ಧಾರವಾಡ | ಆಧಾರ್ ಸೇವಾ ಕೇಂದ್ರ ಸ್ಥಳಾಂತರ ಖಂಡಿಸಿ ಪ್ರತಿಭಟನೆ

Date:

ನಗರದಲ್ಲಿ ಆಧಾರ್ ಸೇವಾ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದ ಸೌಲಭ್ಯ ಮುಂದುವರೆಸುವಂತೆ ಒತ್ತಾಯಿಸಿ ಧಾರವಾಡ ಧ್ವನಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ನಗರದ ಕಿತ್ತೂರ ಚೆನ್ನಮ್ಮ ಪಾರ್ಕ್ ಬಳಿಯ ಮಂಡಿ ಪ್ಲಾಜಾದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿ ಮನವಿ ಸಲ್ಲಿಸಿದರು. ಮಂಡಿ ಪ್ಲಾಜಾ ಕಟ್ಟಡದಲ್ಲಿ ಆಧಾರ್ ಸೇವಾ ಕೇಂದ್ರವು ಕಾರ್ಯನಿರ್ವಹಿಸುತ್ತಿತ್ತು. ಆದರೆ, ಆಧಾರ್ ಸೇವಾ ಕೇಂದ್ರವು ಕಳೆದ 2025ರ ನವಂಬರ್ 28 ರಿಂದ ದಿಢೀರ್ ಆಗಿ ಸ್ಥಗಿತಗೊಂಡು, ಇದೀಗ ಹುಬ್ಬಳ್ಳಿಯ ಕೇಶ್ವಾಪೂರಕ್ಕೆ ಸ್ಥಳಾಂತರಗೊಂಡಿದೆ. ಇದರಿಂದ ಧಾರವಾಡ ನಗರ, ಗ್ರಾಮೀಣ ಭಾಗ ಮಾತ್ರವಲ್ಲದೇ ಪಕ್ಕದ ತಾಲೂಕುಗಳ ಜನರು ಪರದಾಡುವಂತಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ನಗರದಲ್ಲಿ ಅಂಚೆ ಕಚೇರಿ, ಕೆಲವು ಖಾಸಗಿ ಆನ್‌ಲೈನ್ ಕೇಂದ್ರಗಳಲ್ಲಿ ಅಧಾರ ಕಾರ್ಡ್ ಸಂಬಂಧಿತ ಸೇವೆಗಳು ಸಿಗುತ್ತಿವೆ. ಆದರೆ, ದೊಡ್ಡ ಪ್ರಮಾಣದಲ್ಲಿ ಆಗಮಿಸುವ ಜನರಿಗೆ ಸಕಾಲದಲ್ಲಿ ಸೇವೆ ಲಭ್ಯವಾಗುತ್ತಿಲ್ಲ. ಅಲ್ಲದೇ ಸೇವೆಗೆ ಅಧಿಕ ದರ ನಿಗದಿಪಡಿಸಿರುವುದರಿಂದ ಜನಸಾಮಾನ್ಯರ ಸುಲಿಗೆಗೆ ಅವಕಾಶ ಸಿಕ್ಕಂತಾಗಿದೆ. ಆದ್ದರಿಂದ ಆಧಾರ್ ಕೇಂದ್ರ ಆರಂಭಿಸುವ ಅಗತ್ಯವಿದೆ. ವಿಳಂಬ ಮಾಡದೇ ಅಗತ್ಯ ಕ್ರಮ ಕೈಕೊಳ್ಳುವ ದಿಸೆಯಲ್ಲಿ ಕಾರ್ಯಪ್ರವೃತ್ತರಾಗಬೇಕು. ಈ ಕುರಿತು ಸಂಬಂಧಿಸಿದವರೊಂದಿಗೆ ಚರ್ಚಿಸಿ, ಯಾವುದೇ ಗೊಂದಲಗಳಿಗೆ ಅವಕಾಶ ನೀಡದೇ ಮನವಿಗೆ ಸ್ಪಂದಿಸಬೇಕು. ಒಂದು ವೇಳೆ ಶೀಘ್ರದಲ್ಲೇ ಇಲ್ಲಿವರೆಗೆ ಸೇವೆ ನೀಡುತ್ತಿದ್ದ ಪ್ರಮಾಣದ ಸೇವಾ ಕೇಂದ್ರ ಆರಂಭಿಸದಿದ್ದರೆ ಹೋರಾಟ ಹಮ್ಮಿಕೊಳ್ಳುವುದು ಅನಿವಾರ್ಯವಾಗಲಿದೆ ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಎಚ್ಚರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಧಾರವಾಡ | ಮರ್ಯಾದೆಗೇಡು ಹತ್ಯೆ ನಿಷೇಧ ಕಾನೂನು ಜಾರಿಗೆ ಜನಪರ ಸಂಘಟನೆಗಳ ಒತ್ತಾಯ

ಈ ಸಂದರ್ಭದಲ್ಲಿ ಧಾರವಾಡ ಧ್ವನಿ ಅಧ್ಯಕ್ಷ ಈಶ್ವರ ಶಿವಳ್ಳಿ, ಬಸವರಾಜ ಜಾಧವ, ಗೌರಮ್ಮ ಬರೋಗಿ, ಶಿವಾನಂದ ಕವಳಿ, ಮಂಜು ನಡೆಟ್ಟಿ, ಸಂತೋಷ ಪಟ್ಟಣಶೆಟ್ಟಿ, ಭೀಮಪ್ಪ ಕಾಸಾಯಿ, ಶರಣಗೌಡ ಗಿರಡ್ಡಿ, ವೆಂಕಟೇಶ ರಾಯ್ಕರ, ಬಸವರಾಜ ಪೊಮೋಜಿ, ಇಮ್ರಾನ್ ಪಾಳಿಕೋಟಿ, ಪರಮೇಶ್ವರ ಉಳಿವಣ್ಣವರ, ರಾಜೇಶ ಮನಗುಂಡಿ, ಶೇಖಪ್ಪ ಕಟ್ಟಿಮನಿ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...