ಧಾರವಾಡ | ರಂಗಾಯಣ ನಿರ್ದೇಶಕ, ಹಾಸ್ಯ ನಟ ರಾಜು ತಾಳಿಕೋಟಿ ನಿಧನ

Date:

ಧಾರವಾಡ ರಂಗಾಯಣ ನಿರ್ದೇಶಕ, ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯ ಚಿತ್ರನಟ ರಾಜು ತಾಳಿಕೋಟಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಉಡುಪಿಯಲ್ಲಿ ಚಲನಚಿತ್ರದ ಚಿತ್ರೀಕರಣ ಮುಗಿದ ನಂತರ ರೂಮ್ ನಲ್ಲಿ ವಿಶ್ರಾಂತಿ ತೆಗೆದುಕೊಳ್ಳುವಾಗ ಹೃದಯಘಾತವಾಗಿದೆ. ನಂತರ ಮಣಿಪಾಲ್ ಆಸ್ಪತ್ರೆಗೆ ಕರೆದೋಯ್ಯಲಾಗಿದೆ. ವೈದ್ಯರು ಪರೀಕ್ಷಿಸಿ ನೋಡಲು ರಾಜು ತಾಳಿಕೋಟಿ ಇನ್ನಿಲ್ಲ ಎಂದು ದೃಢಪಡಿಸಿದ್ದಾರೆ.

ಕಲಿಯುಗದ ಕುಡುಕ, ಕುಡುಕರ ಸಾಮ್ರಾಜ್ಯ ಎಂಬ ಹಾಸ್ಯ ನಾಟಕಗಳ ಮೂಲಕ ಖ್ಯಾತಿ ಹೊಂದಿದ್ದ ರಾಜು ತಾಳಿಕೋಟಿ, ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದವರು. ಹಲವು ಹಾಸ್ಯ ನಾಟಕ ಮತ್ತು ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ. ಪ್ರಸ್ತುತ ವಿಜಯಪುರ ಜಿಲ್ಲೆಯ ತಾಳಿಕೋಟಿಯಲ್ಲಿ ವಾಸವಾಗಿದ್ದರು. ಇವರು ಖಾಸ್ಗತೇಶ್ವರ ನಾಟಕ ಮಂಡಳಿ ಮೂಲಕ ರಂಗಭೂಮಿಗೆ ಪ್ರವೇಶ ಮಾಡುತ್ತಾರೆ. ಬಿಗ್ ಬಾಸ್‌-7 ರ ಸ್ಪರ್ಧಿ ಕೂಡ ಆಗಿದ್ದರು. ಇತ್ತೀಚಿಗೆ ಹಲವು ಚರ್ಚೆ ಮತ್ತು ವಿರೋಧಗಳ ನಡುವೆಯೂ ಧಾರವಾಡ ರಂಗಾಯಣ ನಿರ್ದೇಶಕರಾಗಿ ಆಯ್ಕೆ ಆಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ಆರ್‌ಎಸ್‌ಎಸ್ ಪಥಸಂಚಲನ; ಮಾರ್ಗ ಬದಲಾವಣೆಯಿಂದ ಪ್ರಯಾಣಿಕರು ಪರದಾಟ

ನಾಟಕ ರಂಗದಿಂದ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ರಾಜು ತಾಳಿಕೋಟಿ ಬಣ್ಣದ ಲೋಕಕ್ಕೆ ಬರುವ ಮೊದಲೇ ಹಾಸ್ಯ ನಾಟಕಗಳ ಕ್ಯಾಸೇಟಗಳ ಮೂಲಕ ಜನಪ್ರಿಯರಾಗಿದ್ದರು. ನಾಟಕಗಳಲ್ಲಿ ಅವರು ನಿರ್ವಹಿಸುತ್ತಿದ್ದ ಹಾಸ್ಯ ಪಾತ್ರಗಳು ಮತ್ತು ಸಣ್ಣ ಪುಟ್ಟ ಪಾತ್ರಗಳೂ ಸಹ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದವು. ಯಾವುದೇ ಸಂಭಾಷಣೆಯಲ್ಲಾಗಲಿ ಉತ್ತರ ಕರ್ನಾಟಕದ ಭಾಷಾ ಶೈಲಿಯನ್ನು ಬಿಟ್ಟುಕೊಡುತ್ತಿರಲಿಲ್ಲ. ರಂಗಾಯಣದ ಮೂಲಕ ಮರೆಯಾಗುತ್ತಿರುವ ನಾಟಕ ಸಂಸ್ಕೃತಿಯನ್ನು ಇನ್ನಷ್ಟು ಮುನ್ನಲೆಗೆ ತರುವ, ಪ್ರೇಕ್ಷಕರಲ್ಲಿ ನಾಟಕದ ಅಭಿರುಚಿ ಹೆಚ್ಚಿಸುವ ಉದ್ದೇಶದಿಂದ ಹಲವು ನಾಟಕ ಪ್ರದರ್ಶನಗಳನ್ನು ಹಮ್ಮಿಕೊಳ್ಳುವ ಕನಸನ್ನು ಹೊತ್ತಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...