ಧಾರವಾಡ | ಲಸಿಕೆ ತೆಗೆದುಕೊಳ್ಳುವ ಮೂಲಕ ರೇಬಿಸ್ ರೋಗ ತಡೆಯಬಹುದು: ಡಾ.ಎಸ್.ಎಮ್. ಹೊನಕೇರಿ

Date:

ಪ್ರಾಣಿ ಕಡಿತದ ನಂತರ ಲಸಿಕೆಯನ್ನು ಸರಿಯಾಗಿ ತೆಗೆದುಕೊಳ್ಳುವ ಮೂಲಕ ಮಾನವರು ರೇಬಿಸ್ ರೋಗವನ್ನು ಸಂಪೂರ್ಣವಾಗಿ ತಡೆಯಬಹುದು ಎಂದು ವಿಶ್ವ ರೇಬಿಸ್ ದಿನಾಚರಣೆಯ ಪ್ರಯುಕ್ತ ಸೆ.29ರಂದು ಧಾರವಾಡ ಪಶು ಆಸ್ಪತ್ರೆ ಆವರಣದಲ್ಲಿ ಏರ್ಪಡಿಸಿದ್ದ ‘ಸಾರ್ವಜನಿಕ ಆರೋಗ್ಯಕ್ಕಾಗಿ ರೇಬಿಸ್ ನಿಯಂತ್ರಣ ಕುರಿತಾದ ತಾಂತ್ರಿಕ ಕಾರ್ಯಾಗಾರ’ದಲ್ಲಿ ಜಿಲ್ಲಾ ಆರೋಗ್ಯಧಿಕಾರಿ ಡಾ.ಎಸ್.ಎಮ್. ಹೊನಕೇರಿ ಉದ್ಘಾಟಿಸಿ, ಮಾತನಾಡಿ ತಿಳಿಸಿದರು.

ಕಾರ್ಯಾಗಾರದ ಅದ್ಯಕ್ಷತೆ ವಹಿಸಿದ್ದ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಎಸ್.ವಿ.ಸಂತಿ ಮಾತನಾಡಿ, ಜಿಲ್ಲೆಯ ಎಲ್ಲಾ ಪಶುವೈದ್ಯರು ಸೆಪ್ಟೆಂಬರ ತಿಂಗಳಿನಲ್ಲಿ ಶಾಲಾ-ಕಾಲೇಜುಗಳಲ್ಲಿ ನಡೆಸಿದ ರೇಬೀಸ್ ಜಾಗೃತಿ ಕಾರ್ಯಕ್ರಮದ ಬಗ್ಗೆ ತಿಳಿಸುತ್ತಾ, ರೋಗದ ನಿಯಂತ್ರಣಕ್ಕಾಗಿ ಒಂದು ತಿಂಗಳವರೆಗೆ ಎಲ್ಲ ಸರ್ಕಾರಿ ಪಶು ಚಿಕಿತ್ಸಾಲಯಗಳಲ್ಲಿ ಸಾಕು ಪ್ರಾಣಿಗಳಾದ ನಾಯಿ ಮತ್ತು ಬೆಕ್ಕುಗಳಿಗೆ ಉಚಿತವಾಗಿ ನಾಯಿ ಹುಚ್ಚು ರೋಗದ ವಿರುದ್ದ ಲಸಿಕೆ ಹಾಕಲಾಗುವುದು ಎಂದು ತಿಳಿಸಿದರು. ಇದೇ ವೇಳೆ ರೇಬಿಸ್ ರೋಗ ತಡೆಗಟ್ಟುವ ಮಾಹಿತಿಯ ಭಿತ್ತಿ ಪತ್ರಗಳನ್ನು ಸಭೆಯಲ್ಲಿ ಬಿಡುಗಡೆಗೊಳಿಸಿದರು.

ಡಾ. ಸುನಿಲ್ ಕುಮಾರ ಕೆ.ಎಮ್. ರೇಬಿಸ್ ರೋಗನಿರ್ಣಯ (ಡಯಗ್ನೋಸಿಸ್) ಮತ್ತು ರೋಗದ ನಿಯಂತ್ರಣದಲ್ಲಿ (ಕಂಟ್ರೊಲ್) ಆದ ಹೊಸ ವೈಜ್ಞಾನಿಕ ಬೆಳವಣಿಗೆಗಳ ಬಗ್ಗೆ ತರಬೇತಿ ನೀಡಿದರು. ಕಾರ್ಯಾಗಾರದಲ್ಲಿ ಭಾಗವಹಿಸಿದ ಎಲ್ಲ ಪಶುವೈದ್ಯರುಗಳಿಗೆ, ಸಿಬ್ಬಂದಿಗಳಿಗೆ ಸಭೆಯಲ್ಲಿ ರೇಬಿಸ್ ರೋಗ ನಿರೋದಕ ಲಸಿಕೆಯನ್ನು ಹಾಕಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ಧಿ ಓದಿದ್ದೀರಾ? ಧಾರವಾಡ | ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಅಸ್ತು; ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ: ಶಶಿಕಲಾ

ಮುಖ್ಯ ಅತಿಥಿಯಾಗಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಬಿ.ಎಲ್.ಪರಮೇಶ್ವರ ನಾಯಕ ಹಾಗೂ ಉಪನಿರ್ದೆಶಕ ಡಾ.ಪ್ರಮೋದ ಮೂಡಲಗಿ, ಡಾ.ಆರ್.ಎ.ಪಾಟೀಲ, ಡಾ.ಎಮ್.ಎನ್.ಪಾಟೀಲ, ಪಶುವೈದ್ಯಕೀಯ ಅಧ್ಯಕ್ಷ ಡಾ.ಕೃಷ್ಣಪ್ಪ ರಾಥೋಡ ಮತ್ತು ಇತರ ಸದಸ್ಯರು ಹಾಗೂ ಜಿಲ್ಲೆಯ ಎಲ್ಲಾ ಪಶುವೈದ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...