ಧಾರವಾಡ | ಆರ್‌ಎಸ್‌ಎಸ್ ಪಥಸಂಚಲನ; ಮಾರ್ಗ ಬದಲಾವಣೆಯಿಂದ ಪ್ರಯಾಣಿಕರ ಪರದಾಟ

Date:

ಧಾರವಾಡದಲ್ಲಿ ನಡೆದ ಆರ್‌ಎಸ್‌ಎಸ್ ಪಥ ಸಂಚಲನದ ಪರಿಣಾಮ ಸಾರ್ವಜನಿಕ ಪ್ರಯಾಣಿಕರು ಪರದಾಡುವಂತ ವಾತಾವರಣ ಸೃಷ್ಠಿಯಾಗಿತ್ತು. ಈ ವೇಳೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪಥಸಂಚಲನ ರೂಪಿಸಿಕೊಳ್ಳಬೇಕು ಎಂದು ಜನರು ಆಕ್ರೋಶಗೊಂಡರು.

ನಗರದ ಕೆ. ಇ. ಬೋರ್ಡ್ ಮೈದಾನದಿಂದ್ ಮೂರು ತಂಡವಾಗಿ ಪಥ ಸಂಚಲನ ಶುರುವಾಗಿ ಸಿಬಿಟಿ, ಜುಬಲಿ ಸರ್ಕಲ್ ಮಾರ್ಗವಾಗಿ ಕೆಸಿಡಿ ಮೈದಾನವನ್ನು ಬಂದು ತಲುಪಿತು. ಇದರಿಂದ ನಗರದಲ್ಲಿ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆ ಮಾಡಲಾಗಿತ್ತು. ಇದರಿಂದ ಜನರು 3-4 ಕಿಮೀ ದೂರ ನಡೆದು ಬಸ್ಸುಗಳಿಗಾಗಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ನಗರದ ಹಳೆ ಬಸ್ ನಿಲ್ದಾಣದಿಂದ ಹೊಸ ಬಸ್ ನಿಲ್ದಾಣದವರೆಗೆ ಮಹಿಳೆಯರು, ಮಕ್ಕಳು, ವೃದ್ಧರು ನಡೆದುಕೊಂಡೇ ಹೋದರು. ಇನ್ನು ವಾಹನ ಸವಾರರು ಹಳೆ ಎಸ್.ಪಿ ಕೆಚೇರಿ, ರಾಣಿ ಚೆನ್ನಮ್ಮ ಪಾರ್ಕ್, ಸಬ್ ಜೈಲು ಮಾರ್ಗವಾಗಿ ಸಂಚರಿಸಲು ಹರಸಾಹಸಪಟ್ಟರು.

IMG 20251013 142344 edited
ಬಸ್ ಇಲ್ಲದೆ ನಡೆದು ಹೊರಟ ಪ್ರಯಾಣಿಕರು

ಈ ಕುರಿತು ಸಾರ್ವಜನಿಕರು ಮಾತನಾಡುತ್ತಾ, ಈಗ ನಡೆಯುತ್ತಿರುವ ಆರ್.ಎಸ್.ಎಸ್ ಪಥ ಸಂಚಲನದಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆ ಉಂಟಾಗುತ್ತಿದೆ. ಎಲ್ಲೆಂದರಲ್ಲಿ ಬಸ್ಸಿನವರು ಜನರನ್ನು ಇಳಿಸಿ ಹೋಗುತ್ತಿದ್ದಾರೆ. ಈ ಪಾದಯಾತ್ರೆಯು ರಸ್ತೆಯ ಒಂದೇ ಬದಿ ಹಿಡಿದು ಹೋಗಿದ್ದರೂ ನಡೆಯುತ್ತಿತ್ತು. ಇನ್ನೊಂದು ಬದಿಯಲ್ಲಿ ವಾಹನಗಳು ಸಂಚಾರ ಮಾಡುತ್ತಿದ್ದವು. ಯಾವುದೇ ಕಾರ್ಯಕ್ರಮವಾಗಲಿ ಜನಸಾಮಾನ್ಯರಿಗೆ ತೊಂದರೆ ಉಂಟು ಮಾಡಬಾರದು ಮೇಲಾಗಿ ಎಲ್ಲರಿಗೂ ಅನುಕೂಲ ಆಗುವಂತೆ ಇರಬೇಕು. ಇದೀಗ ವಯಸ್ಸಾದವರು, ಮಹಿಳೆಯರು 3 ಕಿಲೋಮೀಟರ್ ನಡೆದು ಹೋಗುವಂತ ಸ್ಥಿತಿ ಬಂದಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ಜಾಗತೀಕರಣದಿಂದ ಜೀವನದ ಮೌಲ್ಯಗಳು ಬದಲಾಗುತ್ತಿವೆ: ಐ. ಜಿ. ಸನದಿ

ಧಾರವಾಡ ನಗರವೆಲ್ಲ ಭಾಗಶಃ ಕೇಸರಿಮಯವಾಗಿತ್ತು. ತಲೆಯ ಮೇಲೆ ಕರಿಯ ಟೋಪಿ, ಬಿಳಿಯ ಅಂಗಿ, ಖಾಕಿ ಪ್ಯಾಂಟು, ಕೈಯಲ್ಲೊಂದು ಕೋಲು ಹಿಡಿದುಕೊಂಡ ದೃಶ್ಯ ಎದ್ದು ಕಾಣುತ್ತಿತ್ತು. ಅನೇಕ ಚಿಕ್ಕಮಕ್ಕಳೂ ಇದರಲ್ಲಿ ಭಾಗವಹಿಸಿದ್ದರು. ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ, ಈರೇಶ್ ಅಂಚಟಗೇರಿ ಸೇರಿದಂತೆ ಬಿಜೆಪಿಯ ವಿವಿಧ ರಾಜಕೀಯ ಮುಖಂಡರು, ನಾಯಕರು, ಕಾರ್ಯಕರ್ತರು ಪಾಲ್ಗೊಂಡಿದ್ದರು. ಇದರ ಹೊರಗೆ ಜನರು ಸಂತೆ ಚೀಲ ಹೊತ್ತು, ಹೆಣ್ಣುಮಕ್ಕಳು ಮಕ್ಕಳನ್ನು ಎತ್ತಿಕೊಂಡು, ವೃದ್ಧರು ಕಷ್ಟಪಟ್ಟು ನಡೆಯುವ ದೃಶ್ಯ ಕಣ್ಣಿಗೆ ಕಟ್ಟುವಂತೆ ಇತ್ತು. ಜನರನ್ನು ಇಳಿಸಲು ಸಾರಿಗೆ ಬಸ್ಸುಗಳು ಎಲ್ಲೆಂದರಲ್ಲಿ ನಿಲ್ಲುವುದು ಕಾಣುತ್ತಿತ್ತು. ಇದರಿಂದ ಸಾರ್ವಜನಿಕರು ಹಿಡಿ ಶಾಪ್ ಹಾಕುತ್ತಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...