ಧಾರವಾಡ | ಆಧುನಿಕ ಮಹಿಳೆ ಸಾಧನೆಯ ಶಿಖರ ಮುಟ್ಟಿದ್ದಾಳೆ: ಡಾ.ರೇಖಾ ಜೋಗುಳ್

Date:

ನಗರದ ಅಂಜುಮನ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಶನಿವಾರ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಿಟಲ್ ಕಾಲೇಜಿನ ಪ್ರಾಚಾರ್ಯೆ ಡಾ.ರೇಖಾ ಜೋಗುಳ್ ಮಾತನಾಡಿ ಸಿಕ್ಕ ಅವಕಾಶ ಸದ್ಬಳಕೆಯಾಗಲಿ ಎಂದು ವಿದ್ಯಾರ್ಥಿನಿಯರಿಗೆ ಕರೆ ನೀಡಿದರು.

ಓರ್ವ ಮಹಿಳೆ ತಾಯಿ, ಅಕ್ಕ-ತಂಗಿ, ಮಡದಿಯಾಗಿ ವ್ಯಕ್ತಿಯ ಜೀವನ ಬೆಳಗುತ್ತಾಳೆ. ಹೀಗಾಗಿ ಆಕೆಗೆ ಗೌರವಿಸಬೇಕು. ಸಮಾಜದ ಕಟ್ಟುಪಾಡು ಮೀರಿ ಬೆಳೆದ ಆಧುನಿಕ ಮಹಿಳೆ ಸಾಧನೆಯ ಶಿಖರ ಮುಟ್ಟಿದ್ದಾಳೆ. ಎಲ್ಲ ರಂಗದಲ್ಲೂ ಛಾಪು ಮುಡಿಸಿದ್ದಾಳೆ ಎಂದರು.

ಪ್ರಾಚಾರ್ಯ ಡಾ.ಐ.ಎ. ಮುಲ್ಲಾ ಮಾತನಾಡಿ, ಲಿಂಗ ಸಮಾನತೆ ತೊರೆದು ಮಹಿಳೆಯರಿಗೆ ಸಮಾನ ಅವಕಾಶ ದೊರಕಿವೆ. ಮಹಿಳಾ ದಿನಾಚರಣೆ ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ, ರಾಜಕೀಯ, ಸರ್ವ ಕ್ಷೇತ್ರಗಳ ಮಹಿಳೆಯರಿಗೆ ಸಮರ್ಪಿತವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾರಂಭದಲ್ಲಿ ವಿದ್ಯಾರ್ಥಿನಿಯರು ದೇಶದ ವಿವಿಧ ಗಣ್ಯ ಮಹಿಳಾ ಪ್ರತಿನಿಧಿಗಳ ಛದ್ಮ ವೇಷ ತೊಟ್ಟು ಪ್ರದರ್ಶಿಸಿದರು. ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ಡಾ. ಎಸ್.ಎಸ್.ಅದೋನಿ, ಡಾ. ಎನ್.ಬಿ.ನಾಲತವಾಡ, ಡಾ.ಆಸಮಾ ನಾಜ್ ಬಳ್ಳಾರಿ, ಡಾ.ಸೈಯದ್ ತಾಜುನೀಸಾ ಸ್ವಾಗತಿಸಿದರು, ಬಾನುಬಿ ನದಾಫ್ ಪರಿಚಯಿಸಿದರು. ಡಾ. ಬಿಬಿ ಆಯಿಶಾ ಚಕೋಲಿ, ಶ್ವೇತಾ ವರ್ಚಗಿ, ಎಸ್. ಕೆ.ಜಾದವ ನಿರೂಪಿಸಿದರು. ಕು.ದಫೇದಾರ ವಂದಿಸಿದರು.

ಇದೆ ಸಂದರ್ಭದಲ್ಲಿ ಮಲಬಾರ ಗೋಲ್ಡ್ ವತಿಯಿಂದ ಲಕ್ಕಿ ಡ್ರಾ ಮೂಲಕ ಮೂವರು ವಿದ್ಯಾರ್ಥಿಗಳಿಗೆ 10, 05 ಹಾಗು 03 ಗ್ರಾಮ್ ಬೆಳ್ಳಿಯ ನಾಣ್ಯವನ್ನು ನೀಡಿ ಕೇಕ್ ಕತ್ತರಿಸಿದರು. ಕಾರ್ಯಕ್ರಮದಲ್ಲಿ ಮಲಬಾರ ಗೋಲ್ಡ್’ನ ಧಾರವಾಡ ಶಾಖೆಯ ಇರಫಾನ ಬಳ್ಳಾರಿ, ನಿಯಾಜ್ ಚೌದರಿ, ಆಯಿಶಾ ರಸಿಸವಾಲೆ ಹಾಗು ಅಂಬಿಕಾ ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...