ಧಾರವಾಡ | ದ್ಯಾಮವ್ವ, ದುರ್ಗವ್ವರ ಮೂರ್ತಿ ಹೊತ್ತು ಭಾವೈಕ್ಯತೆ ಮೆರೆದ ಮುಸ್ಲಿಮರು

Date:

ಜಿಲ್ಲೆಯ ಅಳ್ನಾವರ ತಾಲೂಕಿನ ಡೋರಿ ಗ್ರಾಮದಲ್ಲಿ ಪ್ರಥಮ ಬಾರಿ ನಡೆಯುತ್ತಿರುವ ಗ್ರಾಮದೇವಿ ದ್ಯಾಮವ್ವ ಹಾಗೂ ದುರ್ಗವ್ವ ಜಾತ್ರೆಯ ಹೊನ್ನಾಟದ ಕೊನೆಯ ದಿನ; ಗುರುವಾರ, ಹಿಂದೂ ಭಕ್ತರೊಡಗೂಡಿ ಮುಸಲ್ಮಾನರೂ ದೇವಿಯರನ್ನು ಹೆಗಲ ಮೇಲೆ ಹೊತ್ತು ಹೊನ್ನಾಟವಾಡಿ ಭಾವೈಕ್ಯತೆ ಮೆರೆದಿದ್ದಾರೆ.

ಬಿಳಿ ಶುಭ್ರ ಬಟ್ಟೆ ತೊಟ್ಟ ಮುಸ್ಲಿಮರು ತಲೆಗೆ ಬಿಳಿ ಟೋಪಿ ಧರಿಸಿ ಹೊನ್ನಾಟದ ಓಕುಳಿಯಲ್ಲಿ ಮಿಂದೆದ್ದರು. ಇದರಲ್ಲಿ ಮುಸ್ಲಿಂ ಮಹಿಳೆಯರೂ ಪಾಲ್ಗೊಂಡಿದ್ದರು. ಹಿಂದೂಗಳು ಜಾತ್ರೆಗಾಗಿ ಮಾಡುವ ಎಲ್ಲ ಸಂಪ್ರದಾಯ, ಪದ್ಧತಿಗಳನ್ನು ಚಾಚೂ ತಪ್ಪದೆ ಮುಸ್ಲಿಮರೂ ಪಾಲಿಸಿದ್ದಾರೆ. ದೇವಿಗೆ ಉಡಿ ತುಂಬಿ ಮಂಗಳಾರತಿ ಆದ ನಂತರ ಮುಸ್ಲಿಂ ಸಂಪ್ರದಾಯದಂತೆ ಕಲಮಾ ಪಠಣ ಮಾಡಿದರು.

ಇದನ್ನು ಓದಿದ್ದೀರಾ? ಧಾರವಾಡ | ವಿದ್ಯಾವರ್ಧಕ ಸಂಘಕ್ಕೆ ರಾಜಕೀಯ ವ್ಯಕ್ತಿಗಳ ಪ್ರವೇಶ ಬೇಡ; ಸಾಹಿತಿಗಳೇ ಅಧ್ಯಕ್ಷರಾಗಲಿ: ರಾಯರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾತ್ರಾ ಸಂದರ್ಭದಲ್ಲಿ ಮುಸಲ್ಮಾನರು ಮಸೀದಿಗೆ ಬಣ್ಣ ಹಚ್ಚುತ್ತಾರೆ. ಮತ್ತು ತಮ್ಮ ಬಂಧು ಬಳಗವನ್ನು ಜಾತ್ರೆಗೆ ಆಹ್ವಾನಿಸುತ್ತಾರೆ. ಹೊನ್ನಾಟದ ವೇಳೆ ಗ್ರಾಮದ ಜುಮ್ಮಾ ಮಸೀದಿ ಎದುರು 200ಕ್ಕೂ ಹೆಚ್ಚು ಮುಸ್ಲಿಮರು ಜಮಾಯಿಸಿದ್ದರು. ನಂತರ ದೇವಿಯರ ಹೊತ್ತು ಗ್ರಾಮದ ಮುಖ್ಯ ಬೀದಿಯಲ್ಲಿ ಡೊಳ್ಳು ಬಾರಿಸುತ್ತ, ದೇವಿಯ ಉಡಿ ತುಂಬುವ ಸಾಮಗ್ರಿ ತೆಗೆದುಕೊಂಡು ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ತೆರಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...