ಧಾರವಾಡ | ಅನ್ಯಾಯ, ಅತ್ಯಾಚಾರದ ವಿರುದ್ಧ ಧ್ವನಿ ಎತ್ತುವ ಅಗತ್ಯವಿದೆ: ಅಕ್ಷತಾ ಕೆ ಸಿ

Date:

ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅನ್ಯಾಯ, ಅತ್ಯಾಚಾರವನ್ನು ನಾವು ಖಂಡಿಸಬೇಕಿದೆ ಎಂದು ಸಾಮಾಜಿಕ, ರಾಜಕೀಯ, ಮಾನವ ಹಕ್ಕುಗಳ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಹೋರಾಟಗಾರ್ತಿ ಅಕ್ಷತಾ ಕೆ ಸಿ ಹೇಳಿದರು.

ಧಾರವಾಡದ ನವನಗರದ ಚನ್ನಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ವಿಶೇಷ ಉಪನ್ಯಾಸ ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಬಾಬಾಸಾಹೇಬ್ ಅಂಬೇಡ್ಕರ್ ಅವರು ಮಹಿಳೆಯರ ಪರವಾಗಿ ಹೋರಾಡಿದ ವ್ಯಕ್ತಿ. ಆದರೆ, ಮಹಿಳೆಯರಿಗೆ ಇನ್ನೂ ಆರ್ಥಿಕ, ಸಾಂಸ್ಕೃತಿಕ, ರಾಜಕೀಯ, ಸಾಮಾಜಿಕ ನ್ಯಾಯ ಸಿಗದೇ ಇರುವುದು ವಿಷಾದನೀಯ. ಇಂದಿಗೂ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅನ್ಯಾಯ, ಅತ್ಯಾಚಾರವನ್ನು ಖಂಡಿಸಬೇಕಿದೆ. ನಮ್ಮ ದೇಶದ ಮಹಿಳೆಯರಿಗೆ ಸಂವಿಧಾನದ ಆಶಯಗಳನ್ನು ಜಾರಿಗೆ ತರಲು ನಾವೆಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು” ಎಂದು ಕರೆ ನೀಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಡಾ. ಚಂದ್ರಶೇಖರ ಕಂಬಾರ ದತ್ತಿ, ನಾಗಮ್ಮ ಈರಪ್ಪ ಅಳಗುಂಡಗಿ ದತ್ತಿ, ದತ್ತಾತ್ರೇಯ ಕೃಷ್ಣಾಜಿ ಕುಲಕರ್ಣಿ ದತ್ತಿ ಹಾಗೂ ಶಾಂತಾ ರಾಮಚಂದ್ರ ನಾಡಗೇರ ದತ್ತಿ, ಅಕ್ಷತಾ ಕೆ ಸಿ ಅವರು ಲಿಂಗ ತಾರತಮ್ಯ ಹಾಗೂ ಸಮಾಜದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾ. ಲಿಂಗರಾಜ ಅಂಗಡಿ, ʼಮಹಿಳಾ ಪರ ಸಂಘಟನೆಗಳು ಮಹಿಳಾ ಜಾಗೃತಿಗಾಗಿ ಇನ್ನೂ ಹೆಚ್ಚಿನ ಕಾರ್ಯಕ್ರಮ ಹಮ್ಮಿಕೊಳ್ಳಬೇಕುʼ ಎಂದರು. ಮಹಾನಗರ ಪಾಲಿಕೆಯ ಮಾಜಿ ಸದಸ್ಯೆ ಉಮಾ ಚಂದ್ರಶೇಖರ ಅಳಗುಂಡಗಿ ದಿ. ವಿ ಐ ಅಳಗುಂಡಗಿಯವರ ಹೆಸರಿನಲ್ಲಿ 25000 (ಇಪ್ಪತೈದು ಸಾವಿರ) ದತ್ತಿ ನಿಧಿ ಸ್ಥಾಪನೆ ಮಾಡಲು ಹೇಳಿದರು. ಬಳಿಕ ಅಕ್ಷತಾ ಕೆ ಸಿ ಅವರನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ: ಧಾರವಾಡ | ಕೊಳತೆ ಸ್ಥಿತಿಯಲ್ಲಿ ಮೃತ ದೇಹ ಪತ್ತೆ ಪ್ರಕರಣ: ಆರೋಪಿಗಳಿಬ್ಬರ ಬಂಧನ

ಕಾರ್ಯಕ್ರಮದಲ್ಲಿ ಚನ್ನಬಸವೇಶ್ವರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಆರ್ ಎಸ್ ಹೊಸೂರ, ಪ್ರೊ. ಕೆ ಎಸ್ ಕೌಜಲಗಿ, ಪ್ರೊ.ಪರಶುರಾಮ ಕೆಂಗಾರ, ಎಸ್ ಕೆ ಆದಪ್ಪನವರ, ಆರ್ ಟಿ ಅಣ್ಣಿಗೇರಿ, ಶಾಂತಾ ನಾಡಿಗೇರ, ಮಂಜುಳಾ ದತ್ತಾತ್ರೇಯ ಕುಲಕರ್ಣಿ, ಪದ್ಮಜಾ ಉಮರ್ಜಿ, ಸಂಧ್ಯಾ ದಿಕ್ಷೀತ, ಚನ್ನಬಸಪ್ಪ ಧಾರವಾಡ ಶೆಟ್ಟರ್, ಕೆ ಎಸ್ ಕಬ್ಬೂರ, ಸೋಮಶೇಖರ್ ಇಟಗಿ, ಸುಮಂಗಲಾ ಅಂಗಡಿ, ಜಯಶ್ರೀ ಧಾರವಾಡ ಶೆಟ್ಟರ್,‌ ಎಸ್ ಎಸ್ ಕರಡಿ, ಕು.ನೇತ್ರಾವತಿ ಕುರುಬರ, ಕು.ಗಂಗಮ್ಮ ಶ್ಯಾಗೋಟಿ, ಚನ್ನಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಸಿಬ್ಬಂದಿ ಹಾಗೂ ಪ್ರಶಿಕ್ಷಣಾರ್ಥಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...