ಧಾರವಾಡ | ಅವಳಿನಗರ ವ್ಯಾಪ್ತಿಯಲ್ಲಿ ಆ.26ರಿಂದ ಸೆ.07ರವರೆಗೆ ಮದ್ಯ ಮಾರಾಟ, ಮದ್ಯಪಾನ ನಿಷೇಧ

Date:

ಗಣೇಶ ಚತುರ್ಥಿ ಹಾಗೂ ಈದ್-ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮದ್ಯಪಾನ, ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ನಿಷೇಧಿಸಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಮತ್ತು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಎನ್ ಶಶಿಕುಮಾರ ಆಜ್ಞೆ ಹೊರಡಿಸಿದ್ದಾರೆ.

ಈ ಕುರಿತು ಆದೇಶಿಸಿರುವ ಅವರು, “ಹುಬ್ಬಳ್ಳಿ-ಧಾರವಾಡದಲ್ಲಿ ಆಗಸ್ಟ್‌ 26ರ ರಾತ್ರಿ 11.59ರಿಂದ 28ರ ಬೆಳಿಗ್ಗೆ 6ರವರೆಗೆ ಮತ್ತು 30ರ ರಾತ್ರಿ 11.59ರಿಂದ ಸೆಪ್ಟೆಂಬರ್‌ 1ರ ಬೆಳಿಗ್ಗೆ 6ರವರೆಗೆ, ಸೆ.1ರ ರಾತ್ರಿ 11.59ರಿಂದ ಸೆ.3ರ ಬೆಳಿಗ್ಗೆ 6ರವರಗೆ ಹಾಗೂ ಸೆ.3ರ ರಾತ್ರಿ 11.59ರಿಂದ ಸೆ.7ರ ಬೆಳಿಗ್ಗೆ 6ರವರಗೆ ಮದ್ಯಪಾನ, ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ, ಆದೇಶಿಸಿದ್ದಾರೆ.

ಈ ದಿನಾಂಕಗಳಂದು ಭಾರತೀಯ ತಯಾರಿಕೆ ಮದ್ಯದ ಅಂಗಡಿಗಳು, ಬಿಯರ್ ಬಾರ್‌ಗಗಳು, ಕ್ಲಬ್‍ಗಳು ಮತ್ತು ಹೊಟೇಲ್‍ಗಳಲ್ಲಿ ಮದ್ಯ ಮರಾಟ, ಮದ್ಯ ಸಾಗಾಟ ಮತ್ತು ಮದ್ಯ ಸೇವೆನೆಯನ್ನು ನಿಷೇಧಿಸಿ, ಮದ್ಯದ ಅಂಗಡಿಗಳು, ಹೊಟೇಲ್‍ಗಳಲ್ಲಿರುವ ಬಾರ್‌ಗಳನ್ನು ಈ ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಮುಚ್ಚಿಸಬೇಕು. ಇದಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ವಲಯ ಅಬಕಾರಿ ಇನ್‌ಸ್ಪೆಕ್ಟರ್ ಹಾಗೂ ಉಪವಿಭಾಗ ಅಬಕಾರಿ ಅಧೀಕ್ಷಕರು ಕರ್ನಾಟಕ ಅಬಕಾರಿ ಕಾಯ್ದೆ- 1965ರ ಕಲಂ 21(2)ರ ಅನ್ವಯ ಅವಶ್ಯಕತೆ ಕಂಡುಬಂದಲ್ಲಿ, ಶಾಂತಿ ಪಾಲನೆಗಾಗಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಳ್ತಂಗಡಿ | ಕೋಮು ದ್ವೇಷದ ಹೇಳಿಕೆ; ವಸಂತ್ ಗಿಳಿಯಾರ್ ವಿರುದ್ಧ ದೂರು ದಾಖಲು

ಧಾರವಾಡ ಅಬಕಾರಿ ಉಪ ಆಯುಕ್ತರು, ಹುಬ್ಬಳ್ಳಿ-ಧಾರವಾಡ ಡಿಸಿಪಿ(ಕಾ.ಮತ್ತು.ಸು) ಹಾಗೂ ಅವರ ಅಧೀನ ಅಧಿಕಾರಿಗಳು, ಧಾರವಾಡ ಹೆಚ್ಚುವರಿ ಅಬಕಾರಿ ಅಧೀಕ್ಷಕರು ಮತ್ತು ಹುಬ್ಬಳ್ಳಿ ಅಬಕಾರಿ ಉಪ ಅಧೀಕ್ಷಕರು ಇವರು ತಮ್ಮ ವ್ಯಾಪ್ತಿಯಲ್ಲಿ ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಜರುಗಿಸಬೇಕು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...