ಧಾರವಾಡ | ದೌರ್ಜನ್ಯ ತಡೆ ಕಾಯ್ದೆ ಪ್ರಗತಿ ಪರಿಶೀಲನಾ ಸಭೆ; ತ್ವರಿತ ಪರಿಹಾರಕ್ಕೆ ಡಿಸಿ ಸೂಚನೆ

Date:

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಿಗಬೇಕಾದ ಸೌಲಭ್ಯಗಳನ್ನು ತಲುಪಿಸಿ, ದೌರ್ಜನ್ಯ ಪ್ರಕರಣಗಳಲ್ಲಿ ನಿಯಮಾನುಸಾರ ತ್ವರಿತ ಪರಿಹಾರ ನೀಡಲು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕು ಎಂದು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ನಿರ್ದೇಶಿಸಿದರು.

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ದೌರ್ಜನ್ಯ ತಡೆ ಕಾಯ್ದೆ ಪ್ರಗತಿ ಪರಿಶೀಲನೆ ಹಾಗೂ 2023ನೇ ಸಾಲಿನ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ 3ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ದೌರ್ಜನ್ಯದಲ್ಲಿ ಕೊಲೆಯಾದ ವ್ಯಕ್ತಿಗಳ ಅವಲಂಬಿತರಿಗೆ ನೀಡಲಾಗುವ ಅನುಕಂಪ ಆಧಾರದ ನೇಮಕಾತಿ ಪ್ರಕರಣಗಳಲ್ಲಿ ಇಲಾಖೆ ಅಧಿಕಾರಿಗಳು ಸಮನ್ವಯ ಸಾಧಿಸಿ, ಪ್ರಕರಣಗಳನ್ನು ಬೇಗ ಇತ್ಯರ್ಥ ಮಾಡಬೇಕು. ನೇಮಕಾತಿಗೆ ಅಗತ್ಯ ದಾಖಲೆ ಪೂರೈಸಲು ತುರ್ತು ಕ್ರಮವಹಿಸಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಜಾಗೃತಿ ಸಮಿತಿ ಸದಸ್ಯರು ಸೇರಿದಂತೆ ಗ್ರಾಮ ಮಟ್ಟದಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ, ಸಮುದಾಯ ಅಭಿವೃದ್ಧಿಗೆ ಮೀಸಲಿರುವ ಅನುದಾನ, ನಿವಾಸಿಗಳ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರದ ಯೋಜನೆಗಳ ಕುರಿತು ಸಮಾಜ ಕಲ್ಯಾಣ ಹಾಗೂ ಕಂದಾಯ ಇಲಾಖೆಯಿಂದ ಜಾಗೃತಿ ಮೂಡಿಸಬೇಕು” ಎಂದರು.

ಅಧಿಕಾರಿಗಳು

“ಎಲ್ಲ ಗ್ರಾಮಗಳಲ್ಲಿ ಶವಸಂಸ್ಕಾರಕ್ಕೆ ಸ್ಮಾಶನ ಭೂಮಿ ಇರಬೇಕು. ಸ್ಮಶಾನಕ್ಕಾಗಿ ಸರ್ಕಾರಿ ಜಮೀನು ಲಭ್ಯವಿರದಿದ್ದಲ್ಲಿ ಖಾಸಗಿ ಜಮೀನು ಖರೀದಿಸಲು ಅವಕಾಶವಿದೆ. ಅನುದಾನವೂ ಇದೆ. ಬೇಡಿಕೆ ಸಲ್ಲಿಸಬಹುದು. ಸಮುದಾಯದ ತೊಂದರೆಗಳಿದ್ದಲ್ಲಿ ಮುಕ್ತವಾಗಿ ಸಲ್ಲಿಸಿ, ಪರಿಶೀಲಿಸಿ ಸೂಕ್ತ ಕ್ರಮವಹಿಸಲಾಗುವುದು” ಎಂದು ಜಿಲ್ಲಾಧಿಕಾರಿ ತಿಳಿಸಿದರು.‌

“ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ದಾಖಲಾಗಿರುವ ಪ್ರಕರಣಗಳು ನ್ಯಾಯಾಲಯದಲ್ಲಿ ಬೇಗ ಮುಕ್ತಾಯವಾಗಬೇಕು. ನೊಂದವರಿಗೆ ನ್ಯಾಯ ದೊರಕಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು” ಎಂದು ಹೇಳಿದರು.

“ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಪಿಎಫ್, ಇಎಸ್‌ಐ ಸೌಲಭ್ಯ ಸಿಗುವಂತೆ ಮುನ್ನೆಚ್ಚರಿಕೆ ವಹಿಸಬೇಕು. ಪೌರಕಾರ್ಮಿಕರಿಗೆ ವಿಶ್ರಾಂತಿ ಕಟ್ಟಡ, ಉಪಹಾರ ವ್ಯವಸ್ಥೆ, ವೈದ್ಯಕೀಯ ಸೌಲಭ್ಯ ನಿಯಮಿತವಾಗಿ ದೊರೆಯುವಂತೆ ಮಾಡಬೇಕು” ಎಂದು ಸೂಚಿಸಿದರು.

“ಪೌರಕಾರ್ಮಿಕರ ಬ್ಯಾಂಕ್ ಕೆವೈಸಿ ಅಪ್‌ಡೇಟ್‌ ಮಾಡಿಸಬೇಕು. ಅಗತ್ಯವಿರುವಲ್ಲಿ ಪೌರಕಾರ್ಮಿಕರಿಗೆ ಸಂಕಷ್ಟ ಭತ್ಯೆ ನೀಡುವ ಕುರಿತು ಮಹಾನಗರ ಪಾಲಿಕೆಯಿಂದ ಸರ್ಕಾರಕ್ಕೆ ಸಲ್ಲಿಕೆ ಆಗಿರುವ ಪ್ರಸ್ತಾವನೆಗೆ ಅನುಮೊದನೆ ಪಡೆಯಲು ನಿಯಮಾನುಸಾರ ಕ್ರಮವಹಿಸಬೇಕು” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಮನರೇಗಾ ಕಾರ್ಮಿಕರ ಮುಂದಿವೆ ನೂರೆಂಟು ಸಮಸ್ಯೆಗಳು; ಕೇಳೋರ್ಯಾರು?

“ಹುಬ್ಬಳ್ಳಿ ಇಎಸ್‍ಐ ಆಸ್ಪತ್ರೆಗೆ ಅಗತ್ಯ ವೈದ್ಯಕೀಯ ಸಿಬ್ಬಂದಿ, ವೈದ್ಯರನ್ನು ನೇಮಿಸಿ, ವರದಿ ನೀಡಬೇಕು” ಎಂದು ಆಸ್ಪತ್ರೆಯ ಅಧೀಕ್ಷಕರಿಗೆ ಜಿಲ್ಲಾಧಿಕಾರಿ ನಿರ್ದೇಶಿಸಿದರು.

ಪ.ಜಾ/ಪ.ಪಂ ಸಮುದಾಯದ ರೈತರಿಗೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಹೈನುಗಾರಿಕೆ ಮತ್ತು ಸ್ವಾವಲಂಬಿ ಯೋಜನೆಗಳ ಪ್ರಯೋಜನ ಅರ್ಹರಿಗೆ ಸಲ್ಲಬೇಕು. ಮಧ್ಯವರ್ತಿಗಳ ಹಾವಳಿ ಆಗದಂತೆ, ಪಾರದರ್ಶಕವಾಗಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಬೇಕು” ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಜಿಲ್ಲೆಯ ಹಲವು ಇಲಾಖೆಗಳ ಅಧಕಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...