ಧಾರವಾಡ | ಅಡೆತಡೆಗಳನ್ನು ಎದುರಿಸಿದಾಗಲೇ ಜಯಶಾಲಿ ಆಗಲು ಸಾಧ್ಯ: ಎನ್.ಶಶಿಕುಮಾರ್

Date:

ಪರಿಶ್ರಮವಿಲ್ಲದೇ ಸಾಧನೆ ಮಾಡಲು ಸಾಧ್ಯವಿಲ್ಲ. ಸತತ ಪ್ರಯತ್ನದಿಂದ ಯಶಸ್ಸು ಸಾಧ್ಯ ಜೀವನದಲ್ಲಿ ಅಡೆತಡೆಗಳನ್ನು ಎದುರಿಸಿದಾಗ ಮಾತ್ರ ಜಯಶಾಲಿ ಆಗುತ್ತೇವೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ನಗರದ ಅಂಜುಮನ ಪದವಿ ಮಹಾವಿದ್ಯಾಲಯದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಮಾಡಿ ಮಾತನಾಡಿದರು.

ತಂದೆ-ತಾಯಿ, ಸಂಸ್ಥೆಗೆ ಮತ್ತು ಸಮಾಜಕ್ಕೆ ನಾವು ಋಣಿಯಾಗಿರಬೇಕು ಎಂದು ಹೇಳುತ್ತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಕೆ ಹಾಗೂ ಅವರ ವಿದ್ಯಾಭ್ಯಾಸದ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಭೂಮಿಯ ಮೇಲೆ ಎಲ್ಲರೂ ಸಮಾನರು. ಅಧ್ಯಯನಕ್ಕೆ ಯಾವ ಕುಂಟುನೆಪ ಹೇಳಬೇಡಿ. ನಿಮ್ಮ ಹಿಂದೆ ಅಂಜುಮನ್ ಇಸ್ಲಾಂ ಸಂಸ್ಥೆ ಇದೆ. ಎಲ್ಲ ವಿದ್ಯಾರ್ಥಿಗಳು ಚೆನ್ನಾಗಿ ಅಧ್ಯಯನ ಮಾಡಿ ಸಂಸ್ಥೆಗೆ ಮತ್ತು ಸಮಾಜಕ್ಕೆ ಕೀರ್ತಿ ತರಬೇಕು ಎಂದು ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕು. ನಾಜನಿನ ತಮಟಗಾರ ಸಾಧನೆ ಗುರಿತಿಸಿ, ಮಹಾವಿದ್ಯಾಲಯದಿಂದ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ಡಾ.ಎನ್. ಎಮ್. ಮಕಾನದಾರ ಸ್ವಾಗತಿಸಿದರು. ಡಾ. ರುದ್ರೇಶ ಮೇಟಿ ವಂದನಾರ್ಪಣೆ ಮಾಡಿದರು. ಪ್ರೋ.ಆಸ್ಕಾ ನದಾಫ ಮತ್ತು ಡಾ. ಸೈಯದ ತಾಜುನಿಸ್ಸಾ ನಿರೂಪಿಸಿದರು.

ಈ ವರದಿ ಓದಿದ್ದೀರಾ? ವಿಜಯಪುರ | ವಿಶೇಷಚೇತನರು ಕೀಳರಿಮೆ ತೊರೆದು ಮುಖ್ಯವಾಹಿನಿಗೆ ಬರಬೇಕು: ನ್ಯಾ. ಹರೀಶ್ ಜಾಧವ್

ಕಾರ್ಯಕ್ರಮದಲ್ಲಿ ಅಂಜುಮನ ಇಸ್ಲಾಂ ಸಂಸ್ಥೆ ಪಧಾದಿಕಾರಿಗಳಾದ ಬಶೀರ ಆಹ್ವದ ಜಾಗೀರದಾರ, ಡಾ. ಸರಗಿರೊ, ಮಹಮ್ಮದ ರಫೀಕ ಶಿರಹಟ್ಟಿ, ಕಲೀಲ್ ಅಹ್ಮದ ದಾಸನಕೊಪ್ಪ, ಕೈರುದ್ದಿನ ಶೇಖ, ರಿಯಾಜಅಹ್ಮದ ನನ್ನೆಸಾಬನವರ, ಡಾ.ಎನ್. ಬಿ.ನಾಲತವಾಡ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...