ಧಾರವಾಡ | ಉದ್ಯೋಗಾಕಾಂಕ್ಷಿಗಳಿಗೆ ಪೊಲೀಸ್ ಇಲಾಖೆಯಿಂದ ವಿಶೇಷ ತರಬೇತಿ

Date:

ಉದ್ಯೋಗಾಕಾಂಕ್ಷಿಗಳಿಗೆ ಟಾಪ್ 10 ಪ್ರಶಿಕ್ಷಣಾರ್ಥಿಗಳ ಮೂಲಕ ವಿಶೇಷ ತರಬೇತಿ ನೀಡಲು ಹುಬ್ಬಳ್ಳಿ ಧಾರವಾಡ ಪೊಲೀಸ್ ಇಲಾಖೆಯಿಂದ ನಿರ್ಧರಿಸಲಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವವರಿಗೆ 10 ಶಾಲಾ- ಕಾಲೇಜುಗಳಲ್ಲಿ 5 ದಿನಗಳ ಕಾಲ ಉಚಿತ ಕಾರ್ಯಗಾರವನ್ನು ಹಮ್ಮಿಕೊಂಡಿದ್ದಾರೆ.

ಈ ಬಗ್ಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಅವಳಿನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ, ಇದೀಗ ಬೆಳಗಾವಿಯಲ್ಲಿ ಅಧಿವೇಶನ ನಡೆದಿದೆ. ಈ ಅಧಿವೇಶನಕ್ಕೆ ಹಲವಾರು ಕಡೆಗಳಿಂದ ಪಿಎಸ್​ಐ ಪ್ರಶಿಕ್ಷಣಾರ್ಥಿಗಳು ಬಂದಿದ್ಧಾರೆ. ಇದೇ ವೇಳೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಹೀಗಾಗಿ ಉದ್ಯೋಗಾಕಾಂಕ್ಷಿಗಳಿಗಾಗಿ ವಿಶೇಷ ಕೋಚಿಂಗ್ ನೀಡಲು ನಿರ್ಧರಿಸಲಾಗಿದೆ. ನಗರದ ಹತ್ತು ಕಾಲೇಜು ಹಾಗೂ ಕೋಚಿಂಗ್ ಸೆಂಟರ್​ಗಳಲ್ಲಿ ಇಂದಿನಿಂದಲೇ ತರಬೇತಿ ಆರಂಭವಾಗಿದೆ. ಈಗಾಗಲೇ 2 ಸಾವಿರ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಧಾರವಾಡದ ಕೆ. ಸಿ.ಡಿ ಕಾಲೇಜು, ಗುರುಕುಲ ಪಿ.ಯು ಕಾಲೇಜು, ವೈದ್ಯಮಠ ಕಾಂಪ್ಲೆಕ್ಸ್, ಗುರುದೇವ ಪಿ.ಯು. ಕಾಲೇಜು, ಪೂರ್ಣ ಪಿ.ಯು ಕಾಲೇಜು, ಪಾವಟೆನಗರದ ಕೆ.ಯು.ಡಿ ಕಾಲೇಜು, ಪ್ರಿಸಂ ಪಿ.ಯು ಕಾಲೇಜು, ಹಳಿಯಾಳನಾಕ ಸೃಷ್ಟಿ ಪಿ.ಯು ಕಾಲೇಜು, ಕ್ಲಾಸಿಕ್ ಪಿಯು/ಡಿಗ್ರಿ ಕಾಲೇಜು, ಭಾರತಿ ನಗರದ ಮದೀನಾ ಕಾಲೇಜು, ಸಿದ್ಧರಾಮೇಶ್ವರ ಕಾಲೇಜು ಒಟ್ಟು 10 ಶಾಲಾ-ಕಾಲೇಜುಗಳಲ್ಲಿ ಡಿ. 15 ಸೋಮವಾರ ಬೆಳಿಗ್ಗೆ 6:00 ಗಂಟೆಯಿಂದ 10:00 ಗಂಟೆವರೆಗೆ ನೋಂದಣಿ ಇರುತ್ತದೆ. ನೋಂದಣಿ ಮಾಡಿಕೊಂಡವರು ಮಾತ್ರ ಕಾರ್ಯಗಾರದಲ್ಲಿ ಪಾಲ್ಗೊಳ್ಳಬಹುದು. ಸೋಮವಾರದಿಂದ ಸಾಯಂಕಾಲ 4:00 ಗಂಟೆಯಿಂದ 8 ಗಂಟೆಯವರೆಗೆ ಕಾರ್ಯಗಾರ ಪ್ರಾರಂಭವಾಗಲಿದ್ದು, ನಂತರ ಪ್ರತಿದಿನ ಬೆಳಿಗ್ಗೆ 6 ರಿಂದ 10, ಸಾಯಂಕಾಲ 4 ರಿಂದ 8 ಗಂಟೆಯವರೆಗೆ ಕಾರ್ಯಗಾರ ನಡೆಯಲಿದೆ ಎಂದು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ಧಾರವಾಡ | ಗಾಂಜಾ ಮಾರಾಟ; ನಾಲ್ವರ ಬಂಧನ

ಪರಿಸರ ಮತ್ತು ಪರಿಸರ ವಿಜ್ಞಾನ ವಿಷಯದ ಕುರಿತು ಅಂದಪ್ಪ ಬಳಿಗಾರ, ಭೂಗೋಳಶಾಸ್ತ್ರ-ಮಾಲಾಶ್ರೀ ಜಾಧವ್, ಇತಿಹಾಸ-ಜಯಲಕ್ಷ್ಮಿ, ಪ್ರಚಲಿತ ವಿದ್ಯಮಾನಗಳು-ಅನಿಲ್‌ ಕುಮಾರ್, ಅರ್ಥಶಾಸ್ತ್ರ-ಎಮ್.ಡಿ. ಅಜರುದ್ದೀನ್, ನೀತಿ-ಪ್ರಶಾಂತ ಗೌಡ, ಸ್ಟಾಟಿಕ್ ಜಿಕೆ-ಕುಲದೀಪ್ ಕುಮಾರ್, ವಿಜ್ಞಾನ ಮತ್ತು ತಂತ್ರಜ್ಞಾನ-ಪ್ರದೀಪ್ ತೋಟಗೇ‌ರ್, ಅನುವಾದ ಮತ್ತು ನಿಖರತೆ, ಬರವಣಿಗೆ-ಸಂತೋಷ ಧೂಳಖೇಡ, ಪ್ರಬಂಧ-ನಂದಿನಿ ಕೆ.ಎಮ್. ಕಾರ್ಯಗಾರದಲ್ಲಿ ವಿಷಯವಾರು ಸಂವಾದ ನಡೆಸುವ ಅಧಿಕಾರಿಗಳು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...