ಧಾರವಾಡ | ಸ್ವಯಂ ಉದ್ಯೋಗದಿಂದ ಮಹಿಳೆಯರಿಗೂ ಆರ್ಥಿಕ ಬಲವರ್ಧನೆ ಸಾಧ್ಯ: ಸ್ವರೂಪಾ ಟಿ ಕೆ

Date:

ಸ್ವಯಂ ಉದ್ಯೋಗದಿಂದ ಮಹಿಳೆಯರಿಗೂ ಆರ್ಥಿಕ ಬಲವರ್ಧನೆ ಸಾಧ್ಯ ಎಂದು ಧಾರವಾಡ ಜಿಲ್ಲಾ‌ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಸ್ವರೂಪಾ ಟಿ ಕೆ ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಧಾರವಾಡ ಸಂಜೀವಿನಿ ಜಿಲ್ಲಾ ಅಭಿಯಾನ ನಿರ್ವಹಣಾ ಘಟಕದಿಂದ ಹಮ್ಮಿಕೊಂಡಿದ್ದ ನಾಗರ ಪಂಚಮಿ ಹಬ್ಬದ ಪ್ರಯುಕ್ತ ಸ್ವಸಹಾಯ ಸಂಘಗಳ ಸದಸ್ಯರು ತಯಾರಿಸಿದ ಸಿಹಿ ತಿನಿಸುಗಳು ಹಾಗೂ ಇತರೆ ವಸ್ತುಗಳ ಮಾರಾಟ ಮೇಳ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸ್ವಯಂ ಉದ್ಯೋಗ 3

“ಸ್ವಸಹಾಯ ಸಂಘದ ಸದಸ್ಯರು ಸ್ವಯಂ ಉದ್ಯೋಗ ಮಾಡಿ ಆರ್ಥಿಕ ಬಲವರ್ಧನೆಯಾದಾಗ ಮಾತ್ರ ಒಕ್ಕೂಟಗಳು ಬಲವರ್ಧನೆಯಾಗುತ್ತವೆ” ಎಂದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸ್ವಯಂ ಉದ್ಯೋಗ 1

ಸಂಜೀವಿನಿ ಸ್ವಸಹಾಯ ಸಂಘದ ಮಹಿಳೆಯರು ತಯಾರಿಸಿದ ಕುಂದಗೋಳ ತಾಲೂಕಿನ ಬಸವೇಶ್ವರ ಸ್ತ್ರೀಶಕ್ತಿ ಸಂಘದ ಸದಸ್ಯೆ ಶೇಂಗಾ ಉಂಡೆ, ಚಕ್ಕುಲಿ, ಉಳ್ಳಡಿಕೆ, ಅಳ್ನಾವರ ತಾಲೂಕಿನ ಕುಂಬಾರಕೊಪ್ಪ ಸಂಘದ ಸದಸ್ಯರು ವಿವಿಧ ರೀತಿಯ ಬಳೆಗಳು, ಸಾವಯವ ಕುಸುಬಿ ಎಣ್ಣೆ, ನವಲಗುಂದ ತಾಲೂಕಿನ ಮೊರಬ ಸಂಘದ ಸದಸ್ಯರು ಎಳ್ಳುಂಡೆ, ಲಡಿಕೆ ಉಂಡೆ, ರವೆ ಉಂಡೆ, ಸಿಹಿ ತಿನಿಸುಗಳು, ಹುಬ್ಬಳ್ಳಿ ತಾಲೂಕಿನ ಅಗಡಿ ಸಂಘದ ಸದಸ್ಯರು ವಿವಿಧ ರೀತಿಯ ಕ್ರಿಯಾ ಭಸ್ಮ, ಕರ್ಪೂರ, ಹುಬ್ಬಳ್ಳಿ ತಾಲೂಕಿನ ಹಳಿಯಾಳ ಸ್ವಸಹಾಯ ಸಂಘದ ಸದಸ್ಯರು ಸಾವಯವ ಖಾರದ ಪುಡಿ, ಅರಿಶಿಣ, ಶೇಂಗಾದ ಹೋಳಿಗೆ, ವಿವಿಧ ರೀತಿ ಉಪ್ಪಿನಕಾಯಿ, ರೊಟ್ಟಿ, ನವಲಗುಂದ ತಾಲೂಕಿನ ತಿರ್ಲಾಪುರ ಸ್ವಸಹಾಯ ಸಂಘದ ಸದಸ್ಯರ ರಾಗಿ ರೊಟ್ಟಿ ಊಟ ಗಮನ ಸೆಳೆಯುತ್ತಿತ್ತು.

ಸ್ವಯಂ ಉದ್ಯೋಗ 2

ಕಲಘಟಗಿ ತಾಲೂಕಿನ ದುಮ್ಮವಾಡ ಸಂಘದ ಸದಸ್ಯರು ನಾಗಪ್ಪ, ಸ್ಟೇಷನರಿ ನವಲಗುಂದ ತಾಲೂಕಿನ ತಿರ್ಲಾಪುರ್ ಸಂಘದ ಸದಸ್ಯರು ಸಾವಯವ ಅರಿಶಿಣ, ಮಸಾಲಾ ಪುಡಿ, ಜೋಳದ ಅಳ, ಧಾರವಾಡ ತಾಲೂಕಿನ ಯರಿಕೊಪ್ಪ ಸಂಘದ ಸದಸ್ಯರು ವಿವಿಧ ರೀತಿ ಎಲ್ಲ ತರಹದ ಉಂಡೆಗಳು, ಕುಂದಗೋಳ ತಾಲೂಕಿನ ಜಗದಂಬ ಸಂಘದ ಸದಸ್ಯರು ಸಿರಿಧಾನ್ಯದಿಂದ ತಯಾರಿಸಿದ ಸಿಹಿ ತಿಂಡಿಗಳು, ಧಾರವಾಡ ತಾಲೂಕಿನ ಮರೇವಾಡ ಸಂಘದ ಸದಸ್ಯರು, ಉತ್ತರ ಕರ್ನಾಟಕದ ಜವಾರಿ ಊಟ, ಕುಂದಗೋಳ ತಾಲೂಕಿನ ಹಿರೇಹರಕುಣಿ ಸಂಘದ ಸದಸ್ಯರು ರಾಗಿ, ಜೋಳದ ಊಟ, ಕಲಘಟಗಿ ತಾಲೂಕಿನ ಬಿ ಬಸವನಕೊಪ್ಪ ಸಂಘದ ಸದಸ್ಯರು ದ್ವಿದಳ ಧಾನ್ಯ ಊಟ ಹಾಗೂ ವಸ್ತು ಮಾರಾಟ ಮೇಳದಲ್ಲಿ ಭಾಗವಹಿಸಿದ್ದರು.‌

ಈ ಸುದ್ದಿ ಓದಿದ್ದೀರಾ? ರಾಯಚೂರು | ಬೀಡಾಡಿ ದನಗಳ ಹಾವಳಿ; ಸ್ಥಳೀಯರಿಗೆ ಕಿರಿಕಿರಿ

ಜಿಲ್ಲಾ ಪಂಚಾಯತ್ ಸಿಬ್ಬಂದಿ ವರ್ಗ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕಿ ರೇಖಾ ಡೊಳ್ಳಿನ, ಸಂಜೀವಿನಿಯ ಎಲ್ಲ ತಾಲೂಕು ಸಿಬ್ಬಂದಿ ವರ್ಗ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು, ಸ್ವಸಹಾಯ ಸಂಘದ ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...