ಧಾರವಾಡ | ನೂತನ ನಗರ ಸಾರಿಗೆ ಬಸ್ ನಿಲ್ದಾಣ ಕಾಮಗಾರಿ; ತಾತ್ಕಾಲಿಕ ಮಾರ್ಗ ಬದಲಾವಣೆ

Date:

ಧಾರವಾಡದ ನೂತನ ನಗರ ಸಾರಿಗೆ ಬಸ್ ನಿಲ್ದಾಣ ನಿರ್ಮಾಣದ ಕಾಮಗಾರಿ ಪ್ರಯುಕ್ತ ಫೆಬ್ರವರಿ 14, (ಬುಧವಾರ)ರಿಂದ ಸಿಬಿಟಯಿಂದ ಸಂಚರಿಸುವ ನಗರ ಸಾರಿಗೆ ಬಸ್ಸುಗಳನ್ನು ತಾತ್ಕಾಲಿಕವಾಗ ಎಲ್.ಇ.ಎ ಕ್ಯಾಂಟೀನ್ ಹಾಗೂ ಕಿಟೆಲ್ ಕಾಲೇಜು ಹಿಂಭಾಗಕ್ಕೆ ಸ್ಥಳಾಂತರಿಸಲಾಗುತ್ತದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ, ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ನಗರದ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಈಗ ಇರುವ ಸಿಬಿಟಿ ಸ್ಥಳದಲ್ಲಿ ಸುಸಜ್ಜಿತ ನೂತನ ನಗರ ಸಾರಿಗೆ ಬಸ್ ನಿಲ್ದಾಣ ನಿರ್ಮಾಣದ ಕಾಮಗಾರಿ ಆರಂಭಿಸಲಾಗುತ್ತಿದೆ. ಅದಕ್ಕಾಗಿ ಸಿಬಿಟಿಯನ್ನು ತೆರವುಗೊಳಿಸಬೇಕಾಗಿರುತ್ತದೆ. ಆದ್ದರಿಂದ ಸಿಬಿಟಿಯಿಂದ ಬಸ್ಸುಗಳ ಸಂಚಾರವನ್ನು ಬುಧವಾರದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ.

ಸಾರಿಗೆ ಸಂಸ್ಥೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಜಂಟಿ ಸ್ಥಳ ಸಮೀಕ್ಷೆ ಮಾಡಿ ತಾತ್ಕಾಲಿಕ ಸ್ಥಳಗಳನ್ನು ಗುರುತಿಸಲಾಗಿದೆ. ಅದರಂತೆ ಪ್ರಸ್ತುತ ಸಿಬಿಟಿಯಿಂದ ಸಂಚರಿಸುವ ಬಸ್ಸುಗಳನ್ನು ಬುಧವಾರ ಬೆಳಿಗ್ಗೆಯಿಂದ ತಾತ್ಕಾಲಿಕವಾಗಿ ಎಲ್.ಇ.ಎ ಕ್ಯಾಂಟೀನ್ ಹತ್ತಿರ ಹಾಗೂ ಕಿಟೆಲ್ ಕಾಲೇಜು ಹಿಂಭಾಗದ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

WhatsApp Image 2024 02 12 at 07.06.46

ಎಲ್.ಇ.ಎ. ಕ್ಯಾಂಟೀನ್‌ನಿಂದ ಹೊರಡುವ ಬಸ್ ಮಾರ್ಗ

ಎತ್ತಿನ ಗುಡ್ಡ, ಕೃಷಿ ವಿಶ್ವವಿದ್ಯಾಲಯ, ಪಾವಟೆ ನಗರ, ಬನಶ್ರೀ ನಗರ, ಕೆಂಗೇರಿ ಆಂಜನೇಯ ನಗರ, ಗುರು ನಗರ, ನ್ಯೂ ಬಾಯ್ಸ್ ಹಾಸ್ಟೆಲ್, ಚೈತನ್ಯ ನಗರ, ವಿನಾಯಕ ನಗರ, ಸಾಯಿ ನಗರ, ಶಿವಗಿರಿ, ಸಂಪಿಗೆ ನಗರ, ರಾಧಾಕೃಷ್ಣ ನಗರ, ಜೆ.ಎಸ್.ಎಸ್. ಸ್ಕೂಲ್, ಬೇಂದ್ರೆ ನಗರ, ಹೈಕೋರ್ಟ್, ಕಾಯಕ ನಗರ, ಶಿರಡಿ ನಗರ ಹಾಗೂ ಐ.ಐ.ಟಿ.

ಕಿಟೆಲ್ ಕಾಲೇಜು ಹಿಂಭಾಗದಿಂದ ಹೊರಡುವ ಬಸ್ ಮಾರ್ಗಗಳು

ಧಾರವಾಡ ರೈಲು ನಿಲ್ದಾಣ, ಜೋಗ ಯಲ್ಲಾಪುರ, ರಾಜೀವ ಗಾಂಧಿ ನಗರ, ಸಂಗೊಳ್ಳಿ ರಾಯಣ್ಣ ನಗರ, ಮಂಜುನಾಥ ಕಾಲೋನಿ, ಚಿನ್ಮಯ ಕಾಲೋನಿ, ಲೋಹಿಯ ನಗರ, ತೇಜಸ್ವಿನಿ ನಗರ, ಸರಸ್ವತಿ ಪುರ, ಸೋಮೇಶ್ವರ ದೇವಸ್ಥಾನ, ಶ್ರೀರಾಮನಗರ, ಕಲ್ಯಾಣನಗರ, ಹನುಮಂತ ನಗರ, ಜಾದವ ನಗರ, ಗಾಮನಗಟ್ಟಿ, ನವಲೂರು, ತಡಸಿನ ಕೊಪ್ಪ, ಉದಯಗಿರಿ, ವನಶ್ರೀ ನಗರ.

ಮದಿಹಾಳ, ಮಾಳಾಪುರ ಹಾಗೂ ಮೆಹಬೂಬ ನಗರ ಕಡೆಗೆ ಹೋಗುವ ಬಸ್ಸುಗಳ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಮಾಸಿಕ ರಿಯಾಯಿತಿ ಪಾಸುಗಳು

ನಗರ ಸಾರಿಗೆ ಹಾಗೂ ಉಪನಗರ ಸಾರಿಗೆ ಬಸ್ಸುಗಳ ಮಾಸಿಕ ರಿಯಾಯಿತಿ ಪಾಸುಗಳ ವಿತರಣೆಗೆ ಧಾರವಾಡ ಹಳೆ ಬಸ್ ನಿಲ್ದಾಣದಲ್ಲಿರುವ ಪಾಸ್ ವಿತರಣೆ ಕೌಂಟರ್‌ಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕ ಪ್ರಯಾಣಿಕರು ಸಂಸ್ಥೆಯೊಂದಿಗೆ ಸಹಕರಿಸುವಂತೆ ಹು-ಧಾ ನಗರ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...