ಧಾರವಾಡ | ಕೆಲಸದಲ್ಲಿ ಬದ್ಧತೆ ಹೊಂದಿರುವ ಅಧಿಕಾರಿಗಳು ಇಲಾಖೆಯ ಆಸ್ತಿ: ಭುವನೇಶ್ ಪಾಟೀಲ

Date:

ಅನುಭವಿ, ಪ್ರಾಮಾಣಿಕ ಮತ್ತು ಕೆಲಸದಲ್ಲಿ ಬದ್ಧತೆ ಹೊಂದಿರುವ ಅಧಿಕಾರಿಗಳು ಇಲಾಖೆಯ ಆಸ್ತಿಯಾಗಿರುತ್ತಾರೆ ಎಂದು ಧಾರವಾಡ ಜಿಲ್ಲಾ ಪಂಚಾಯತ್‌ನಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಬಿ ಎಸ್ ಮೂಗನೂರಮಠ ಅವರದ್ದು ಯುವ ಅಧಿಕಾರಿ, ನೌಕರರಿಗೆ ಮಾದರಿ ಆಗಿರುವ ವ್ಯಕ್ತಿತ್ವ. ಕೆಲಸದಲ್ಲಿನ ಅವರ ಪ್ರಾಮಾಣಿಕತೆ, ಬದ್ಧತೆ ಮತ್ತು ತ್ವರಿತತೆಗಳು ಅವರನ್ನು ಮೇಲ್ಮಟ್ಟಕ್ಕೆ ಏರಿಸಿವೆ. ಅವರ ಡಿಎಸ್ ಅವಧಿಯಲ್ಲಿ ಜಿಲ್ಲಾ ಪಂಚಾಯತ್ ಉತ್ತಮ ಸಾಧನೆ ಮಾಡಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಭುವನೇಶ್ ಪಾಟೀಲ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಸೇವಾ ನಿವೃತ್ತಿ ಹೊಂದಿದ ಜಿ ಪಂ ಉಪ ಕಾರ್ಯದರ್ಶಿ ಬಿ ಎಸ್ ಮೂಗನೂರಮಠ ಬಿಳ್ಕೋಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಉಪಕಾರ್ಯದರ್ಶಿಗಳಾಗಿ ಮೇಲಿನ ಅಧಿಕಾರಿಗಳಿಗೆ ಸೂಕ್ತ ಸಲಹೆ ಮತ್ತು ಕೆಳಗಿನ ಅಧಿಕಾರಿಗಳಿಗೆ ಮಾರ್ಗದರ್ಶನ ಮಾಡುವ ಸಾಮರ್ಥ್ಯ ಹೊಂದಿರಬೇಕು. ಅಂತಹ ಶಕ್ತಿ, ಮೂಗನೂರಮಠರಿಗಿತ್ತು. ಸರ್ಕಾರಿ ಸೇವೆ ದೇವರ ಕೆಲಸ ಎಂಬುದು ಮಾತಿಗಾಗಿ, ತೋರಿಕೆಗಾಗಿ ಇರಬಾರದು. ಅದನ್ನು ಅಂತರಾಳದಲ್ಲಿ ಅನುಭವಿಸಿ, ಬಾಹ್ಯವಾಗಿ ಪ್ರಕಟಿಸಬೇಕು. ನೌಕರಿ ಬರೀ ನೌಕರಿ ಅಗಿದ್ದರೆ ಅದರಲ್ಲಿ ಒಂದು ರೀತಿಯ ಜಡತ್ವ ಬರುತ್ತದೆ. ಕರ್ತವ್ಯದಲ್ಲಿ ಖುಷಿ, ಆಸಕ್ತಿ, ಪ್ರಾಮಾಣಿಕತೆ, ಬದ್ಧತೆ, ನಮ್ಮತನ, ನಮ್ಮದು ಎಂಬ ಭಾವನೆಗಳಿದ್ದರೆ ಅದು ಸೇವೆ ರೂಪದಲ್ಲಿ ಬದಲಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿ ಎಸ್ ಮೂಗನೂರಮಠ ಅವರು ಗೌರವ ಅಭಿನಂದನೆ ಸ್ವೀಕರಿಸಿ ಮಾತನಾಡಿ, “ನನಗೆ ಕೆಲಸದ ಸಂತೃಪ್ತಿ ಇದೆ. ಜನರ ಜತೆ ನೇರವಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ನನ್ನ ಪೂರ್ವ ಜನ್ಮದ ಪುಣ್ಯದಿಂದ, ಹಿರಿಯರ ಆಶಿರ್ವಾದದಿಂದ ಈ ಇಲಾಖೆಯಲ್ಲಿ ನೌಕರಿ ಲಭಿಸಿದೆ. ಗ್ರಾಮೀಣ ಜನರ ಸೇವೆ ಮಾಡುವ ಸೌಭಾಗ್ಯ ನನ್ನದಾಗಿದೆ. ಈ ಅವಕಾಶಕ್ಕಾಗಿ ಚಿರಋಣಿ ಆಗಿದ್ದೇನೆ” ಎಂದು ಭಾವುಕರಾದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ತುಳು ಅಕಾಡೆಮಿಯಿಂದ ದಾಖಲೀಕರಣ ಘಟಕ ರೂಪಿಸುವ ಯೋಜನೆಯ ಅಗತ್ಯವಿದೆ: ಡಾ. ವೈ ಎನ್ ಶೆಟ್ಟಿ

“ಮನೆ ಮತ್ತು ಕಚೇರಿ ಎರಡೂ ಒಂದಾಗಬಾರದು. ಮನೆ ಬೇರೆ ಕೆಲಸ ಬೇರೆ ಎಂದು ತಿಳಿದು ನಡೆದರೆ ಎರಡೂ ಕಡೆ ನೆಮ್ಮದಿ, ಸಂತೋಷ ಇರುತ್ತದೆ. ಆದರೆ ನಾವು ಇಂದಿನ ಇಲಾಖಾ ಕಾರ್ಯವೈಖರಿಯಲ್ಲಿ ಕೆಲಸಮಾಡುವಲ್ಲಿ ಮನೆ ಮತ್ತು ಕಚೇರಿ ಎರಡೂ ಕೂಡ ಒಂದೇ ಆಗುತ್ತಿವೆ. ಇದರಿಂದ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದನ್ನು ಬೇರ್ಪಡಿಸಿಕೊಂಡು ಬದಕುವ ಕಲೆಯನ್ನು ನಾವು ಕಲಿಯಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...