ಧಾರವಾಡ | ತೈಲ ಬೆಲೆ ವಿಚಾರದಲ್ಲಿ ಹೋರಾಟ ನಡೆಸುತ್ತಿರುವ ಬಿಜೆಪಿಗೆ ನಾಚಿಕೆಯಾಗಬೇಕು: ಸಲೀಂ ಅಹ್ಮದ್

Date:

ಪೆಟ್ರೊಲ್ ಬೆಲೆ ಹೆಚ್ಚಳದ ವಿಚಾರದಲ್ಲಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ನಿರಂತವಾಗಿ ಬೆಲೆ ಏರಿಸಿ, ಈಗ ಪ್ರತಿಭಟಿಸುತ್ತಿರುವ ಬಿಜೆಪಿಗರಿಗೆ ನಾಚಕೆಯಾಗಬೇಕು. ಪ್ರತಿಭಟನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೀಳು ಮಟ್ಟದ ಪದ ಬಳಕೆ ಮಾಡಿರುವ ಗಂಗಾವತಿ ಶಾಸಕ, ಅಯೋಗ್ಯ ಜನಾರ್ದನ ರೆಡ್ಡಿ ಕೂಡಲೇ ಕ್ಷಮೆ ಕೇಳಬೇಕೆಂದು ವಿಧಾನ ಪರಿಷತ್‌ ಮುಖ್ಯ ಸಚೇತಕ ಸಲೀಂ ಅಹ್ಮದ್‌ ಆಗ್ರಹಿಸಿದ್ದಾರೆ.

ಧಾರವಾಡದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. “ತೈಲ ಬೆಲೆ ಹೆಚ್ಚಳ ಬಗ್ಗೆ ಬಿಜೆಪಿಯವರು ಪ್ರಜಾಸತ್ತಾತ್ಮಕವಾಗಿ ಪ್ರತಿಭಟಿಸುವುದರಲ್ಲಿ ನ್ಯಾಯವಿದೆ. ಆದರೆ, ಮುಖ್ಯಮಂತ್ರಿಗಳ ಬಗ್ಗೆ ಕೆಟ್ಟ ಪದ ಬಳಕೆ ಮಾಡುವುದು ಸರಿಯಲ್ಲ. ತೈಲ ಬೆಲೆ ಹೆಚ್ಚಳದ ಬಗ್ಗೆ ಬೀದಿಗಿಳಿದು ಹೋರಾಟ ಮಾಡುತ್ತಿರುವ ಬಿಜೆಪಿಯವರಿಗೆ ನಾಚಿಕೆಯಾಗಬೇಕು. ಮೋದಿ ಆಡಳಿತಾವಧಿಯಲ್ಲಿ ತೈಲ ಹಾಗೂ ಅಡುಗೆ ಅನಿಲ ಬೆಲೆ ವಿಪರೀತ ಹೆಚ್ಚಳ ಮಾಡಿದ್ದನ್ನು ಅವರು ನೆನಪಿಸಿಕೊಳ್ಳಲಿ. 10 ವರ್ಷಗಳಿಂದ ಬಾಯಿ ಮುಚ್ಚಿಕೊಂಡಿದ್ದವರು ಇವಾಗ ಮಾತನಾಡುತ್ತಿದ್ದಾರೆ. ಆಗ ಯಾಕೆ ಮಾತನಾಡಲಿಲ್ಲ” ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...