ಧಾರವಾಡ ಶಹರದ ವಿವಿಧ ಬಡಾವಣೆಗಳ ರಸ್ತೆ ಬದಿ ಹಾಗೂ ವಿವಿಧ ಕಚೇರಿ ಆವರಣದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ 53 ಮರಗಳು ಮತ್ತು 64 ಮರದ ಟೊಂಗೆಗಳನ್ನು ತೆರುವುಗೊಳಿಸಲು ಧಾರವಾಡ ಅರಣ್ಯ ಅಧಿಕಾರಿ ಕಛೇರಿಯಲ್ಲಿ ಅಕ್ಟೋಬರ 13ರಂದು ಮಧ್ಯಾಹ್ನ 3 ಗಂಟೆಗೆ ಬಹಿರಂಗ ಹರಾಜು ಮಾಡಲಾಗುವುದು ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.
ಮರ ಸಂರಕ್ಷಣಾ ಕಾಯ್ದೆ 1976 ರ ಸೆಕ್ಷನ್ 8 (3) (VII) ರ ಸೆಕ್ಷನ್ಗಳಲ್ಲಿ ಅಗತ್ಯ ಪಡಿಸಿರುವಂತೆ ಈ ಬಗ್ಗೆ ತಕರಾರು ಸಲ್ಲಿಸ ಬಯಸುವವರು ತಮ್ಮ ತಕರಾರನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಧಾರವಾಡ ಉಪ ವಿಭಾಗ ಹಾಗೂ ಧಾರವಾಡದ ಕೆ.ಸಿ.ಪಾರ್ಕ ಎದುರು ಅರಣ್ಯ ಸಂಕೀರ್ಣದಲ್ಲಿರುವ ಮರ ಅಧಿಕಾರಿಯವರಿಗೆ ಲಿಖಿತ ರೂಪದಲ್ಲಿ ಅಕ್ಟೋಬರ 09 ರ ಒಳಗಾಗಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




