ಧಾರವಾಡ | ವ್ಯಸನಮುಕ್ತ ಸಮಾಜ ನಿರ್ಮಾಣ ನಮ್ಮ ಗುರಿ: ಡಾ. ಶಶಿ ಪಾಟೀಲ

Date:

ಮಾದಕ ವಸ್ತುಗಳ ಸೇವನೆ ಹಾಗೂ ದುಶ್ಚಟಗಳಿಂದ ಯುವ ಸಮುದಾಯ ಗಂಭೀರವಾದ ದೈಹಿಕ, ಮಾನಸಿಕ ಸಮಸ್ಯೆಗಳೊಂದಿಗೆ ಆರ್ಥಿಕ ಸಂಕಷ್ಟ ಅನುಭವಿಸುತ್ತಾರೆ. ಇವರಲ್ಲಿ ಜಾಗೃತಿ ಮೂಡಿಸಿ ಸದೃಢ ಹಾಗೂ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸಬೇಕೆಂದು ಧಾರವಾಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ ಹೇಳಿದರು.

ನಗರದ ಕರ್ನಾಟಕ ಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ ಸರ್ಕಾರ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಇಲಕಲ್ಲ ಡಾ‌. ಮಹಾಂತ ಶಿವಯೋಗಿಗಳ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಮದ್ಯಪಾನ, ಮಾದಕ ದ್ರವ್ಯ, ತಂಬಾಕುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಸಮತೋಲನ ಆಹಾರ ಸೇವನೆ, ವ್ಯಾಯಾಮ ಇತರ ಆರೋಗ್ಯಕರ ಹವ್ಯಾಸಗಳನ್ನು ರೂಪಿಸಿಕೊಳ್ಳಬೇಕು. ದುಶ್ಚಟಗಳಿಂದ ದೂರವಿರಲು ಯುವಕರು ಜಾಗೃತಿ ಮೂಡಿಸಬೇಕು. ಮಾದಕ ವ್ಯಸನವು ಮೆದುಳಿನ ಕಾಯಿಲೆಯಾಗಿದೆ. ಮಾದಕ ವ್ಯಸನಗಳನ್ನು ಲಘುವಾಗಿ ಪರಿಗಣಿಸದೇ ಅವುಗಳ ವಿರುದ್ಧ, ಎಲ್ಲರೂ ಹೋರಾಟ ಮಾಡುವುದು ಅತ್ಯಂತ ಅವಶ್ಯವಾಗಿದೆ. ಪ್ರತಿ ವರ್ಷವೂ ಆಗಸ್ಟ್ 1ರಂದು ಲಿಂಗೈಕ್ಯ ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆಯನ್ನು ಕರ್ನಾಟಕ ರಾಜ್ಯಾದ್ಯಂತ ಆಚರಿಸಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಗಾಂಜಾ ಮತ್ತಿನಲ್ಲಿ ಯುವಜನರ ಅಸಭ್ಯ ವರ್ತನೆ; ಎಸ್‌ಪಿ, ಅರಣ್ಯ ಇಲಾಖೆ ಅಲರ್ಟ್‌

ಕರ್ನಾಟಕ ಕಲಾ ಕಾಲೇಜಿನ ಪ್ರಾಂಶುಪಾಲ ಡಾ. ಡಿ ಬಿ ಕರಡೋಣಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರೋಗ್ಯ ಇಲಾಖೆಯ ಮನೋವೈದ್ಯೆ ಡಾ ವೈಶಾಲಿ ಎನ್ ಹೆಗಡೆ, ಕವಿವಿ ಎನ್‌ಎಸ್‌ಎಸ್‌ ಕೋಶದ ಸಂಯೋಜನಾಧಿಕಾರಿ ಡಾ. ಎಂ ಬಿ ದಳಪತಿ, ಕೆಸಿಡಿ ಎನ್‌ಎಸ್‌ಎಸ್‌ ಕಾರ್ಯಕ್ರಮ ಅಧಿಕಾರಿ ಡಾ. ಎಚ್ ಕೆ ಕೋಳೂರು ಮತ್ತು ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...