ಧಾರವಾಡ | ಅಲೆಮಾರಿಗಳ ಕಲಾಪ್ರಕಾರಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಬೇಕಿದೆ: ಡಾ. ಎಸ್ ಬಾಲಾಜಿ

Date:

ಬುಡಕಟ್ಟು ಪ್ರದರ್ಶನ ಕಲೆಗಳು ಇತ್ತೀಚಿನ ದಿನಗಳಲ್ಲಿ ಅಳಿವಿನಂಚಿನಲ್ಲಿದ್ದು, ಅಲೆಮಾರಿಗಳು ಹಾಗೂ ಬುಡಕಟ್ಟು ಸಮುದಾಯದವರಿಗೆ ಪ್ರೋತ್ಸಾಹ ಮತ್ತು ತರಬೇತಿ ನೀಡುವ ಮೂಲಕ ಅವರ ಸಂಪ್ರದಾಯ ಮತ್ತು ಕಲಾಪ್ರಕಾರಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ಕಾರ್ಯವಾಗಬೇಕಿದೆ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಹಾಗೂ ಭಾರತ ಸರ್ಕಾರದ ಐಸಿಸಿಆರ್ ಸದಸ್ಯ ಡಾ. ಎಸ್. ಬಾಲಾಜಿ ಹುಬ್ಬಳ್ಳಿ ತಾಲೂಕಿನ ನೂಲ್ವಿ ರೇಣುಕಾಚಾರ್ಯ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಸಭಾಂಗಣದಲ್ಲಿ ಕನ್ನಡ ಜಾನಪದ ಪರಿಷತ್ ತಾಲೂಕು ಘಟಕ ಏರ್ಪಡಿಸಿದ್ದ ವಿಶ್ವ ಬುಡಕಟ್ಟು ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮನೆದೇವರ ಪರಿಕಲ್ಪನೆ ಹುಟ್ಟಿದ್ದು ಜಾನಪದರಿಂದ, ಬಸವಾದಿ ಶರಣರು ಹಾಗೂ ವಚನಕಾರರು ಮನೆದೇವರ ಸಾಂಪ್ರದಾಯವನ್ನು ಮುಂದುವರಿಸಿಕೊಂಡು ಬಂದರು, ಬುಡಕಟ್ಟು ಸಮುದಾಯದವರಿಗೆ ಪಾರಂಪರಿಕ ಜ್ಞಾನ ಇರುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಿವಾನಂದ ಬೆಂತೂರ ಮಾತನಾಡಿ, ಬುಡಕಟ್ಟು ಸಮುದಾಯದಲ್ಲಿ ಸಾಮರಸ್ಯ ಹಾಗೂ ಐಕ್ಯತೆಯ ಭಾವನೆಗಳು ಹೆಚ್ಚಾಗಿರುತ್ತದೆ, ಅವರಿಂದ ಒಗ್ಗೂಡಿಸಿಕೊಂಡು ಬದುಕುವುದನ್ನು ಕಲಿಯಬಹುದು ಎಂದರು. ಕನ್ನಡ ಜಾನಪದ ಪರಿಷತ್ ರಾಜ್ಯ ಕಾರ್ಯದರ್ಶಿ ಪ್ರೊ‌. ಕೆ ಎಸ್ ಕೌಜಲಗಿ ಪ್ರಾಸ್ತಾವಿಕವಾಗಿ ಮಾತನಾಡಿ, ಬುಡಕಟ್ಟು ಸಮುದಾಯದ ಮೂಲ ಜನಪದ ಸಾಹಿತ್ಯ ಎಂಬುದನ್ನು ಅರಿಯಬೇಕು. ಕಾಲೇಜಿನ ಪ್ರಾಚಾರ್ಯ ಜಿ ಹೆಚ್ ಕಟ್ಟಿ ಮಾತನಾಡಿ, ಮುಂದಿನ ಪೀಳಿಗೆ ಬುಡಕಟ್ಟು ಸಮುದಾಯಗಳ ಸಾಂಸ್ಕೃತಿಕ ವೈಭವ ಪರಿಚಯ ಮಾಡಬೇಕೆಂದರೆ ಅವರನ್ನು ಮುಖ್ಯವಾಹಿನಿಗೆ ತರುವ ಕಾರ್ಯ ಮಾಡಬೇಕಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯಾಧ್ಯಕ್ಷ ಮುತ್ತಣ್ಣ ಎಸ್ ಶಿವಳ್ಳಿ, ಜನಪದ ಕಲಾವಿದ ಪ್ರಶಾಂತ್ ತಡಸೂರ, ಗ್ರಾಮ ಪಂಚಾಯತಿ ಸದಸ್ಯ ದೇವನಗೌಡ ಮಾ ಧರ್ಮಗೌಡ, ಕಾರವೆ ಹುಬ್ಬಳ್ಳಿ ತಾಲೂಕ ಅಧ್ಯಕ್ಷ ಗಂಗನಗೌಡ ಶಿ ನರಗುಂದ ಕಾಲೇಜಿನ ಉಪನ್ಯಾಸಕರಾದ ಜಿ ಬಿ ತಾಶಿಲ್ದಾರ್, ಎಸ್ ಎಸ್ ಹಿರೇಗೌಡ್ರು, ಎಂ ಎಂ ಹಾದಿಮನಿ, ಕೆ ಎಂ ಮಲ್ಲಿಕಾರ್ಜುನಯ್ಯ, ಎಚ್ ಡಿ ಗುಂಡಪ್ಪಲ್ಲಿ, ಧಾರವಾಡ ಜಿಲ್ಲಾ ಕನ್ನಡ ಜಾನಪದ ಪರಿಷತ್ ಪ್ರಧಾನ ಕಾರ್ಯದರ್ಶಿ ಎಂ ಸದಾನಂದ, ಕಲಘಟಗಿ ತಾಲೂಕ ಅಧ್ಯಕ್ಷ ನಿಂಗಪ್ಪ ದೊಡ್ಡ ಪೂಜಾರ್, ಕಲಾವಿದ ಪ್ರಶಾಂತ್ ಎಮ್ ತಡಿಸನ್, ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ನಿರಂತರ ಸುರಿದ ಮಳೆಗೆ ಬೆಳೆಹಾನಿ: ಕಟಾವಿಗೆ ಬಂದ ಫಸಲು ಕೈತಪ್ಪಿದ್ದನ್ನು ಕಂಡ ರೈತರು ತಲ್ಲಣ

ತಾಲೂಕ ಅಧ್ಯಕ್ಷ ಈಶ್ವರಪ್ಪ ಹೊಳಮ್ಮನವರ್ ಸ್ವಾಗತಿಸಿ, ವಂದಿಸಿದರು. ಕಾರ್ಯದರ್ಶಿ ಸಂತೋಷ್ ಕುಮಾರ್ ಬಡಿಗೇರ ನಿರೂಪಿಸಿದರು. ಮಂಜುನಾಥ ಐ ಕೆ, ನಿರ್ವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...