ಧಾರವಾಡ | ಬಜೆಟ್‌ನಲ್ಲಿ ಕೃಷಿ ಕ್ಷೇತ್ರ, ರೈತರ ನಿರ್ಲಕ್ಷ ಖಂಡನೀಯ: ಎಐಕೆಕೆಎಂಎಸ್

Date:

ಆದಾಯದ ಕುಸಿತದಿಂದ ನೆಲಕಚ್ಚಿರುವ ಎಪಿಎಂಸಿಗಳಿಗೆ ಮರುಜೀವ ತುಂಬಲು ಬಜೆಟ್‌ನಲ್ಲಿ ಯಾವುದೇ ಯೋಜನೆಯನ್ನು ಘೋಷಣೆ ಮಾಡದಿರುವುದು ಮತ್ತು ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮತ್ತು ಗೋಹತ್ಯೆ ನಿಷೇಧ ಕಾಯಿದೆಗಳನ್ನು ಹಿಂಪಡೆಯದಿರುವುದು ರಾಜ್ಯದ ರೈತರಿಗೆ ನಿರಾಶೆ ಮೂಡಿಸಿದೆ ಎಂದು ಎಐಕೆಕೆಎಂಎಸ್‌ ಕರ್ನಾಟಕ ರಾಜ್ಯ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.

ಈ ಕುರಿತು ಪ್ರಕರಣ ನೀಡಿರುವ ಎಐಕೆಕೆಎಂಎಸ್‌ ಧಾರವಾಡ ಜಿಲ್ಲಾಅಧ್ಯಕ್ಷೆ ದೀಪಾ ಧಾರವಾಡ, ಜಿಲ್ಲಾ ಕಾರ್ಯದರ್ಶಿ ಶರಣು ಗೋನವಾರ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತ ವಿರೋಧಿ ಮೂರು ಕರಾಳ ಕೃಷಿ ಕಾಯ್ದೆಗಳಲ್ಲಿ ಒಂದಾದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆದಿರುವುದು ಸ್ವಾಗತಾರ್ಹ ಎಂದಿದ್ದಾರೆ.

ಪ್ರಸ್ತುತ ವರ್ಷ ಮುಂಗಾರು ಮಳೆ ವಿಳಂಬದಿಂದ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಬರದ ವಾತಾವರಣವಿದೆ. ರೈತರು ಇದರಿಂದ ಬಹಳಷ್ಟು ನಷ್ಟ ಅನುಭವಿಸಿದ್ದಾರೆ. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಸರ್ಕಾರ ರೈತರ ಬೆನ್ನಿಗೆ ನಿಂತು ಅವರ ಆದಾಯವನ್ನು ಹೆಚ್ಚಿಸಲು ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡಬೇಕಾಗಿತ್ತು. ಒಟ್ಟಾರೆ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಕೃಷಿ ಮತ್ತು ತೋಟಗಾರಿಕಾ ವಲಯಕ್ಕೆ ಅನುದಾನ ಕಡಿತಗೊಳಿಸಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಬ್ಬರಿ, ಹತ್ತಿ, ತೊಗರಿ ಮುಂತಾದ ಬೆಳೆಗಳ ಬೆಲೆ ಪಾತಾಳಕ್ಕೆ ಕುಸಿದಿದೆ. ಆದರೆ ರೈತರ ಎಲ್ಲ ಉತ್ಪನ್ನಗಳನ್ನು ಖರೀದಿಸಲು ವಿನಿಯೋಗಿಸಬೇಕಾದ ಆವರ್ತ ನಿಧಿಯನ್ನು ಹೆಚ್ಚಿಸಲು ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ. ಕೃಷಿ ಉತ್ಪನ್ನಗಳಿಗೆ ಖಚಿತ ಮತ್ತು ನಿಶ್ಚಿತವಾದ ಬೆಲೆ ನಿಗದಿಪಡಿಸುವ ಮಾರುಕಟ್ಟೆ ನೀತಿಯನ್ನು ಪ್ರಕಟಿಸಿಲ್ಲ ಎಂದು ಆರೋಪಿಸಿದ್ದಾರೆ.

ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರಿಗೆ ಬೆಂಬಲ ಬೆಲೆಗಳನ್ನು ನೀಡುವುದರ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ ಹಾಗೂ ರೈತರ ಉತ್ಪನ್ನಗಳನ್ನು ಖರೀದಿ ಮಾಡಲು ಮಾಡಿರುವ ಬೋರ್ಡ್‌ಗಳನ್ನು ಅಭಿವೃದ್ಧಿಪಡಿಸಿ ರೈತರ ಉತ್ಪನ್ನಗಳನ್ನು ಖರೀದಿಸಲು ಬೇಕಾದ ಅನುದಾನವನ್ನು ನೀಡಿಲ್ಲ. ರೈತರನ್ನು ಇನ್ನಷ್ಟು ಸಾಲಗಾರರನ್ನಾಗಿ ಮಾಡಲು ಬಡ್ಡಿ ರಹಿತ ಸಾಲದ ಪ್ರಮಾಣವನ್ನು ಮಾತ್ರ ಏರಿಕೆ ಮಾಡಲಾಗಿದೆ. ಸಾಲದ ಸುಳಿಯಲ್ಲಿ ಸಿಲುಕಿ ಕಂಗಾಲಾಗಿರುವ ರೈತರನ್ನೂ ಋಣ ಮುಕ್ತ ಮಾಡುವ  ಸಾಲ ಮನ್ನಾದ ವಿಚಾರ ಪ್ರಸ್ತಾಪವಾಗದಿರುವುದು ವಿಷಾದನೀಯ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರಾಗಿ ಖರೀದಿ ಕೇಂದ್ರದಲ್ಲಿ ಅವ್ಯವಹಾರ ಆರೋಪ; ಸಮಗ್ರ ತನಿಖೆಗೆ ಆದೇಶ

ರಾಜ್ಯದಲ್ಲಿ ಸುಮಾರು 12 ಲಕ್ಷಕ್ಕಿಂತ ಹೆಚ್ಚು ರೈತರು ಸುಮಾರು 80-90 ವರ್ಷಗಳಿಂದ ಬಗರ್ ಹುಕುಂ ಸಾಗುವಳಿ ಮಾಡುತ್ತಿದ್ದಾರೆ. ಹಲವು ದಶಕಗಳಿಂದ ಉಳುಮೆ ಮಾಡುತ್ತಿರುವ ಭೂಮಿಯ ಹಕ್ಕು ಪತ್ರಕ್ಕಾಗಿ ನಿರಂತರವಾಗಿ  ಹೋರಾಟ ಮಾಡುತ್ತಿದ್ದಾರೆ. ಈ ರೈತರಿಗೆ  ಹಕ್ಕುಪತ್ರ ನೀಡುವ ಯಾವುದೇ ವಿಚಾರ ಬಜೆಟ್‌ನಲ್ಲಿ ಪ್ರಸ್ತಾಪವಾಗದಿರುವುದು ನೋವಿನ ವಿಷಯ. ಒಟ್ಟಾರೆಯಾಗಿ ಈ ಬಜೆಟ್‌ನಲ್ಲಿ ಕೃಷಿ ಕ್ಷೇತ್ರದ ಮತ್ತು ರೈತರ ನಿರ್ಲಕ್ಷ ಖಂಡನೀಯ. ಹಲವು ಸಂಕಷ್ಟಗಳಿಂದ ಬಳಲುತ್ತಿರುವ ರೈತ ಸಮುದಾಯದ ಬೆಂಬಲಕ್ಕೆ ಈಗಲಾದರೂ ಸರ್ಕಾರ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...