ಡಿಜಿ ಮತ್ತು ಐಜಿಪಿ ಎಮ್.ಎ.ಸಲೀಂ ಅವರು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ವಿಮರ್ಶನಾ ಸಭೆ ನಡೆಸಿ, ಮಾತನಾಡಿದರು.
ಪೊಲೀಸ್ ಸೇವೆಯು ಜನ ಸ್ನೇಹಿಯಾಗಿದ್ದು, ನಮ್ಮ ಪ್ರಥಮ ಆದ್ಯತೆ ಸಾರ್ವಜನಿಕರ ರಕ್ಷಣೆಗಿರಲಿ. ಪೊಲೀಸ್ ಇಲಾಖೆ ಜಾರಿ ತಂದಿರುವ ಮನೆ ಮನೆಗೆ ಪೊಲೀಸ್ ಉಪಕ್ರಮವು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದ್ದು, ಅಭಾಧಿತ ಮತ್ತು ನೊಂದ ವ್ಯಕ್ತಿಗಳ ಪರವಾಗಿ ಪೊಲೀಸರು ಇನ್ನೂ ಉತ್ತಮ ಕರ್ತವ್ಯ ನಿರ್ವಹಿಸುವ ಕುರಿತು ಸೂಚನೆ ನೀಡಿದರು.
ಇಲಾಖೆಯ ಅಧೀನ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಮತ್ತು ಕ್ಷೇಮದ ಬಗ್ಗೆ ವಿಶೇಷ ಗಮನ ಹರಿಸಬೇಕು. ಇದೇ ಸಂದರ್ಭದಲ್ಲಿ ಸಿ.ಐ.ಡಿ ಧಾರವಾಡ ಘಟಕ ಹಾಗೂ ಗ್ರಾಮೀಣ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಸಂವಹನ ನಡೆಸಿ ಮಾರ್ಗದರ್ಶನ ನೀಡಿದರು.
ಈ ಸುದ್ಧಿ ಓದಿದ್ದೀರಾ? ಧಾರವಾಡ | ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ ಲಾಡ್
ಈ ಸಂಧರ್ಭದಲ್ಲಿ ಬೆಳಗಾವಿ ಉತ್ತರ ವಲಯದ ಐಜಿಪಿ ಚೇತನಸಿಂಗ್ ರಾಥೋಡ್ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ ಮತ್ತು ಸಿ.ಐ.ಡಿ ಎಸ್.ಪಿ ರಶ್ಮಿ ಪರಡಿ ಉಪಸ್ಥಿತರಿದ್ದರು.





