ಧಾರವಾಡ | ಕಾರ್ಮಿಕ ವಿರೋಧಿ ಲೇಬರ್ ಕೋಡ್ ಜಾರಿ ವಿರೋಧಿಸಿ ಪ್ರತಿಭಟನೆ

Date:

ಕಾರ್ಮಿಕರ ಹಕ್ಕುಗಳನ್ನು ಕಿತ್ತುಕೊಳ್ಳುವ ಕಾರ್ಮಿಕ ಸಂಹಿತೆಗಳ ಜಾರಿಯನ್ನು ವಿರೋಧಿಸಿ ಇಂದು AIUTUC ವತಿಯಿಂದ ಜಿಲ್ಲಾ ಕಚೇರಿಯಲ್ಲಿ ಸಭೆ ಮತ್ತು ಪ್ರತಿಭಟನೆ ಹಮ್ಮಿಕೊಂಡಿದ್ದರು. ಪ್ರತಿಭಟನೆಯಲ್ಲಿ ಲೇಬರ್ ಕೋಡ್ಗಳ ಸಾಂಕೇತಿಕ ಪ್ರತಿಯನ್ನು ಸುಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ದೇವದಾಸ್ ಮಾತನಾಡಿ, ಉದ್ಯೋಗಿಗಳನ್ನು ವಜಾ ಮಾಡಲು ಅಥವಾ ಕಾರ್ಖಾನೆಗಳನ್ನು ಮುಚ್ಚಲು ಸರ್ಕಾರದ ಅನುಮತಿಯ ಅಗತ್ಯವಿರುವ ಸಂಸ್ಥೆಗಳ ಗಾತ್ರವನ್ನು ಹೆಚ್ಚಿಸಲಾಗಿದ್ದು ಇದರಿಂದ ಸುಲಭವಾಗಿ ಕಾರ್ಮಿಕರನ್ನು ತೆಗೆದುಹಾಕಲು ಸಾಧ್ಯವಾಗುತ್ತದೆ. ಇದು ಉದ್ಯೋಗ ಭದ್ರತೆಯನ್ನು ಕಡಿಮೆ ಮಾಡುತ್ತದೆ.
ಅಲ್ಲದೇ ​ಕಾರ್ಮಿಕರ ಪ್ರತಿಭಟನೆಯ ಹಕ್ಕನ್ನು ಮೊಟಕುಗೊಳಿಸುವುದು; ಕೈಗಾರಿಕಾ ಸಂಬಂಧಗಳ ಸಂಹಿತೆಯು ಮುಷ್ಕರ ನಡೆಸುವ ಹಕ್ಕನ್ನೇ ಕಸಿದುಕೊಳ್ಳುತ್ತದೆ. ಮತ್ತು ಕಾರ್ಮಿಕರ ಸಂಘಟಿತ ಚೌಕಾಸಿ (Collective Bargaining) ಶಕ್ತಿಯನ್ನು ದುರ್ಬಲಗೊಳಿಸುತ್ತದೆ, ಆದ್ದರಿಂದ ಈ ಲೇಬರ್ ಕೋಡ್ ಗಳು ಬಂಡವಾಳಶಾಹಿ ಗಳ ಪರ ಮತ್ತು ಕಾರ್ಮಿಕ ವಿರೋಧಿ ನೀತಿಗಳಾಗಿವೆ. ಕೂಡಲೇ ಈ ನೀತಿಯನ್ನು ರದ್ದು ಮಾಡಬೇಕು ಎಂದರು.

​ಡಿ. ನಾಗಲಕ್ಷ್ಮಿ ಮಾತನಾಡಿ, ಕಾರ್ಮಿಕ ಹಕ್ಕುಗಳು ಕಾರ್ಮಿಕರ ತ್ಯಾಗ ಬಲಿದಾನಗಳಿಂದ ರೂಪಿತವಾಗಿದ್ದು ಅವುಗಳಲ್ಲಿ ಒಂದೇ ಏಟಿಗೆ ಮಾಲೀಕರ ಪರ ಮಾಡಿ ಕಾರ್ಮಿಕರಿಗೆ ಹಲ್ಲುಕ್ಕಿಂತ ಹಾವಿನಂತೆ ಮಾರ್ಪಾಡುಗೊಳಿಸಿ ಲೇಬರ್ ಕೋಡ್ ಜಾರಿಗೆ ತರಲಾಗಿದೆ. ಕಾರ್ಮಿಕರ ಕೆಲಸದ ಸಮಯವನ್ನು 8 ಗಂಟೆಗಳಿಂದ 12 ಗಂಟೆಗಳವರೆಗೆ ಹೆಚ್ಚಿಸಲು ಸಂಸ್ಥೆಗಳಿಗೆ ಅವಕಾಶ ನೀಡುವುದು, ಮಹಿಳೆಯರಿಗೆ ರಾತ್ರಿ ಪಾಳೆ ಜಾರಿ, ಫಿಕ್ಸ್ಡ್ ಟರ್ಮ್ ಎಂಪ್ಲಾಯ್ಮೆಂಟ್ ಇತ್ಯಾದಿಗಳೆಲ್ಲವೂ ಅತ್ಯಂತ ಕಾರ್ಮಿಕ ವಿರೋಧಿಯಾಗಿವೆ. ಇದರ ವಿರುದ್ಧ ದೇಶದಾದ್ಯಂತ ದುಡಿಯುವ ಜನತೆ ಬೀದಿಗಳಿದು ಪ್ರತಿಭತಿಸಬೇಕು ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಎಐಯುಟಿಯುಸಿ ಜಿಲ್ಲಾಧ್ಯಕ್ಷ ಗಂಗಾಧರ ಬಡಿಗೇರ್, ಉಪಾಧ್ಯಕ್ಷೆ ಭುವನಾ ಬಳ್ಳಾರಿ, ಯೋಗಪ್ಪ ಜೋತೆಪ್ಪನವರ್, ಅಲ್ಲಾಭಕ್ಷ ಕಿತ್ತೂರ್, ಬಸವನಗೌಡ, ಗಿರಿಸಾಗರ್, ಶಾನ್ವಾಜ್ ಅಕ್ಕುರ್, ಚಂದ್ರು ಕಂಪ್ಲಿ ಕೊಪ್ಪ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...