ಧಾರವಾಡ | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ.ಆರ್. ಪಾಟೀಲ್ ಚಾಲನೆ

Date:

ಧಾರವಾಡ ಜಿಲ್ಲೆಯ ಕುಂದಗೋಳ ಮತಕ್ಷೇತ್ರದಲ್ಲಿಯ ಹೊಸ ಕಾಮಗಾರಿಗಳ ಆರಂಭ ಮತ್ತು ನೂತನ ಕಟ್ಟಡಗಳ ಉದ್ಘಾಟನೆಯಲ್ಲಿ ಭಾಗವಹಿಸಿ, ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಎಂ.ಆರ್. ಪಾಟೀಲ್ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ವೇಳೆ ತಾಲೂಕಿನ ರಾಯನಾಳ ಗ್ರಾಮದ ಕಲಗನಮಡ್ಡಿಯಲ್ಲಿ ಕೇಂದ್ರ ಸರ್ಕಾರದ ಎನ್‌ಟಿಪಿಸಿ, ಸಿಎಸ್‌ಆರ್ ಯೋಜನೆಯಡಿ ನಿರ್ಮಿಸಲಾದ 31.40 ಲಕ್ಷ ರೂಪಾಯಿ ವೆಚ್ಚದ 2 ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದರು. ಜೊತೆಗೆ ಗ್ರಾಮದಲ್ಲಿ ಸಿ.ಸಿ. ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು.

ಕುಂದಗೋಳ ಕ್ಷೇತ್ರದಲ್ಲಿ ಮಂಡಲಾಧ್ಯಕ್ಷ ಷಣ್ಮುಖ ಐಹೊಳೆ, ಗ್ರಾಮ ಪಂಚಾಯತ್ ಅಧ್ಯಕ್ಷ ರ.ಜಿ.ಮೇಟಿ, ಉಪಾಧ್ಯಕ್ಷ ಮಾರಡಗಿ, ಮುಖಂಡರಾದ ನಿಂಗನಗೌಡ ಮರಿಗೌಡ್ರ, ಸಹದೇವ್ ಮಲಗಿ, ಮಾಲತೇಶ್ ಶ್ಯಾಗೋಟಿ, ಟಿ.ಜಿ. ಬಾಲಣ್ಣವರ್, ಪ್ರತಾಪ್ ಪಾಟೀಲ್, ನಾಗಲಿಂಗ್ ಪೂಜಾರ್, ಶಿಕ್ಷಕರು ಹಾಗೂ ಗ್ರಾಮದ ಮುಖಂಡರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಹುಬ್ಬಳ್ಳಿ ಮಂಡಲದ ಪರಸಾಪೂರ ಗ್ರಾಮದಲ್ಲಿ ಸಂಸದರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ನಿರ್ಮಾಣವಾಗಲಿರುವ ಗ್ರಾಮದೇವಿ ದೇವಸ್ಥಾನದ ಭೂಮಿ ಪೂಜೆ ನಡೆಸಿದರು. ಈ ವೇಳೆ ಈರಣ್ಣ ಜಡಿ, ಟಿ.ಜಿ. ಬಾಲಣ್ಣವರ್, ಮಾಲತೇಶ ಶ್ಯಾಗೋಟಿ, ನಿಂಗನಗೌಡ ಮರಿಗೌಡ್ರ, ಸಹದೇವ ಮಾಳಗಿ, ನಾಗಲಿಂಗ ಪೂಜಾರ, ಪ್ರತಾಪ ಪಾಟೀಲ, ಕಲ್ಲಪ್ಪ ಮೊರಬದ, ದೇವರಗುಡಿಹಾಳ ಗ್ರಾಮ ಪಂಚಾಯತಿ ಅಧ್ಯಕ್ಷೆ ಖಾತುನಬಿ ಲಾಡಸಾಬನವರ, ರಾಯನಾಳ ಗ್ರಾ.ಪಂ. ಅಧ್ಯಕ್ಷ ರುದ್ರಪ್ಪ ಮೇಟಿ, ಸದಸ್ಯರು, ಪಕ್ಷದ ಪದಾಧಿಕಾರಿಗಳು ಹಾಗೂ ಗ್ರಾಮದ ಹಿರಿಯರು ಭಾಗವಹಿಸಿದ್ದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಕಾಮಗಾರಿ, ಕಾರ್ಯಕ್ರಮಗಳಲ್ಲಿ ಪಾರದರ್ಶಕತೆ, ಗುಣಮಟ್ಟ ಕಾಪಾಡಿ; ಪ್ರಲ್ಹಾದ ಜೋಶಿ

ಶಾಸಕ ಎಂ.ಆರ್. ಪಾಟೀಲ್ ಈ ಎಲ್ಲಾ ಅಭಿವೃದ್ಧಿ ಕಾರ್ಯಗಳ ಕುರಿತು ಮಾತನಾಡಿ, ಗ್ರಾಮಗಳ ಪ್ರಗತಿಗೆ ಎಲ್ಲರ ಸಹಕಾರ ಅಗತ್ಯ. ಈ ಯೋಜನೆಗಳು ಕ್ಷೇತ್ರದ ಜನರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸುತ್ತವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...