ಧಾರವಾಡ | ರಂಗಾಯಣವು ಮಕ್ಕಳಲ್ಲಿರುವ ಕಲೆಯನ್ನು ಗುರುತಿಸಿದೆ: ಡಾ.ಬಿ.ಕೆ.ಎಸ್ ವರ್ಧನ

Date:

ಇಂದಿನ ಆಧುನಿಕ ಸಮಾಜದಲ್ಲಿ ಮಕ್ಕಳು ಕೇವಲ ಕಲಿಕೆಗೆ ಸೀಮಿತವಾಗಿ, ಸ್ವತಂತ್ರವಾಗಿ ಆಲೋಚನೆ ಮಾಡುವುದನ್ನೆ ಮರೆತಿದ್ದಾರೆ. ಅಂತಹ ಮಕ್ಕಳಿಗೆ ಸ್ವತಂತ್ರ ಮನೋಭಾವನೆ ಬೆಳೆಸಿಕೊಳ್ಳಲು ಮಕ್ಕಳಲ್ಲಿರು ಕಲೆಯನ್ನು ಗುರುತಿಸಿದ ರಂಗಾಯಣವು ಉತ್ತಮ ವೇದಿಕೆಯನ್ನು ರೂಪಿಸಿಕೊಟ್ಟಿದೆ ಎಂದು ಸಿಸ್ಲೇಪ್ ನಿರ್ದೇಶಕ ಡಾ.ಬಿ.ಕೆ.ಎಸ್ ವರ್ಧನ ಹೇಳಿದರು.

ಧಾರವಾಡ ರಂಗಾಯಣವು ಪಂ. ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಟ್ರಸ್ಟ್‍ಗಳ ಸಹಯೋಗದಲ್ಲಿ ಆಯೋಜಿಸಿದ್ದ ಚಿಣ್ಣರಮೇಳ-2025ರ “ಚಿಣ್ಣರ ನಾಟಕೋತ್ಸವ”ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನ ವಿಷಯದ ಕುರಿತು ಯಾರೂ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿರುವುದಿಲ್ಲ. ಇಂತಹ ಒಂದು ವಿನೂತನ ಪ್ರಯೋಗವನ್ನು ಮಕ್ಕಳಿಗಾಗಿ ರಂಗಾಯಣ ಮಾಡಿರುವುದು ಶ್ಲಾಘನೀಯ. ಸಮೀಕ್ಷೆಯ ಪ್ರಕಾರ ಭಾರತದಲ್ಲಿ ಕೇವಲ 12% ಜನರಿಗೆ ಮಾತ್ರ ಅರಿವಿದೆ. ಆದ್ದರಿಂದ ಸಂವಿಧಾನದಲ್ಲಿರುವ ಸಮಾನತೆ, ಸಮಾನ ಸ್ಥಾನ, ಸಹೋದರತ್ವ, ಭ್ರಾತೃತ್ವ ಭಾವನೆ, ಸ್ವಾತಂತ್ರ್ಯ ಸೇರಿದಂತೆ ಇತರೆ ಅಂಶಗಳ ಜಾಗೃತಿ ಮಕ್ಕಳಿಗೆ ಇರಬೇಕು. ಕರ್ನಾಟಕದಲ್ಲಿ ಬಸವಣ್ಣನವರು ತಮ್ಮ ತತ್ವಾದರ್ಶಗಳಿಂದ 12ನೇ ಶತಮಾನದಲ್ಲಿಯೇ ಸಂವಿಧಾನಕ್ಕೆ ಬುನಾದಿಯನ್ನು ಹಾಕಿದ್ದರು. ಮೂರು ತಿಂಗಳಲ್ಲಿ ತಯಾರಿಸುವ ನಾಟಕವನ್ನು ಕೇವಲ 25 ದಿನಗಳಲ್ಲಿ ಈ ಶಿಬಿರದಲ್ಲಿ ಸಿದ್ಧಪಡಿಸಿರುವುದು ಹೆಮ್ಮಯ ಸಂಗತಿ ಎಂದು ಶ್ಲಾಘಿಸಿದರು.

ರಂಗಾಯಣ ನಿರ್ದೇಶಕ ಡಾ. ರಾಜು ತಾಳಿಕೋಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಸಂವಿಧಾನ-ನಮ್ಮ ಕಲರವ ಧ್ಯೇಯವಾಕ್ಯದಡಿ ಈ ಬಾರಿಯ ಚಿಣ್ಣರಮೇಳವನ್ನು ಆಯೋಜಿಸುವ ಮೂಲಕ ಮಕ್ಕಳಿಗೆ ಸಂವಿಧಾನದ ಕುರಿತು ಅರಿವನ್ನು ಮೂಡಲು ಸಹಕಾರಿಯಾಗಿದೆ. ಕೇವಲ ಕಲಿಕೆಗೆ ಸೀಮಿತವಾಗಿದ್ದ ಮಕ್ಕಳಿಗೆ ಅವರಲ್ಲಿರುವ ಸಂಗೀತ, ಚಿತ್ರಕಲೆ, ನೃತ್ಯ, ನಟನಾ ಕೌಶಲ್ಯ ಸೇರಿದಂತೆ ಹಲವಾರು ಕಲೆಗಳನ್ನು ಪ್ರದರ್ಶಿಸಲು ರಂಗಾಯಣವು ವೇದಿಕೆಯನ್ನು ರೂಪಿಸಿಕೊಟ್ಟಿತು. ಅದರಂತೆ ಶಿಬಿರದ ಎಲ್ಲ ಮಕ್ಕಳು ತಮ್ಮ ಕಲೆಗಳೆಗಳನ್ನು ಪ್ರದರ್ಶಿಸುವುದರೊಂದಿಗೆ ಮನರಂಜನೆಯನ್ನು ಪಡೆಯುವ ಮೂಲಕ ಚಿಣ್ಣರಮೇಳವನ್ನು ಯಶಸ್ವಿಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಧಾರವಾಡ | ಶರಣರು ಚಲನೆಯ ತತ್ವವನ್ನು ಪ್ರತಿಪಾದಿಸುತ್ತಾರೆ: ರೆಹಮತ್ ತರೀಕೆರೆ

ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಶಿಬಿರ ನಿರ್ದೇಶಕ ಲಕ್ಷ್ಮಣ ಪಿರಗಾರ ಉಪಸ್ಥಿತರಿದ್ದರು. ರಂಗಾಯಣ ಆಡಳಿತಾಧಿಕಾರಿ ಶಶಿಕಲಾ ಹುಡೇದ ಸ್ವಾಗತಿಸಿ, ಪ್ರಾಸ್ತವಿಕವಾಗಿ ಮಾತನಾಡಿದರು. ಆರತಿ ದೇವಶಿಖಾಮಣಿ ನಿರೂಪಿದರು. ಸಹೋದರತ್ವ ತಂಡ “ವೀರಗಾಸೆ” ಹಾಗೂ ಪ್ರಜಾಪ್ರಭುತ್ವ ತಂಡದವರು “ಹುಲಿ ಕುಣಿತ”ವನ್ನು ಪ್ರಸ್ತುತಪಡಿದರು. ನಂತರ ಸಮಾನತೆ ತಂಡ “ರಿಯಾಲಿಟಿ..” ನಾಟಕ ಹಾಗೂ ಸ್ವಾತಂತ್ರ್ಯ ತಂಡದವರು “ಸಂವಿಧಾನ ಶರಣಂ ಗಚ್ಚಾಮಿ” ನಾಟಕವನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಶಿಬಿರ ಗೀತೆ, ರಂಗಗೀತೆಗಳು, ಮಕ್ಕಳ ಹಾಡುಗಳು ಜರುಗಿದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...