ಧಾರವಾಡ | ಮಾದಕ ವಸ್ತು ಮುಕ್ತ ಜಿಲ್ಲೆ ಮಾಡಲು ಪಣ: ಸಚಿವ ಪರಮೇಶ್ವರ್

Date:

ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಧಾರವಾಡ ಜಿಲ್ಲೆ ಶಾಂತಿ, ಸುವ್ಯವಸ್ಥೆಯಿಂದ ಕೂಡಿದೆ. ಅಪರಾಧಗಳ ಸಂಖ್ಯೆ ಕಡಿಮೆ ಇದೆ. ಮಾದಕ ವಸ್ತುಗಳ ಮಾರಾಟ, ಪೆಡ್ಲರ್‌ಗಳ ಸಂಖ್ಯೆ ನಗಣ್ಯವಾಗಿದೆ. ಮುಂದಿನ ಆರು ತಿಂಗಳಲ್ಲಿ ಧಾರವಾಡ ಜಿಲ್ಲೆಯನ್ನು ಮಾದಕ ಮುಕ್ತ ಜಿಲ್ಲೆಯಾಗಿಸಲು ಪ್ರತಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಪಣ ತೊಡಬೇಕು ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. “ಪೊಲೀಸ್ ಇಲಾಖೆಯ ಬಗ್ಗೆ ಸಮಾಜದ ಪ್ರತಿಯೊಬ್ಬರಲ್ಲಿ ಸದಾಭಿಪ್ರಾಯ ಮೂಡಿಸಲು ಇಲಾಖೆಯ ಎಲ್ಲ ಸಿಬ್ಬಂದಿಗಳು ಪ್ರಯತ್ನಿಸಬೇಕು. ಪ್ರತಿ ತಿಂಗಳು ಪ್ರತಿ ಪೊಲೀಸ್ ಠಾಣೆಯಿಂದ ಒಬ್ಬ ಅಧಿಕಾರಿ ಒಂದು ಶಾಲೆಗೆ ಕಡ್ಡಾಯವಾಗಿ ಭೇಟಿ ನೀಡಿ ಶಾಲಾ ಮಕ್ಕಳಲ್ಲಿ ಪೊಲೀಸ್ ಇಲಾಖೆಯ ಕಾರ್ಯ ವೈಖರಿ, ಸರ್ಕಾರದ ಯೋಜನೆಗಳು ಮತ್ತು ಪೋಕ್ಸೋದಂತಹ ಪ್ರಮುಖ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಬೇಕು. ಪೊಲೀಸರೆಂದರೆ ಮಕ್ಕಳು ಭಯ ಪಡದೇ ಪ್ರೀತಿಯಿಂದ ಕಾಣುವಂತಹ ವಾತಾವರಣವನ್ನು ರೂಪಿಸಬೇಕು” ಎಂದರು.

“ಶಾಲಾ ಕಾಲೇಜುಗಳಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆ, ಮೊಬೈಲ್ ಬಳಕೆ, ಪೋಕ್ಸೋ, ಸಂಚಾರ ನಿಯಮಗಳು, ಪೊಲೀಸ್ ನೆರವಿನ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಪೊಲೀಸ್‍ರ ನಡೆ ಜನರ ಕಡೆಗೆ ಆದಾಗ ಮಾತ್ರ ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡಲು ಮತ್ತು ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ” ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪೊಲೀಸ್ ಸಿಬ್ಬಂದಿಗಳಿಗೆ ವಸತಿ, ಕುಡಿಯುವ ನೀರು ಸೇರಿದಂತೆ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಹೊಸ ಪೊಲೀಸ್ ಠಾಣೆ, ಸಿಬ್ಬಂದಿಗಳಿಗಾಗಿ ಹೊಸ ವಸತಿ ಸಮುಚ್ಛಯ ಮತ್ತು ಇತರೆ ಮೂಲಭೂತ ಸೌಲಭ್ಯಗಳಿಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದರೆ ಸರ್ಕಾರದ ಹಂತದಲ್ಲಿ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಸಚಿವರು ಹೇಳಿದರು.

“ಜನರಿಗೆ ಉತ್ತಮ ಆಡಳಿತ, ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ಮತ್ತು ಪೊಲೀಸ್ ಸಂಪರ್ಕಕ್ಕೆ ಬರುವ ಪ್ರತಿಯೊಬ್ಬರಿಗೂ ಉತ್ತಮ ಸ್ಪಂದನೆ ನೀಡಿ ನ್ಯಾಯ ಕೊಡಿಸುವ ವಿಶ್ವಾಸವನ್ನು ಮೂಡಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಪ್ರತಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಸದಾಶಯದಿಂದ ಸರ್ಕಾರದ ಆಶಯಗಳ ಪೂರಕವಾಗಿ ನಡೆಯಬೇಕು. ಮತ್ತು ಜನಪರ ಕೆಲಸಕ್ಕಾಗಿ ಆಡಳಿತ ಯಂತ್ರಕ್ಕೆ ಸಹಕಾರ ನೀಡಬೇಕು” ಎಂದು ಸೂಚಿಸಿದರು.

“ಆಸ್ತಿ ವಿವಾದ, ಹಣಕಾಸಿನ ವ್ಯವಹಾರ, ರಿಯಲ್ ಎಸ್ಟೇಟ್ ದಂತಹ ಪ್ರಕರಣಗಳಲ್ಲಿ ಅತಿ ಆಸಕ್ತಿ ವಹಿಸದೇ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಪೊಲೀಸ್ ಇಲಾಖೆಗೆ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವುದರೊಂದಿಗೆ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ಮತ್ತು ನಿರ್ಭೀತಿಯ ಬದುಕು ಕಲ್ಪಿಸುವ ಮಹತ್ವದ ಜವಾಬ್ದಾರಿ ಇದೆ. ಇದನ್ನು ಅರಿತು ತಮ್ಮ ತಮ್ಮ ಕರ್ತವ್ಯಗಳನ್ನು ಚಾಚೂ ತಪ್ಪದೇ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲಿಸಬೇಕು” ಎಂದು ನಿರ್ದೇಶಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಮಾತನಾಡಿ, “ಜಿಲ್ಲೆಯಲ್ಲಿ ವಿವಿಧ ರೀತಿಯ ಅಪರಾಧಗಳ ಸಂಖ್ಯೆ ಇಳಿಮುಖವಾಗಿದೆ. ಸಣ್ಣ ಪುಟ್ಟ ಪ್ರಕರಣಗಳು ಜರುಗಿದ ತಕ್ಷಣ ಪೊಲೀಸ್ ಇಲಾಖೆ ಸ್ಪಂಧಿಸುವುದರಿಂದ ಪ್ರಕರಣಗಳ ಪತ್ತೆ ಕಾರ್ಯವು ಸುಗಮವಾಗಿದೆ. ಕಾನೂನು ಬಾಹಿರ ಚಟುವಟಿಕೆಗಳನ್ನು ಬಹುತೇಕ ನಿಯಂತ್ರಿಸಿದ್ದು, ಇದರಲ್ಲಿ ಪಾಲ್ಗೊಳ್ಳುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ, ನ್ಯಾಯಾಲಯದಿಂದ ಕಾನೂನಾತ್ಮಕವಾದ ಕಠಿಣ ಕ್ರಮವನ್ನು ಕೈಗೊಳ್ಳಲು ಅಗತ್ಯ ಸಾಕ್ಷ್ಯ ಮತ್ತು ನೆರವು ನೀಡಲಾಗುತ್ತಿದೆ” ಎಂದು ತಿಳಿಸಿದರು.

ಸಭೆಯಲ್ಲಿ ಡಿವೈಎಸ್‍ಪಿಗಳು ಸೇರಿದಂತೆ ಸಿಪಿಐ, ಪಿಎಸ್‍ಐಗಳು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...