ಧಾರವಾಡ | ದಾಸೋಹದ ಮೂಲಕ ಮುರುಘಾಮಠ ಪ್ರಸಿದ್ಧಿಯಾಗಿದೆ: ಅರವಿಂದ ಬೆಲ್ಲದ

Date:

ಅನ್ನ ದಾಸೋಹ, ಜ್ಞಾನ ದಾಸೋಹ, ಅಕ್ಷರ ದಾಸೋಹದ ಮೂಲಕ‌ ಧಾರವಾಡ ಮುರುಘಾಮಠವು ಉತ್ತರ ಕರ್ನಾಟಕದ ವಿದ್ಯಾರ್ಥಿಗಳಿಗೆ ಆಸರೆಯಾಗಿದ್ದು, ಇಡೀ ಕರ್ನಾಟಕದಲ್ಲಿ ದಾಸೋಹದ ಮೂಲಕ ಪ್ರಸಿದ್ಧಿ ಪಡೆದಿದೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.

ಮುರುಘಾಮಠದ ಜಾತ್ರಾ ಮಹೋತ್ಸವ ಅಂಗವಾಗಿ ಮಠಕ್ಕೆ ಭೇಟಿ ನೀಡಿದ ಅವರು ಮಾತನಾಡುತ್ತ, ಮಠದಲ್ಲಿ ಸಮಯಕ್ಕೆ ತಕ್ಕಂತೆ ಬದಲಾಗಬೇಕಿದ್ದ ಕೆಲವು ವ್ಯವಸ್ಥೆಗಳು ಬದಲಾಗಬೇಕಿದೆ. ಮಠದ ಮೂಲಕ‌ ಇನ್ನೂ ದೊಡ್ಡ ಪ್ರಮಾಣದಲ್ಲಿ‌ ಜ್ಞಾನಾರ್ಜನೆ ಮತ್ತು ದಾಸೋಹ ಕಾರ್ಯ ಮುಂದುವರೆಯಲಿ ಎಂಬುದು ಎಲ್ಲರ ಅಭಿಲಾಷೆಯಾಗಿದ್ದು, ಆ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಸ್ವಾಮೀಜಿ ಮಠವನ್ನು ಇನ್ನೂ ಉಚ್ಛ್ರಾಯ ಸ್ಥಿತಿಗೆ ತಲುಪಿಸುವಲ್ಲಿ ಮುಂದಾಗಬೇಕಿದೆ ಎಂದರು.

ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಮಾತನಾಡಿ, ಮುರುಘಾಠಕ್ಕೆ ಒಂದು ಒಳ್ಳೆಯ ಇತಿಹಾಸವಿದೆ. ಈ ಇತಿಹಾಸವನ್ನು‌ ಮುಂದುವರೆಸುವ ಕಾರ್ಯ ಹೆಚ್ಚಾಗಲಿ. ಇವತ್ತು ಬಹುತೇಕರು ದೇಶದ ಉನ್ನತ ಸ್ಥಾನದಲ್ಲಿ ಇದ್ದಾರೆಂದರೆ; ಅದು ಮುರುಘಾಮಠವೇ ಕಾರಣವಾಗಿದೆ. ನಾನು‌ ಶ್ರೀಮಠಕ್ಕೆ ಬಂದರೆ ಸಾಮಾನ್ಯ ಭಕ್ತನಾಗಿ ಬರುತ್ತೇನೆಯೇ ಹೊರತು ರಾಜಕೀಯ ವ್ಯಕ್ತಿಯಾಗಿ ಬರುವುದಿಲ್ಲ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ? ಧಾರವಾಡ | ಪಿಂಜಾರ ಸಮುದಾಯ ಆರ್ಥಿಕವಾಗಿ ಹಿಂದುಳಿದಿದೆ: ಡಾ. ಟಿ ಟಿ ಬಸನಗೌಡರ

ಈ ಸಂದರ್ಭದಲ್ಲಿ ಪತ್ರಕರ್ತರನ್ನು ಸನ್ಮಾನಿಸಿದರು. ಹೊನವಾಡದ ಸಂಚಾರಿ ಶರಣ ಬಾಬು ಮಹಾರಾಜರು ಉಪನ್ಯಾಸ ನೀಡಿದರು. ನಿಡಸೋಸಿ‌ಮಠದ ಪಂಚಮ‌ ಶಿವಲಿಂಗೇಶ್ವರ ಸ್ವಾಮೀಜಿ ಪಾವನಸಾನಿದ್ಯ ವಹಿಸಿದ್ದರು. ದುರುದಂಡೇಶ್ವರ ಮಠದ ನೀಲಕಂಠ ಸ್ವಾಮೀಜಿ ಸಾನಿದಗಯ ವಹಿಸಿದ್ದರು. ದೊಡ್ಡಹುಣಸೆಮಠದ ಚನ್ನಬಸವ ಸ್ವಾಮೀಜಿ, ಫಲಹಾರೇಶ್ವರ ಮಠದ ಶಿವಮೂರ್ತಿ ಸ್ವಾಮೀಜಿ ಸಮ್ಮುಖದಲ್ಲಿದ್ದರು. ಗಡಹಿಂಗ್ಲಜ ಮಠದ ಮಹಾಂತ ಸಿದ್ದೇಶ್ವರ ಸ್ವಾಮೀಜಿ ಗುರುವಂದನೆ ಸ್ವೀಕರಿಸಿದರು. ಮಠದ ಭಕ್ತರು, ವಿದ್ಯಾರ್ಥಿಗಳು ಇದ್ದರು. ಪ್ರಾಚಾರ್ಯ ಎಮ್ ಎಸ್ ಗಾಣಿಗೇರ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...