ಧಾರವಾಡ | 2ನೇ ದಿನಕ್ಕೆ ಕಾಲಿಟ್ಟ ‘ನಮ್ಮ ಸಂವಿಧಾನ ನಮ್ಮ ಕಲರವ’ ಚಿಣ್ಣರ ನಾಟಕೋತ್ಸವ

Date:

ಧಾರವಾಡ ರಂಗಾಯಣವು ಪಂ. ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಟ್ರಸ್ಟ್‌ಗಳ ಸಹಯೋಗದಲ್ಲಿ ಆಯೋಜಿಸಿದ್ದ ಚಿಣ್ಣರಮೇಳ-2025ರ “ಚಿಣ್ಣರ ನಾಟಕೋತ್ಸವ”ದ 2ನೇ ದಿನದ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಡಾ. ರೆಹಮತ್ ತರೀಕೆರೆ ಚಿಣ್ಣರಮೇಳದ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿದರು.

IMG 20250505 WA0008

ಈ ಕುರಿತು ಶಿಬಿರದ ನಿರ್ದೆಶಕ ಲಕ್ಷ್ಮಣ ಪಿರಗಾರ ಮಾತನಾಡಿ, ಮಕ್ಕಳಲ್ಲಿ‌ ಸಂವಿಧಾನ ಮತ್ತು ಅಂಬೇಡ್ಕರ್ ವಿಚಾರಗಳು ಬೇರೂರಬೇಕೆಂಬ ವಿಚಾರದಿಂದ ‘ನಮ್ಮ‌ ಸಂವಿಧಾನ, ನಮ್ಮ ಕಲರವ’ ಘೋಷವಾಕ್ಯದಡಿಯಲ್ಲಿ ಮಕ್ಕಳ ಬೇಸಿಗೆ ಶಿಬಿರವನ್ನು ರೂಪಿಸಲಾಗಿದೆ. ಬೆಳೆಯುವ ಸಿರಿ ಮೊಳಕೆಯಲ್ಲಿ‌ ಕಾಣು ಎಂಬಂತೆ ಮಕ್ಕಳಲ್ಲಿ ಸಂವಿಧಾನ ಆಶಯಗಳನ್ನು ಬಿತ್ತುವ ಅವಶ್ಯವಿದೆ. ಕಾರಣ; ಬಾಬಾಸಾಹೇಬರ ಕುರಿತು ಇಂದಿಗೂ ಬಹುತೇಕರಲ್ಲಿ ಅರಿವಿಲ್ಲದಿರುವುದು ದುರಂತದ ಸಂಗತಿ. ಆ ನಿಟ್ಟಿನಲ್ಲಿ ಮಕ್ಕಳಲ್ಲಿ ಅವರ ಮತ್ತು ಸಂವಿಧಾನದ ಅರಿವು ಮೂಡಿಸು ಚಟುವಟಿಕೆಗಳನ್ನು ಮಾಡಿದರೆ; ಮುಂದಿನ ಪೀಳಿಗೆಯಿಂದ ಸಂವಿಧಾನದ ಆಶಯಗಳನ್ನು ಎತ್ತಿಹಡಿಯುವ ಕೆಲಸವಾಗುತ್ತದೆ.‌ ಮತ್ತು ನಮ್ಮಲ್ಲಿ‌ ಪರಂಪರಾಗತವಾಗಿ ಬೇರೂರಿರುವ ಸಂಕುಚಿತ ಮನೋಭಾವನೆಗಳಿಗೆ ಕಡಿವಾಣ ಹಾಕಲು ಸಂವಿಧಾನದಿಂದ ಮಾತ್ರ ಸಾಧ್ಯ.‌ ಆ ನಿಟ್ಟಿನಲ್ಲಿ ಸಮಾನತೆ, ಸ್ವಾತಂತ್ರ್ಯ, ಸಹೋದರತ್ವ, ಸಮಗ್ರತೆ ಹೀಗೆ ವಿವಿಧ ಗುಂಪುಗಳನ್ನು ಮಾಡಿ, ಮಕ್ಕಳಿಂದ ವಿವಿಧ ನಾಟಕಗಳನ್ನು ಮಾಡಿಸಲಾಗುತ್ತಿದೆ ಎಂದರು.

IMG 20250505 WA0007

ಸಾಹಿತಿ ರೆಹಮತ್ ತರೀಕೆರೆ ಸಂವಿಧಾನ’ದ ಕುರಿತು ಮಕ್ಕಳು ರಚಿಸಿ ಹಾಡಿದ ಹಾಡಿಗೆ ಸಂತಸಪಟ್ಟರು. ಚಿಣ್ಣರ ನಾಟಕೋತ್ಸವದ ಕುರಿತು ಹರ್ಷ ವ್ಯಕ್ತಪಡಿಸಿದರು. ನಂತರ ಸಮಾನತೆ ತಂಡ “ದೊಡ್ಡಾಟದ ಹೆಜ್ಜೆಗಳು” ಹಾಗೂ ಸ್ವಾತಂತ್ರ್ಯ ತಂಡದವರು “ಪರಿಸರದ ಗೀತೆಗಳ”ನ್ನು ಪ್ರಸ್ತುತಪಡಿಸಿದರು. ನಂತರ ಸಹೋದರತ್ವ ತಂಡ “ಅದಲ್-ಬದಲ್” ನಾಟಕ ಹಾಗೂ ಸಮಗ್ರತೆ ತಂಡದವರು “ಬೆಳಕು ಹಂಚಿದ ಬಾಲಕ” ನಾಟಕವನ್ನು ಪ್ರದರ್ಶಿಸಿ,‌ಮಕ್ಕಳು ಸಂವಿಧಾನದ ಕುರಿತು ಹಾಡು ರಚಿಸಿ ಹಾಡಿದರು ಎಲ್ಲರ ಮನತಣಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಧಾರವಾಡ | ಕಾರುಗಳೆರಡು ಮುಖಾಮುಖಿ ಡಿಕ್ಕಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವು

ಈ ಸಂದರ್ಭದಲ್ಲಿ ರಂಗಾಯಣ ನಿರ್ದೇಶಕ ಡಾ. ರಾಜು ತಾಳಿಕೋಟಿ, ರಂಗಕಲಾವಿದ ಮುರುಗೋಡ, ಶಿಬಿರದ ನಿರ್ದೆಶಕ ಲಕ್ಷ್ಮಣ ಪಿರಗಾರ, ಸಾಹಿತಿ ರೆಹಮತ್ ತರೀಕೆರೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...