ಧಾರವಾಡ | ಬೆಣ್ಣೆಹಳ್ಳ ಸೇತುವೆ ದುರಸ್ತಿಗೆ ಮುಂದಾಗಲು ಸಚಿವ ಸಂತೋಷ್ ಲಾಡ್ ಸೂಚನೆ

Date:

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಹತ್ತಿರದ ದೊಡ್ಡಹಳ್ಳ ಹಾಗೂ ಬೆಣ್ಣೆಹಳ್ಳ ಸೇತುವೆ ಕೊಚ್ಚಿ ಹೋದದ್ದನ್ನು ವೀಕ್ಷಿಸಿದ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೂಡಲೇ ವಿಶೇಷ ತಜ್ಞರ ಜೊತೆ ಚರ್ಚಿಸಿ ಸ್ಟೀಲ್ ಬ್ರಿಡ್ಜ್ ಅಥವಾ ನೂತನ ಸೇತುವೆ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದರು.

“ಈಗಾಗಲೇ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಯವರ ಜೊತೆ ಚರ್ಚಿಸಿದ್ದು, ತಕ್ಷಣ ವರದಿ ನೀಡಿ ಸರ್ಕಾರದಿಂದ ಮಂಜೂರಾತಿ ಪಡೆಯಬೇಕು” ಎಂದು ಹೇಳಿದ ಅವರು, “ತಜ್ಞರ ಅಭಿಪ್ರಾಯದ ನಂತರ ಸೇತುವೆ ದುರಸ್ಥಿಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಬೇಕೆಂದು” ಸೂಚಿಸಿದರು.

ನವಲಗುಂದ ನಗರದ ಹುಗ್ಗಿ ಓಣಿಯ ಮನೆ ಬಿದ್ದ ತರುವಾಯ ದ್ಯಾಮವ್ವ ಬನ್ನೆಣ್ಣವರ ಹಾಗೂ ಕಳ್ಳಿಮಠ ಮೆಹಬೂಬ ನಗರದ ಮೋದಿನಸಾಬ ಶಿರಕೋಳ ಅವರುಗಳಿಗೆ ತಲಾ 25 ಸಾವಿರ ವೈಯಕ್ತಿಕ ಪರಿಹಾರ ಹಾಗೂ ಸರ್ಕಾರದಿಂದ 1 ಲಕ್ಷ 20 ಸಾವಿರ ಪರಿಹಾರ ನೀಡಲು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20250823 WA0082

ಇದನ್ನೂ ಓದಿ: ಧಾರವಾಡ | ಭಾರಿ ಮಳೆಗೆ ಪ್ರವಾಹ ಸೃಷ್ಟಿ; ನಡುಗಡ್ಡೆಯ ಮನೆಯಲ್ಲಿ ಸಿಲುಕಿಕೊಂಡಿದ್ದ ಕುಟುಂಬದ ರಕ್ಷಣೆ

ಶಲವಡಿ ನಾಯಕನೂರ ಗ್ರಾಮದ ನಡುವೆ ಜಮೀನಿನಲ್ಲಿ ಹೆಸರು ಹಾಗೂ ಈರುಳ್ಳಿ ಬೆಳೆ ಹಾನಿಯಾಗಿದ್ದನ್ನು ವೀಕ್ಷಿಸಿದರು . ಅಣ್ಣಿಗೇರಿ ತಾಲ್ಲೂಕಿನ ಶಿಶ್ವಿನಹಳ್ಳಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಮನೆ ಕುಸಿದು ಹಾನಿಯಾದ ಮನೆಗೆ ಭೇಟಿ ನೀಡಿ 25 ಸಾವಿರ ವೈಯಕ್ತಿಕ ಪರಿಹಾರ ಹಾಗೂ ಸರ್ಕಾರದಿಂದ 1 ಲಕ್ಷ 20 ಸಾವಿರ ಪರಿಹಾರ ನೀಡಲು ಕಂದಾಯ ಅಧಿಕಾರಿಗಳಿಗೆ ಹೇಳಿದರು. ಈಗಾಗಲೇ ಮನೆ ಕುಸಿತದಲ್ಲಿ ಸಿಲುಕಿದ 4 ಜನರಿಗೆ ಉಚಿತವಾಗಿ ಚಿಕಿತ್ಸೆ ನೀಡಲು ತಿಳಿಸಿದರು.ಹುಬ್ಬಳ್ಳಿ ತಾಲ್ಲೂಕಿನ ಇಂಗಳಹಳ್ಳಿ ಕ್ರಾಸ್ ಹತ್ತಿರ ಶಿರಗುಪ್ಪಿ ಗ್ರಾಮದ ನಿಂಗವ್ವ ತೊಗರಿಮನಿ ಅವರ ಹೊಲದಲ್ಲಿ ಹೆಸರು ಬೆಳೆ ಹಾನಿಯಾಗಿದ್ದನ್ನು ವೀಕ್ಷಣೆ ಮಾಡಿ ಸರ್ಕಾರಕ್ಕೆ ತಕ್ಷಣ ವರದಿ ಮಾಡಿ ಪರಿಹಾರ ಸಿಗುವಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...