ಧಾರವಾಡ | ಅಧಿಕಾರಿಗಳ ನಿರ್ಲಕ್ಷ್ಯ: ಕೆಟ್ಟಿರುವ ಸ್ಥಿತಿಯಲ್ಲೇ ಬಾಕಿಯಾದ ಶುದ್ಧ ಕುಡಿಯುವ ನೀರಿನ ಘಟಕ

Date:

ಧಾರವಾಡ ತಾಲೂಕಿನ ಮನಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಕಳೆದ 6 ತಿಂಗಳಿಂದ ದುರಸ್ತಿಗೆ ಬಂದಿದ್ದು, ನೀರು ಬಾರದೆ ಬಂದ್ ಆಗಿದೆ. ಗ್ರಾಮದಲ್ಲಿ ಒಟ್ಟು ಎರಡು ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಬಸ್ ನಿಲ್ದಾಣದ ಪಕ್ಕದಲ್ಲಿರುವ ನೀರಿನ ಘಟಕವು ಬಂದ್ ಆಗಿ ಸ್ಥಳೀಯರಿಗೆ ಸಮಸ್ಯೆ ಉಂಟಾಗಿದೆ. ಹಾಗೆಯೇ ಗ್ರಾಮದಲ್ಲಿ ಹೇಳಿಕೊಳ್ಳುವಷ್ಟು ಏನೂ ಅಭಿವೃದ್ದಿ ಇನ್ನೂ ಆಗಿಲ್ಲ. ಇದಕ್ಕೆಲ್ಲ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂಬ ದೂರುಗಳು ಕೇಳಿಬಂದಿದೆ.

ಧಾರವಾಡ ಜಿಲ್ಲೆಯಲ್ಲಿ ಒಟ್ಟು 467 ಕುಡಿಯುವ ನೀರಿನ ಘಟಕಗಳಿವೆ. ಅವುಗಳಲ್ಲಿ 111 ಕ್ಕೂ ಹೆಚ್ಚು ನೀರಿನ ಘಟಕಗಳು ಬಂದ್ ಆಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಈ ಸಮಸ್ಯೆಗಳು ಕ್ರಮೇಣ ಹೆಚ್ಚಾಗಿವೆ. ಧಾರವಾಡ ತಾಲೂಕಿನಲ್ಲೇ ಒಟ್ಟು 103 ನೀರಿನ ಘಟಕಗಳಿವೆ. ಅದೆಷ್ಟೋ ಘಟಕಗಳು ಕದ ಮುಚ್ಚಿದ್ದು, ಅದರಲ್ಲಿ ಮನಸೂರು ಗ್ರಾಮದ ನೀರಿನ ಘಟಕವೂ ಒಂದಾಗಿದೆ.

ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್‌ಗಳ ನಿರ್ಲಕ್ಷ್ಯವೇ ಇದ್ದಕ್ಕೆಲ್ಲ‌ ಕಾರಣವಾಗಿದೆ. ಆದ್ಧರಿಂದ ಸರ್ಕಾರ ಪ್ರತಿ ಗ್ರಾಮ ಪಂಚಾಯಿತಿಗೂ ಒಬ್ಬ ಖಾಯಂ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್ ಅನ್ನು ನೇಮಿಸಬೇಕು ಎಂದು ಪಂಚಾಯತ್ ಸಿಬ್ಬಂದಿಗಳು ಒತ್ತಾಯಿಸುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20241005 WA1863

ಧಾರವಾಡ ನಗರದಿಂದ 8 ಕಿ.ಮೀ ದೂರದಲ್ಲಿರುವ ಮನಸೂರು ಗ್ರಾಮವು, ಸಂಗೀತ ಕ್ಷೇತ್ರದ ದಿಗ್ಗಜ ಮಲ್ಲಿಕಾರ್ಜುನ‌ ಮನಸೂರು ಅವರ ಹುಟ್ಟೂರು. ಆದರೆ ಅವರ ಗುರುತು ಹೇಳಿಕೊಳ್ಳುವ ಯಾವುದೇ ಅಭಿವೃದ್ಧಿ ಕಾರ್ಯಯೂ ಈ ಗ್ರಾಮದಲ್ಲಿ ನಡೆದಿಲ್ಲ. ಗ್ರಾಮಸ್ಥರಲ್ಲಿ ಪರಸ್ಪರ ಹೊಂದಾಣಿಕೆ ಇಲ್ಲದಿರುವುದೇ ಇದಕ್ಕೆ ಕಾರಣ ಎನ್ನುತ್ತಾರೆ ಕೆಲವರು.

ಸದ್ಯ ಹಾಲಿ ಪಂಚಾಯತ್ ಉಪಾಧ್ಯಕ್ಷರ ಓಣಿಯಲ್ಲಿಯೇ ರಸ್ತೆ ಕೆಟ್ಟಿದ್ದು, ಈ ಕುರಿತು ಗ್ರಾಮದ ಅಭಿವೃದ್ಧಿಗೆ ಕ್ರಿಯಾ ಯೋಜನೆ ಆಗಿದ್ದರೂ, ಅನುಷ್ಠಾನಗೊಂಡಿಲ್ಲ. ಪಂಚಾಯತಿಯಲ್ಲಿ ಅಧ್ಯಕ್ಷೆ ಕೂಡ ಗ್ರಾಮದ ಅಭಿವೃದ್ಧಿಯ ವಿಚಾರದಲ್ಲಿ ಏನೂ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಗ್ರಾಮದ ಶುದ್ಧ ನೀರಿನ ಘಟಕ ಕೆಟ್ಟು 6 ತಿಂಗಳುಗಳೇ ಕಳೆದಿವೆ. ಸಂಬಂಧಪಟ್ಟ ಎಂಜಿನಿಯರ್ ಈ ಬಗ್ಗೆ ಇಂದಿಗೂ ತಲೆಕೆಡಿಸಿಕೊಂಡಿಲ್ಲ. ಫಿಲ್ಟರ್ ಮಷೀನಿನ ಸುತ್ತಲೂ ವಿದ್ಯುತ್ ಆವರಿಸಿಕೊಂಡಿದ್ದು, ಯಾರೂ ಒಳಗೆ ಹೋಗದ ವಾತಾವರಣ ಸೃಷ್ಟಿಯಾಗಿದೆ. ಚಿಕ್ಕ ಮಕ್ಕಳನ್ನು ಅತೀ ಜಾಗರೂಕತೆಯಿಂದ ಸ್ಥಳೀಯರು ನೋಡಿಕೊಳ್ಳುವ ಅನಿವಾರ್ಯತೆ ಬಂದಿದೆ. ಆದಷ್ಟು ಬೇಗ ರಿಪೇರಿ ಮಾಡಿಸಿ, ಸ್ಥಳಿಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮ ಪಂಚಾಯತ್ ಹಿರಿಯ ಸದಸ್ಯ ನಿಂಗಪ್ಪ ಯಲ್ಲಪ್ಪ ತೇಗೂರ್ ಹೇಳುತ್ತಾರೆ.

ಇದನ್ನು ಓದಿದ್ದೀರಾ? ಪ್ಯಾಲೆಸ್ತೀನ್ ಜನರಿಗಾಗಿ ಒಗ್ಗೂಡಿದ ಬೆಂಗಳೂರಿನ ಜನ

ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿಯ ಬೇಜವಾಬ್ದಾರಿತನದಿಂದ ಈ ನೀರಿನ ಘಟಕ ಬಂದ್ ಆಗಿದೆ. ಸರಕಾರದ ಆಸ್ತಿ ಎಂದರೆ ಹೀಗೆಯೋ, ಏನೋ ಗೊತ್ತಾಗುತ್ತಿಲ್ಲ. ಸಾರ್ವಜನಿಕರಿಗೂ ಸದುಪಯೋಗ ಆಗುವುದಿಲ್ಲ ಎಂದರೆ, ಅಂತಹ ಯೋಜನೆಯನ್ನಾದರೂ ಜಾರಿ ಮಾಡುವುದೇಕೆ? ಈ ಮೊದಲು ರಿಪೇರಿ ಬಂದಾಗ, ಕಡಿಮೆ ಬೆಲೆಯ ಮೆಮರಿನ್ ಮೆಷಿನ್ ಹಾಕಿಸಿರುವ ಕಾರಣ, ಅದು ಹೆಚ್ಚು ಕಾಲ‌ ಬಳಕೆಗೆ ಬರಲಿಲ್ಲ. ಅದಕ್ಕೇ ಹೊಸ ಬಿಲ್ ತೆಗೆದು ಅಧಿಕಾರಿಗಳು ಭ್ರಷ್ಟಾಚಾರ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಜಿಲ್ಲೆಯ ಎಲ್ಲ ಕಡೆಗೆ ಕೆಟ್ಟು ನಿಂತಿರುವ ನೀರಿನ ಘಟಕಗಳನ್ನು ರಿಪೇರಿ ಮಾಡಿಸಿ, ಅಧಿಕಾರಿಗಳು ಸಾರ್ವಜನಿಕರಿಗೆ ಅನುಕೂಲ ಮಾಡುತ್ತಾರೆಯೇ? ಕಾದುನೋಡಬೇಕಿದೆ.

WhatsApp Image 2024 09 06 at 11.32.31 a95e9ba6
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...