ಧಾರವಾಡದ ಮುಸಲ್ಮಾನರು ಸ್ವಾತಂತ್ರ್ಯಕ್ಕಾಗಿ ಬಲಿದಾನವಾಗಿದ್ದಾರೆ: ಮಹದೇವ ಹೊರಟ್ಟಿ

Date:

ಡಾ. ಎಪಿಜೆ ಅಬ್ದುಲ್ ಕಲಾಂ ಸಂಘಟನೆ ಆಶ್ರಯದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಧಾರವಾಡದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಕಾರ್ಯಕ್ರಮವನ್ನು ಬಸವಶಾಂತಿ ಮಿಷನ್ ನ ಅಧ್ಯಕ್ಷ ಮಹದೇವ ಹೊರಟ್ಟಿ ನಡೆಸಿಕೊಟ್ಟರು.

ಬಸವಶಾಂತಿ ಮಿಷನ್ ಅಧ್ಯಕ್ಷ ಮಹದೇವ ಹೊರಟ್ಟಿ ಮಾತನಾಡಿ, ಡಾ. ಎಪಿಜೆ ಅಬ್ದುಲ್ ಕಲಾಂ ಅವರಂತ ರಾಷ್ಟ್ರಪ್ರೇಮಿಗಳು ಮತ್ತೆ ಸಿಗುವುದು ಕಷ್ಟ. ರಾಧಾಕೃಷ್ಣನ್, ಜಾಕಿರ್ ಹುಸೇನ್, ಅಬ್ದುಲ್ ಕಲಾಂ ಈ ಮೂವರು ಒಳ್ಳೆಯ ರಾಷ್ಟ್ರಪತಿಗಳು. ಧಾರವಾಡದ ಮುಸಲ್ಮಾನರು ಗೋಲಿಬಾರಿನಲ್ಲಿ ಬಲಿದಾನ ಆಗಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಧಾರವಾಡದ ಕೊಡುಗೆ ಅಪಾರವಾಗಿದೆ. ಇಲ್ಲಿನ ಮುಸಲ್ಮಾನರು ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಎಂದರು. ಇಡೀ ಜಗತ್ತಿನಲ್ಲಿಯೇ ಅತಿಹೆಚ್ಚು ಅಪಘಾತ, ಬಾಲಾಪರಾಧ, ಅತ್ಯಾಚಾರ ಭಾರತದಲ್ಲಿ ಆಗುತ್ತವೆ. ಬಹುತೇಕ ಸಂಘಟನೆಗಳು ಕ್ರೂರಿಗಳ ಕೈಯಲ್ಲಿರುವುದು ದುರಂತ. ಇವತ್ತಿಗೂ ಹಳ್ಳಿಗಳಲ್ಲಿ ಅಸ್ಪೃಶ್ಯತೆ ಆಚರಣೆಯಲ್ಲಿದೆ. ನಾವೆಲ್ಲ ಹೊಸ ದೇಶ ಕಟ್ಟಲು ಧಾರವಾಡ ದಾರಿಯಾಗಬೇಕು. ದೇಶಕಟ್ಟುವ ಕೆಲಸ ಟಿಪ್ಪು ಸುಲ್ತಾನ್ ವೃತ್ತದಿಂದಲೇ ಪ್ರಾರಂಭವಾಗಲಿ ಎಂದರು.

ಧ್ವಜಾರೋಹಣದ ನಂತರ ಸಾಹಿತಿ ರಂಜಾನ್ ದರ್ಗಾ ಮಾತನಾಡಿ, ಭಾರತೀಯರಿಗೆ ರಾಜಕೀಯವಾಗಿ ನ್ಯಾಯ ಸಿಕ್ಕಿದೆಯೇ ಹೊರತು ಆರ್ಥಿಕ ಮತ್ತು ಸಾಮಾಜಿಕ ನ್ಯಾಯ ಸಿಕ್ಕಿಲ್ಲ. ಒಂದು ವೇಳೆ ಈ ನ್ಯಾಯ ಸಿಗದಿದ್ದರೆ ತುಳಿತಕ್ಕೆ ಒಳಗಾದ ಜನರು ಪ್ರಜಾಪ್ರಭುತ್ವವನ್ನೇ ಬುಡಮೇಲೆ ಮಾಡಬಹುದು ಎಂದು ಅಂಬೇಡ್ಕರ್ ಎಚ್ಚರಿಸಿದ್ದರು. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಬಡತನ, ಅಸ್ಪೃಶ್ಯತೆ, ಜಾತಿಯತೆ ನಿರ್ಮೂಲನೆ ಆಗಿಲ್ಲ. ಕೋಮು ಸಂಘರ್ಷ ಮತ್ತು ಧ್ವೇಷ ಸಂಸ್ಕೃತಿ ಬೆಳೆಸುವ ದಿನಗಳು ಬಂದವು. ನಮ್ಮ‌ ದೇಶ ಸಮೃದ್ಧಿಯಿಂದ ಬೆಳೆಯಬೇಕು ಅಂದರೆ ನಾವು ಮೊದಲು ಮತ್ತು ಕೊನೆಗು ಭಾರತೀಯರಾಗಬೇಕು. ನಮ್ಮ‌ ಧರ್ಮಗಳನ್ನು ನಮ್ಮ‌ಮನೆಗಳಲ್ಲಿ ಆಚರಿಸೋಣ. ಆಚೇಗೆ ನಾವೆಲ್ಲ ಭಾರತೀಯರು ಎಂಬ ಅರಿವು ನಮ್ಮಲ್ಲಿರಬೇಕು. ನಮಗೆ ಪ್ರಜಾಪ್ರಭುತ್ವ ದೇವರು‌ಮತ್ತು ಸಂವಿಧಾನವೇ ಧರ್ಮಗ್ರಂಥವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ಕರ್ನಾಟಕ ಹೋರಾಟ‌ ಸಮಿತಿಯ ಲಕ್ಷ್ಮಣ ಬಕ್ಕಾಯಿ ಮಾತನಾಡಿ, ಈ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸಬ್ ಕಾ ಸಾತ್, ಸಬ್ ಕಾ ವಿಕಾಸ ಎಂದು ಹೇಳುತ್ತಾರೆ. ಆದರೆ ನಮ್ಮ ದೇಶದ 80% ಜನರು ವಿದೇಶದಲ್ಲಿ ದುಡಿಯುತ್ತಿದ್ದಾರೆ. ಈ ದೇಶದಲ್ಲಿ ದಮನಿತರು, ನೊಂದವರು, ತುಳಿತಕ್ಕೊಳದವರಿಗೆ ವಾಸಮಾಡಲು ಒಂದು ಮನೆ ಸಹಿತ ಇಲ್ಲದಂತಾಗಿದೆ. ಭಾರತ ಬಡತನದತ್ತ ಮುಖಮಾಡಿರುವಾಗ ನೀವು ಹೇಗೆ ವಿಶ್ವಗುರುವಾಗುತ್ತೀರಿ? ಪ್ರಧಾನಿಗಳೇ ಎಂದು ಗುಡುಗಿದರು.

ಈ ಸಂದರ್ಭದಲ್ಲಿ ಮಾಜಿ ಸೈನಿಕರು, ಹಬೀಬ್, ಮಹಮ್ಮದ್ಅಲಿ ಗುಡೂಭಾಯಿ, ಮಹಿಳೆಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...