ಧಾರವಾಡ | ಚಿತ್ರಕಲೆ; ಭಾವನೆಗಳನ್ನು ವ್ಯಕ್ತಪಡಿಸುವ ಪ್ರಬಲ ಮಾಧ್ಯಮ: ಕೆ.ವ್ಹಿ. ಸುಬ್ರಹ್ಮಣ್ಯಂ

Date:

ಭಾವನೆಗಳನ್ನು ದೃಶ್ಯ ರೂಪದಲ್ಲಿ ವ್ಯಕ್ತಪಡಿಸುವ ಪ್ರಬಲ ಮಾಧ್ಯಮವೇ ಚಿತ್ರಕಲೆ. ಚಿತ್ರಕಲೆಯ ಒಂದೊಂದು ಬಣ್ಣಗಳು ವಿಭಿನ್ನ ಸಂಕೇತಗಳನ್ನು ಸೂಚಿಸುತ್ತವೆ ಎಂದು ದೃಶ್ಯ ಕಲಾ ಇತಿಹಾಸಕಾರ ಕೆ.ವ್ಹಿ. ಸುಬ್ರಹ್ಮಣ್ಯಂ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಚಿತ್ರಕಲಾ ಪ್ರದರ್ಶನ ಸಭಾಭವನದಲ್ಲಿ ಆಯೋಜಿಸಿದ್ದ ಕಲಾವಿದ ವಿಶ್ವನಾಥ ಗುಗ್ಗರಿ ಅವರ ಚಿತ್ರಕಲಾ ಪ್ರದರ್ಶನದ ಪ್ರಾತ್ಯಕ್ಷಿಕೆ ಉದ್ಘಾಟಿಸಿ ಮಾತನಾಡುತ್ತಿದ್ದರು.

ಇಂದು ನೈಜ ಚಿತ್ರಕಲೆಗೆ ಅಧಿಕ ಬೇಡಿಕೆ ಇದೆ. ಚಿತ್ರಕಲೆಯು ಮನುಷ್ಯನನ್ನು ಸಂಸ್ಕಾರಗೊಳಿಸುತ್ತಿದ್ದು, ಕವಿ ರವೀಂದ್ರನಾಥ ಠಾಕೂರ ತಮ್ಮ ಶಾಂತಿನಿಕೇತನದಲ್ಲಿ ಮಕ್ಕಳ ಮನೋವಿಕಾಸಕ್ಕೆ ಚಿತ್ರಕಲೆ, ಸಂಗೀತದಂತಹ ಚಟುವಟಿಕೆಗೆ ಆದ್ಯತೆ ನೀಡಿದ್ದರು. ದೇಶದ ಹೆಸರಾಂತ ಚಿಂತಕರು, ತತ್ವಜ್ಞಾನಿಗಳು ಚಿತ್ರಕಲೆಯಿಂದ ಪ್ರಭಾವಿತರಾಗಿದ್ದರು ಎಂದು ಹೇಳಿದರು.

ಮುಖ್ಯ ಅತಿಥಿ ಡಿ.ಎಂ. ಬಡಿಗೇರ ಮಾತನಾಡಿ, ಚಿತ್ರಕಲಾ ರಸಋಷಿ ಎಂದು ಕರೆಯಲ್ಪಟ್ಟ ಎಂ.ಎ. ಚಟ್ಟಿ ಅವರ ಕಲಾಚಿತ್ರಗಳು ನಮ್ಮ ಮೇಲೆ ಪ್ರಭಾವ ಬೀರಿದ್ದು, ಅವರ ಚಿಕ್ಕ ಚಿಕ್ಕ ಕಲಾಕೃತಿಗಳು ಮನಸ್ಸಿಗೆ ಮುದ ನೀಡುವಂತವುಗಳಾಗಿದ್ದವು. ವಿಶ್ವನಾಥ ಗುಗ್ಗರಿ ತಮ್ಮ ಮನೋಜ್ಞ ಚಿತ್ರಗಳ ಮೂಲಕ ಹೊಸ ಲೋಕ ಸೃಷ್ಟಿಸಿದಂತಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ಕಲಾವಿದ ವಿಶ್ವನಾಥ ಗುಗ್ಗರಿ ಮಾತನಾಡಿ, ಧಾರವಾಡದಂತಹ ಸಾಂಸ್ಕೃತಿಕ ನಗರಿಯಲ್ಲಿ ಚಿತ್ರಕಲಾವಿದರ ಕಲಾಪ್ರದರ್ಶನಕ್ಕೆ ಸುಸಜ್ಜಿತ ಆರ್ಟ್ ಗ್ಯಾಲರಿಯನ್ನು ಕ.ವಿ.ವ. ಸಂಘ ಸ್ಥಾಪಿಸಿ, ಕಲಾವಿದರಿಗೆ ಅನುಕೂಲ ಮಾಡಿದ್ದನ್ನು ಶ್ಲಾಘಿಸಿದರು. ಅಧ್ಯಕ್ಷತೆ ವಹಿಸಿದ್ದ ಕ.ವಿ.ವ. ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಮಾತನಾಡಿ, ವಿಶ್ವನಾಥ ಗುಗ್ಗರಿ ಕಲಾಕೃತಿಗಲು ನೋಡುವವರ ಮನಸ್ಸನ್ನು ಅರಳಿಸುವಂತಿವೆ. ಚಿತ್ರಕಲೆ ಲಲಿತ ಕಲೆಗಳಲ್ಲೇ ವಿಶಿಷ್ಟವಾದುದು. ಅದು ನಮ್ಮ ಸಂಸ್ಕೃತಿಯ ಪ್ರತೀಕ. ಮಕ್ಕಳ ಕನಸುಗಳಿಗೆ ಬಣ್ಣ ತುಂಬುವ ಈ ಕಲೆ ಅದ್ಭುತವಾದದ್ದು ಎಂದು ಹೇಳಿದರು.

ಎಫ್.ವ್ಹಿ. ಚಿಕ್ಕಮಠ ಸ್ವಾಗತಿಸಿ, ಪರಿಚಯಿಸಿದರು. ವೀರಣ್ಣ ಒಡ್ಡೀನ ನಿರೂಪಿಸಿದರು. ಶಿವಾನಂದ ಭಾವಿಕಟ್ಟಿ ವಂದಿಸಿದರು. ಕಾರ್ಯಕ್ರಮದಲ್ಲಿ ಶಂಕರ ಕುಂಬಿ, ಡಾ. ಜಿನದತ್ತ ಹಡಗಲಿ, ಡಾ. ಆನಂದ ಪಾಟೀಲ, ಎಸ್.ಕೆ. ಪತ್ತಾರ, ದ್ವಾರಪಾಲಕ, ಶಿ.ಮ. ರಾಚಯ್ಯನವರ, ಬಿ. ಮಾರುತಿ  ಸೇರಿದಂತೆ ಚಿತ್ರಕಲಾ ವಿದ್ಯಾರ್ಥಿಗಳು, ಆಸಕ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...