು ವಿದ್ಯುತ್ ಕಂಪನಿಗಳ ದಕ್ಷತೆಯನ್ನು ಹೆಚ್ಚಿಸಿ, ಸೋರಿಕೆ, ಭ್ರಷ್ಟಾಚಾರ, ದುಂದುವೆಚ್ಚ ನಿಯಂತ್ರಣ ಮಾಡುವ ಕಡೆಗೆ ಸರ್ಕಾರ ಗಮನ ಹರಿಸದೇ ಇರುವುದು ಖಂಡನೀಯ. ಅಷ್ಟೇ ಅಲ್ಲದೆ ರಾಜ್ಯದಲ್ಲಿ ಸರ್ಕಾರಿ ನೌಕರಿಗೆ ಹಾಗೂ ಇತರ ಕಾರ್ಮಿಕರಿಗೆ ವೇತನ ಹೆಚ್ಚಳ ಮಾಡದೇ, ಕೇವಲ ಸಚಿವರು, ಶಾಸಕರ ವೇತನವನ್ನು ಶೇಕಡ 100 ರಷ್ಟು ಹೆಚ್ಚಳ ಮಾಡಿ ಅದರ ಹೊರೆಯನ್ನು ಬಡ, ಮಧ್ಯಮ ವರ್ಗದ ಜನಗಳ ಮೇಲೆ ಹೇರಿರುವುದನ್ನು ಒಪ್ಪಲು ಸಾಧ್ಯವಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಬೆಲೆ ಏರಿಕೆ ಒಂದು ಪ್ರಮುಖ ಅಸ್ತ್ರವಾಗಿತ್ತು ಎಂಬುದನ್ನು ಕಾಂಗ್ರೆಸ್ ಪಕ್ಷ ಮರೆತಿದೆ. ಜನತೆ ಇದನ್ನು ಒಪ್ಪುವುದಿಲ್ಲ ಎಂಬುದನ್ನು ಅರಿತು ಈ ದರ ಏರಿಕೆಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆ ಅಧ್ಯಕ್ಷತೆಯನ್ನು ಜಿಲ್ಲಾ ಸಮಿತಿ ಸದಸ್ಯ ದೀಪಾ ಧಾರವಾಡ ವಹಿಸಿದ್ದರು. ಈ ಸಂದರ್ಭದಲ್ಲಿ ಭವಾನಿಶಂಕರ ಗೌಡರ್, ಶರಣು ಗೋನವಾರ, ಶಶಿಕಲಾ ಮೇಟಿ, ದೇವಮ್ಮ ದೇವತಕಲ್, ರಣಜಿತ್ ದೂಪದ್, ಪ್ರೀತಿ ಸಿಂಗಾಡಿ, ಸಿಂಧು ಕೌದಿ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...