ಧಾರವಾಡ | ಹೊಸದಾಗಿ ಏಳು ಕಡೆ ಇಂದಿರಾ ಕ್ಯಾಂಟೀನ್ ಆರಂಭಿಸಲು ತಯಾರಿ

Date:

ಧಾರವಾಡ ಜಿಲ್ಲೆಯಲ್ಲಿ ಹೊಸದಾಗಿ ಏಳು ಕಡೆ ಇಂದಿರಾ ಕ್ಯಾಂಟೀನ್ ಆರಂಭಿಸಲು ತಯಾರಿ ನಡೆದಿದ್ದು, ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ.

ಈ ಹಿಂದೆ ಹುಬ್ಬಳ್ಳಿಯಲ್ಲಿ ಐದು ಮತ್ತು ಧಾರವಾಡದಲ್ಲಿ ನಾಲ್ಕು ಒಟ್ಟು ಒಂಬತ್ತು ಕ್ಯಾಂಟೀನ್‌ಗಳನ್ನು ತೆರೆಯಲಾಗಿದೆ. ಹುಬ್ಬಳ್ಳಿ, ಧಾರವಾಡ ಹೊರತಾಗಿ ಇತರ ತಾಲೂಕು ಕೇಂದ್ರಗಳಲ್ಲಿ ಇಂದಿರಾ ‌ ಕ್ಯಾಂಟೀನ್ ಇರಲಿಲ್ಲ.

ಈಗ, ಹುಬ್ಬಳ್ಳಿ ನಗರದಲ್ಲಿ ಎರಡು, ಕಲಘಟಗಿ, ಅಳ್ನಾವರ, ಕುಂದಗೋಳ, ನವಲಗುಂದ ಹಾಗೂ ಅಣ್ಣಿಗೇರಿ ಪಟ್ಟಣದಲ್ಲಿ ತಲಾ ಒಂದು ಕ್ಯಾಂಟೀನ್ ತೆರೆಯಲು ಯೋಜಿಸಲಾಗಿದೆ. ಇಂದಿರಾ ಕ್ಯಾಂಟೀನ್ ನಿರ್ಮಾಣದ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ನಿವೇಶನ ಗುರುತಿಸಿ ಕೇಂದ್ರ ಕಚೇರಿಗೆ ವಿವರ ಸಲ್ಲಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಹೊಸದಾಗಿ 185 ಇಂದಿರಾ ಕ್ಯಾಂಟೀನ್‌ಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಜನವರಿ 2ರಂದು ಮಂಜೂರಾತಿ ಆದೇಶ ಹೊರಡಿಸಿತ್ತು.

ಇಂದಿರಾ ಕ್ಯಾಂಟೀನ್‌ನಲ್ಲಿ 5ರೂ.ಗೆ ಉಪಹಾರ, 10ರೂ.ಗೆ ಊಟ ದೊರೆಯುತ್ತದೆ. ಬೇರೆ ಊರುಗಳಿಂದ ಬರುವ ಜನರು, ವಿದ್ಯಾರ್ಥಿಗಳು ಈ ಕ್ಯಾಂಟೀನ್‌ನಲ್ಲಿ ಆಹಾರ ಸೇವಿಸುತ್ತಾರೆ. ಕಡಿಮೆ ದರದಲ್ಲಿ ಆಹಾರ ಸಿಗುವುದು ಅನುಕೂಲ ಎನ್ನುವುದು ಸಾರ್ವಜನಿಕರ ಅಭಿಪ್ರಾಯ.

ಇದನ್ನು ಓದಿದ್ದೀರಾ? ಎನ್‌ಡಿಎ ಗೆಲ್ಲುತ್ತದೆ ಎಂಬ ಸಮೀಕ್ಷೆಗಳಲ್ಲಿ ತಪ್ಪುಗಳಿವೆ; ವಾಸ್ತವದ ಬೆಳಕಿನಲ್ಲಿ ನೋಡುವ ಅಗತ್ಯವಿದೆ

ಕ್ಯಾಂಟೀನ್‌ಗಾಗಿ ನಿವೇಶನ ವಿಸ್ತೀರ್ಣ, ಮಣ್ಣು ಪರೀಕ್ಷೆ ವರದಿ ಮೂಲಸೌಕರ್ಯಗಳ ಬಗ್ಗೆ ಕೇಂದ್ರ ಕಚೇರಿಗೆ ವರದಿಯನ್ನು ಸಲ್ಲಿಸಲಾಗಿದೆ. ಬೆಂಗಳೂರಿನಿಂದ ಎಂಜಿನಿಯರ್‌ಗಳು ಬಂದು ಸ್ಥಳಕ್ಕೆ ಭೇಟಿ ನೀಡಿ ಮೂಲಸೌಕರ್ಯಗಳಿಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲಿದ್ದಾರೆ. ಸ್ಥಳಕ್ಕೆ ಅವರು ಒಪ್ಪಿಗೆ ನೀಡಿದರೆ, ಕಾಮಗಾರಿ ಆರಂಭಿಸಲು ಅನುಮೋದನೆ ಸಿಗುತ್ತದೆ ಎಂದು ಇಂದಿರಾ ಕ್ಯಾಂಟೀನ್ ನಿರ್ವಹಣೆ ಜಿಲ್ಲಾ ನೋಡೆಲ್ ಅಧಿಕಾರಿಯಾಗಿರುವ ಬಿ.ಎಸ್. ರಮೇಶ್ ಮಾದ್ಯಮಗಳಿಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...