ಧಾರವಾಡ | ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಚಾಲನೆ

Date:

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯಾದ್ಯಂತ ಆರಂಭಿಸಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಧಾರವಾಡ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ. ಈ ವೇಳೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಅವಳಿ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಸಮೀಕ್ಷಾ ಕಾರ್ಯವನ್ನು ಪರಿಶೀಲಿಸಿದರು.

ನಗರದ ಪೆಂಡಾರಗಲ್ಲಿ, ತಡಕೋಡ ಓಣಿ ಪ್ರದೇಶಗಳಲ್ಲಿ ಸಂಚರಿಸಿ, ಸಮೀಕ್ಷಿಕರು ಮಾಡುತ್ತಿರುವ ಸಮೀಕ್ಷೆಯನ್ನು ಪರಿಶೀಲಿಸಿ, ಸಮೀಕ್ಷೆದಾರರಿಂದ ಮಾಹಿತಿ ಪಡೆದು, ಮಾರ್ಗದರ್ಶನ ನೀಡುತ್ತಾ ಮಾತನಾಡಿ, ಸಮೀಕ್ಷಿಕರಿಗೆ ತರಬೇತಿ ನೀಡಲಾಗಿದೆ. ಸಮೀಕ್ಷೆ ನಿಯೋಜನೆ ಆಗಿರುವ ಸಿಬ್ಬಂದಿಗಳು ತಮಗೆ ಹಂಚಿಕೆ ಆಗಿರುವ ಮನೆ, ಕುಟುಂಬಗಳ ಮಾಹಿತಿಯನ್ನು ನಿಯಮಾನುಸಾರ ಭರ್ತಿ ಮಾಡಬೇಕು. ತಾಂತ್ರಿಕ ಸಮಸ್ಯೆಗಳು ಉಂಟಾದಲ್ಲಿ ಜಿಲ್ಲಾ ತಾಂತ್ರಿಕ ಸಮಾಲೋಚಕರಿಗೆ ಅಥವಾ ಸಹಾಯವಾಣಿಗೆ ಕರೆ ಮಾಡಿ, ಪರಿಹರಿಸಿಕೊಳ್ಳಬೇಕು. ಸಮೀಕ್ಷಿಕರು ತಮಗೆ ಗುರುತಿಸಿರುವ ಎಲ್ಲ ಮನೆ ಹಾಗೂ ಕುಟುಂಬಗಳ ಸಮೀಕ್ಷೆಯನ್ನು ಅಕ್ಟೋಬರ್ 7 ರೊಳಗೆ ಪೂರ್ಣಗೊಳಿಸಬೇಕು. ಪ್ರತಿದಿನ ಸಂಜೆ ಅಂದಿನ ಸಮೀಕ್ಷೆ ಕಾರ್ಯದ ಪ್ರಗತಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು ಎಂದರು.

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ಧಾರವಾಡ ಜಿಲ್ಲೆಯಲ್ಲಿ ಸೆಪ್ಟಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಒಟ್ಟು 16 ದಿನಗಳ ಕಾಲ ಸಮೀಕ್ಷೆ ಮಾಡಲು ನಿರ್ದೇಶನ ನೀಡಲಾಗಿದೆ. ಜಿಲ್ಲೆಯಲ್ಲಿ ಸುಮಾರು 5 ಲಕ್ಷ 46 ಸಾವಿರ ಕುಟುಂಬಗಳನ್ನು ಗುರುತಿಸಲಾಗಿದೆ. ಇದನ್ನು ಹೆಸ್ಕಾಂ ಇಲಾಖೆ ಮುಖಾಂತರ ಪ್ರತಿಯೊಂದು ಮನೆಗೂ ಪ್ರತ್ಯೇಕವಾಗಿ ಐಡಿ ಕೊಡುವ ಮುಖಾಂತರ ಅದನ್ನು ಗುರುತಿಸಿ, 150 ರಿಂದ 200 ಮನೆಗಳನ್ನು ಒಂದು ಗುಂಪಾಗಿ ವಿಂಗಡಿಸಲಾಗಿದೆ. ಜಿಲ್ಲೆಯಲ್ಲಿ 4,880 ಸಮೀಕ್ಷಿಕರು ಮತ್ತು ಮೇಲ್ವಿಚಾರಣೆ ಮಾಡುವುದಕ್ಕೆ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ. ಪ್ರತಿ ಹಂತದಲ್ಲೂ ರಾಜ್ಯ, ಜಿಲ್ಲಾ, ಒಂದೊಂದು ಬ್ಲಾಕ್ ಮಟ್ಟದಲ್ಲಿ ತರಬೇತಿಯನ್ನು ನೀಡಲು ಮಾಸ್ಟರ್ ಟ್ರೈನರ್‌ಗಳನ್ನು ಆಯ್ಕೆ ಮಾಡಿ ತರಬೇತಿ ನೀಡಲಾಗಿದೆ. ಸಾರ್ವಜನಿಕರು ಕೈ ಜೋಡಿಸಿ ಸಮೀಕ್ಷೆಯನ್ನು ಯಶಸ್ವಿ ಮಾಡಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ಧಿ ಓದಿದ್ದೀರಾ? ಧಾರವಾಡ | ಕುಂದಗೋಳ ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆ ವೈದ್ಯರೇ ಇಲ್ಲ; ಸಣ್ಣ ಚಿಕಿತ್ಸೆಗೂ ಪರದಾಡುತ್ತಿರುವ ರೋಗಿಗಳು!

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಭಾನುಮತಿ ಎಚ್., ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ, ತಾಲೂಕು ವಿಸ್ತರಣಾ ಅಧಿಕಾರಿ ಸಂಜೀವ ಕೆಸರಿ, ಬ್ಲಾಕ್ ಮೇಲ್ವಿಚಾರಕರು, ನಿಲಯಪಾಲಕರು, ಸಮೀಕ್ಷಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...