ಧಾರವಾಡ | ದ.ರಾ. ಬೇಂದ್ರೆ ಜನ್ಮದಿನವನ್ನು ಕವಿದಿನ ಎಂದು ಘೋಷಿಸಲು ಸರಜೂ ಕಾಟ್ಕರ್ ಆಗ್ರಹ

Date:

44 ವರ್ಷಗಳು ಗತಿಸಿದರೂ ಸಹ ದ.ರಾ.ಬೇಂದ್ರೆಯವರು ತಮ್ಮ ಸಾಹಿತ್ಯದ ಮೂಲಕ ಓದುಗರ ಜನಮಾನಸದಲ್ಲಿ ಹಾಸುಹೊಕ್ಕಾಗಿದ್ದಾರೆ. ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವುದರ ಜೊತೆಗೆ ಅವರ ಜನ್ಮದಿನ ಜನೆವರಿ 31 ನ್ನು ಕವಿದಿನ ಎಂದು ಘೋಷಣೆ ಮಾಡಬೇಕೆಂದು ಬೇಂದ್ರೆ ಟ್ರಸ್ಟ್ ಅಧ್ಯಕ್ಷ ಡಾ. ಸರಜೂ ಕಾಟ್ಕರ್ ಕರ್ನಾಟಕ ಸರ್ಕಾರಕ್ಕೆ ಆಗ್ರಹಿಸಿದರು.

ಅಕ್ಟೋಬರ್ 26ರಂದು ನಡೆದ ಬೇಂದ್ರೆಯವರ 44 ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 44 ವರ್ಷಗಳ ಹಿಂದೆ ದೀಪಾವಳಿಯ ನರಕ ಚತುದರ್ಶಿಯಂದೇ ದ.ರಾ.ಬೇಂದ್ರೆಯವರು ಅಸ್ತಂಗತರಾಗಿದ್ದು, ಇಡೀ ಕನ್ನಡ ಸಾರಸ್ವತ ಲೋಕಕ್ಕೆ ಕತ್ತಲೆ ಆವರಿಸಿದಂತಾಗಿತ್ತು. ಬೇಂದ್ರೆಯವರ ಕಾವ್ಯವು ನವನವೀನವಾದ ಕಾವ್ಯಗಳಾಗಿವೆ. ಅವುಗಳನ್ನು ಎಷ್ಟು ಸಲ ಓದುತ್ತೇವೆಯೋ ಅಷ್ಟು ಹೊಸ ಹೊಸ ಅರ್ಥಗಳನ್ನು ನೀಡುತ್ತವೆ ಎಂದರು.

ಮುಖ್ಯ ಅತಿಥಿಯಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ ಮಾತನಾಡಿ, ಬದುಕಿನ ಮೌಲ್ಯಗಳನ್ನು ಬಹಳಷ್ಟು ಗಾಢವಾಗಿ ತಮ್ಮ ಸಾಹಿತ್ಯದ ಮೂಲಕ ತೋರಿಸಿಕೊಟ್ಟವರು ಬೇಂದ್ರೆ. ಬೇಂದ್ರೆಯವರ ಸಾಹಿತ್ಯವನ್ನು ಸ್ಪರ್ಶಿಸುವುದು, ಅವರ ಕಾವ್ಯವನ್ನು ಪ್ರವೇಶಿಸುವುದು ಸಾಮಾನ್ಯವಾದುದಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
FB IMG 1761790593139

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭ ಮಾತನಾಡಿ, ಬೇಂದ್ರೆಯವರು ಅಜ್ಜಿ ಗೋಧುಬಾಯಿ, ತಾಯಿ ಅಂಬವ್ವ ಅವರಿಂದ ಬಹಳಷ್ಟು ಪ್ರಭಾವಿತರಾಗಿದ್ದರು. ಹೆಂಡತಿಯನ್ನು ಸಖೀಯನ್ನಾಗಿ ನೋಡಿದವರು. ತಾಯಿ ಹೆಸರನ್ನೊಳಗೊಂಡು ತಮ್ಮ ಕಾವ್ಯನಾಮವನ್ನು ಅಂಬಿಕಾತನಯದತ್ತ ಎಂದು ಇಟ್ಟಿರುವುದು ಅವರ ಸ್ತ್ರೀಪರ ವಿಶೇಷ ನೋಟವನ್ನು ಗಮನಿಸಬಹುದಾಗಿದೆ. ಇಂದಿನ ಮಕ್ಕಳಿಗೆ ಬೇಂದ್ರೆಯವರ ಕಾವ್ಯದ ಸೊಗಡನ್ನು ಅರ್ಥೈಸಬೇಕಿದೆ ಎಂದರು.

ಧಾರವಾಡದ ಗಾಯಕಿ ವಿದುಷಿ ರಾಧಾ ದೇಸಾಯಿ ಮತ್ತು ವೃಂದದವರು. ಡಾ.ದ.ರಾ.ಬೇಂದ್ರೆಯವರ ಗೀತೆಗಳ ಗಾಯನ ಪ್ರಸ್ತುತ ಪಡಿಸಿದರು. ಅಪೂರ್ವಾ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು.

ಈ ಸುದ್ಧಿ ಓದಿದ್ದೀರಾ? ಹುಬ್ಬಳ್ಳಿ | ವೋಟ್ ಚೋರಿ; ಆಧಾರ ಸಹಿತವಾಗಿ ಬಹಿರಂಗ ಮಾಡುತ್ತೇವೆ: ಮಯೂರ್ ಜಯಕುಮಾರ್

ಟ್ರಸ್ಟ್ ಸದಸ್ಯ ಕಾರ್ಯದರ್ಶಿ ಕುಮಾರ ಬೆಕ್ಕೇರಿ, ಸದಸ್ಯ ಡಾ.ಶಿಲಾಧರ ಮುಗಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ.ಅಶೋಕ ಶೆಟ್ಟರ, ಡಾ. ಶರಣಮ್ಮ ಗೊರೇಬಾಳ, ಇಮಾಮಸಾಬ್ ವಲ್ಲೆಪ್ಪನವರ, ಪ್ರಭು ಕುಂದರಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...