ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ವಿಜಯಪುರ ಜಿಲ್ಲೆಗೆ ಬರದಂತೆ ನಿರ್ಬಂಧ ಹೇರಿರುವುದನ್ನು ಖಂಡಿಸಿ ಮತ್ತು ಕನ್ನೇರಿ ಸ್ವಾಮೀಜಿಗೆ ಬೆಂಬಲವಾಗಿ ಕುಂದಗೋಳದ ಗಾಳಿ ಮರಿಯಮ್ಮ ದೇವಿ ವೃತದಿಂದ ತಹಶೀಲ್ದಾರ್ ಕಚೇರಿವರೆಗೆ ಕುಂದಗೋಳ ತಾಲೂಕು ಕಾಡಸಿದ್ದೇಶ್ವರ ಭಕ್ತ ಮಂಡಳಿ ಹಾಗೂ ಬಸವಾದಿ ಶರಣರ ಹಿಂದೂ ವೇದಿಕೆಯಿಂದ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿದ್ದರು.
ಈ ಪ್ರತಿಭಟನೆ ಮೆರವಣಿಗೆಯಲ್ಲಿ ಕುಂದಗೋಳ ಶಾಸಕ ಎಂ ಆರ್ ಪಾಟೀಲ ಭಾಗವಹಿಸಿ, ಕನ್ನೇರಿ ಸ್ವಾಮಿಗಳ ಮೇಲಿನ ನಿಷೇಧವನ್ನು ಸರ್ಕಾರ ತಕ್ಷಣ ರದ್ದುಪಡಿಸಬೇಕೆಂದು ಒತ್ತಾಯಿಸಿ, ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ವಿವಿಧ ಮಠದ ಸ್ವಾಮೀಜಿಗಳು, ಸಮಾಜದ ಮುಖಂಡರು ಹಾಗೂ ಹಿಂದೂ ಕಾರ್ಯಕರ್ತರು ಉಪಸ್ಥಿತರಿದ್ದರು.





