ಧಾರವಾಡ | ಸಂಘಟಿತ ಅಪರಾಧ ಕೃತ್ಯ, ಮಾದಕ ವಸ್ತುಗಳ ನಿಯಂತ್ರಣಕ್ಕೆ ಕಠಿಣ ಪೊಲೀಸ್ ಕ್ರಮ ಅಗತ್ಯ: ಸಚಿವ ಸಂತೋಷ್ ಲಾಡ್

Date:

ಹುಬ್ಬಳ್ಳಿ ಧಾರವಾಡ ಮಹಾನಗರ ಸೇರಿದಂತೆ ಜಿಲ್ಲೆಯಲ್ಲಿ ಸಂಘಟಿತ ಅಪರಾಧ ಕೃತ್ಯಗಳನ್ನು ತಡೆಗಟ್ಟಿ ಇದರಲ್ಲಿ ಭಾಗವಹಿಸುವ ಮತ್ತು ಪ್ರೇರೆಪಿಸುವ ದುಷ್ಟ ವ್ಯಕ್ತಿ, ಶಕ್ತಿಗಳ ವಿರುದ್ಧ ಪೊಲೀಸ್ ಇಲಾಖೆ ಕಠಿಣಕ್ರಮ ಕೈಗೊಳ್ಳಬೇಕೆಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಧಾರವಾಡ ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ಆಯೋಜಿಸದ್ದ ಪೊಲೀಸ್, ಅಬಕಾರಿ, ರಾಷ್ಟ್ರೀಯ ಹೆದ್ದಾರಿ, ಲೋಕೋಪೋಯೋಗಿ ಇಲಾಖೆ ಅಧಿಕಾರಿಗಳ ಸಭೆ ಜರುಗಿಸಿ, ಪ್ರಗತಿ ಪರಿಶೀಲನೆ ಮಾಡಿ, ಮಾತನಾಡಿದರು.

“ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು. ಸಂಘಟಿತ ಅಪರಾಧಗಳ ನಿಯಂತ್ರಣಕ್ಕೆ ಸಮನ್ವಯತೆಯಿಂದ ಕೆಲಸ ಮಾಡಬೇಕು. ಪ್ರತಿ ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳು ಜನ ಸ್ನೇಹಿಯಾಗಿ ವರ್ತಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯುವಸಮೂಹವನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಕುರಿತು ಪೊಲೀಸ್ ಇಲಾಖೆ ಗಮನ ಹರಿಸಿ ಇಂತಹ ಕೃತ್ಯಗಳಲ್ಲಿ ಭಾಗವಹಿಸುವವರನ್ನು ಬಂಧಿಸಿ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಮತ್ತು ಮಾದಕ ವಸ್ತುಗಳ ಬಳಕೆಯಿಂದ ಆಗುವ ಹಾನಿ ಹಾಗೂ ಅಪರಾಧ ಕೃತ್ಯದ ಕುರಿತು ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು” ಎಂದು ತಿಳಿಸಿದರು.

“ಅವಳಿ ನಗರದಲ್ಲಿ ನೂರಾರಕ್ಕೂ ಹೆಚ್ಚು ಕಾಲೇಜುಗಳಿವೆ. ಎಂಜಿನಿಯರಿಂಗ್, ಡೆಂಟಲ್, ವೈದ್ಯಕೀಯ, ಕಾಲೇಜುಗಳ ಸುತ್ತಮುತ್ತ ಹಾಗೂ ಹಾಸ್ಟೆಲ್‍ಗಳಲ್ಲಿ ಮಫ್ತಿಯಲ್ಲಿ ಹಾಗೂ ಅನಿರೀಕ್ಷಿತ ಭೇಟಿ ಕೈಗೊಂಡು ಅಪರಾಧ ಕೃತ್ಯಗಳ ಬಗ್ಗೆ ತೀವ್ರನಿಗಾ ವಹಿಸಬೇಕು. ಯುವಪೀಳಿಗೆ ದಾರಿ ತಪ್ಪದಂತೆ ಪೊಲೀಸ್ ಇಲಾಖೆ ಪ್ರಬಲ ಅಸ್ತ್ರವಾಗಬೇಕು. ಇಂದಿನ ಈ ಸಭೆಯು ಸಲಹಾತ್ಮಕ ಮಾರ್ಗದರ್ಶಿ ಸಭೆಯಾಗಿದ್ದು, ಮುಂಬರುವ ದಿನಗಳಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಡ್ರಗ್ಸ್, ಸಂಘಟಿತ ಅಪರಾಧ ತಡೆಗೆ ಕೈಗೊಂಡ ಕ್ರಮಗಳ ಬಗ್ಗೆ ಪ್ರತ್ಯಕ ಸಭೆ ಜರುಗಿಸಲಾಗುವುದು” ಎಂದು ಸಚಿವರು ತಿಳಿಸಿದರು.

“ಅಬಕಾರಿ ಇಲಾಖೆ ಇನ್ನಷ್ಟು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಬೇಕು. ಮಕ್ಕಳು ಮದ್ಯ ಮಾರಾಟ ಹಾಗೂ ಸೇವನೆ ಮಾಡದಂತೆ ಎಚ್ಚರಿಕೆ ವಹಿಸಬೇಕು. ಮದ್ಯ ಮಾರಾಟ ಲೈಸನ್ಸ್‍ದಾರರು ಕಾನೂನು ಬಾಹಿರವಾಗಿ ಮದ್ಯ ಮಾರಾಟ ಮಾಡುವುದು ಬೇಡ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಅಬಕಾರಿ ಅಧಿಕಾರಿಗಳು ತಕ್ಷಣ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಮತ್ತು ಲೈಸನ್ಸ್ ರದ್ದು ಪಡಿಸಲು ಕ್ರಮ ವಹಿಸಬೇಕೆಂದು ಸಚಿವರು ಸೂಚಿಸಿದರು.

“ಜಿಲ್ಲೆಯಲ್ಲಿ ಸಂಘಟಿತ ಅಪರಾಧಗಳನ್ನು ತಡೆಯಬೇಕು. ಮಾದಕ ವಸ್ತುಗಳ ಮಾರಾಟವನ್ನು ನಿಯಂತ್ರಿಸಬೇಕು ಮತ್ತು ಅವಳಿನಗರದ ಸಂಚಾರ ವ್ಯವಸ್ಥೆ ಸುಗಮವಾಗಬೇಕು. ಅದಕ್ಕೆ ಬೇಕಾದ ಸಂಪೂರ್ಣ ಸಹಕಾರವನ್ನು ನಮ್ಮ ಕಡೆಯಿಂದ ನೀಡಲಾಗುವುದು” ಎಂದರು.

“ಈ ಕಾರ್ಯಗಳನ್ನು ಅಧಿಕಾರಿಗಳು ಕೇವಲ ಕರ್ತವ್ಯವೆಂದು ಭಾವಿಸದೆ, ಹೃದಯದಿಂದ ನಮ್ಮ ಜಿಲ್ಲೆ ಅಭಿಮಾನದಿಂದ ಮಾಡುವ ಮೂಲಕ ಇತರ ಜಿಲ್ಲೆಗಳಿಗೆ ಧಾರವಾಡ ಜಿಲ್ಲೆ ಮಾದರಿ ಜಿಲ್ಲೆಯಾಗುವಂತೆ ಮಾಡಬೇಕು” ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿದ್ದು, ಮುಂದಿನ ದಿನಗಳಲ್ಲಿ ಅಪರಾಧ ಹಾಗೂ ಮಾದಕ ವಸ್ತುಗಳ ನಿಯಂತ್ರಣವಾಗದಿದ್ದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಸಚಿವ ಸಂತೋಷ ಲಾಡ್ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, “ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಅಕ್ರಮವಾಗಿ ಮತ್ತು ಕಾನೂನು ಬಾಹಿರವಾಗಿ ಮದ್ಯ ಮಾರಾಟ ಮಾಡುವುದನ್ನು ನಿಯಂತ್ರಿಸಿ, ಹಲವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅಪರಾಧ ಕೃತ್ಯಗಳ ನಿಯಂತ್ರಣಕ್ಕೆ ಜಿಲ್ಲಾ ಪೊಲೀಸ್ ಹಾಗೂ ಮಹಾನಗರ ಪೊಲೀಸ್ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದು, ಗಸ್ತು ಹೆಚ್ಚಿಸಲಾಗಿದೆ. ಅಪರಾಧ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಸಂಚಾರಿ ವ್ಯವಸ್ಥೆ ಸುಧಾರಣೆಗೆ ಪೊಲೀಸ್ ಇಲಾಖೆ ಶ್ರಮಿಸುತ್ತಿದೆ” ಎಂದು ಹೇಳಿದರು.

ಮಹಾನಗರ ಪೊಲೀಸ್ ಆಯುಕ್ತ ಸಂತೋಷ ಬಾಬು ಮಾತನಾಡಿ, “ಮಹಾನಗರ ವ್ಯಾಪ್ತಿಯಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗವಹಿಸುವ ಅಪರಾಧಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಾಗುತ್ತಿದೆ. ಬಿಟ್ ವ್ಯವಸ್ಥೆಯನ್ನು ಬಿಗಿಗೊಳಿಸಿ, ಪ್ರತಿ ಪೊಲೀಸ್ ಸಿಬ್ಬಂದಿ ತನಗೆ ನೀಡಿರುವ ಬಿಟಟ್‌ನಲ್ಲಿ ಸಮಗ್ರ ಅವಲೋಕನ ಮಾಡಿ, ಕಡ್ಡಾಯವಾಗಿ ವರದಿ ನೀಡುವಂತೆ ಸೂಚಿಸಲಾಗಿದೆ. ಮಹಾನಗರದಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು, ಸಾರ್ವಜನಿಕರಿಗೆ ಇಲಾಖೆಯಿಂದ ಸಾಕಷ್ಟು ಮಾಹಿತಿ ನೀಡಿ, ಜಾಗೃತಿಗೊಳಿಸಲಾಗಿದೆ. ಆದರೂ ಹಲವು ರೀತಿಯ ಆಮಿಷಗಳಿಗೆ ಒಳಗಾಗಿ ಹಣ, ಬೆಲೆಬಾಳುವ ವಸ್ತುಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಸೈಬರ್ ಅಪರಾಧ ಜರುಗಿದ ತಕ್ಷಣ ಮಾಹಿತಿ ನೀಡಿದರೆ, ಪ್ರಕರಣ ಬೇಧಿಸಿ, ಅಪರಾಧಿಗಳನ್ನು ಪತ್ತೆಹಚ್ಚಬಹುದು ಮತ್ತು ಸ್ವತ್ತು ರಕ್ಷಿಸಬಹುದು” ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಮಾತನಾಡಿ, “ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಪೊಲೀಸ್ ಸಂಚಾರ ತೀವೃಗೊಳಿಸಲಾಗಿದೆ. ಅಪರಾಧ ಘಟಿಸಿದ ವೇಳೆ ಪೊಲೀಸ್ ಸಹಾಯವಾಣಿ 112ಕ್ಕೆ ಕರೆ ಮಾಡಿದ ಕೂಡಲೇ ಸ್ಪಂಧಿಸಲಾಗುತ್ತಿದೆ. ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಡೆಯಲು ಅಬಕಾರಿ ಇಲಾಖೆಯೊಂದಿಗೆ ಜಂಟಿ ದಾಳಿ ನಡೆಸಿ, ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಹೆದ್ದಾರಿ ವಿಸ್ತೀರ್ಣ, ಕೆಳಸೇತುವೆಗಳ ನಿರ್ಮಾಣ ಮತ್ತು ಹೆದ್ದಾರಿ ಪಕ್ಕದ ಗ್ರಾಮಗಳ ಸಂಪರ್ಕ ರಸ್ತೆ ನಿರ್ಮಿಸುವ ಮೂಲಕ ಅಪಘಾತಗಳ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕರಾವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ: ಐವರು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ಬಂಧನ

ಉಪ ಪೊಲೀಸ್ ಆಯುಕ್ತ ಡಾ.ಗೋಪಾಲ ಬ್ಯಾಕೋಡ್ ಮಾತನಾಡಿ, “ಮಹಾನಗರ ವ್ಯಾಪ್ತಿಯಲ್ಲಿ ಪ್ರಸ್ತುತ ವರ್ಷದಲ್ಲಿ ಈವರೆಗೆ 74 ವಿವಿಧ ರೀತಿಯ ಅಪರಾಧ ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ 33 ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಉಳಿದ ಪ್ರಕರಣಗಳ ತನಿಖೆ ಪ್ರಗತಿಯಲ್ಲಿದೆ” ಎಂದು ಅವರು ಹೇಳಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ್ ಉಳ್ಳಾಗಡ್ಡಿ, ಅಬಕಾರಿ ಇಲಾಖೆ ಉಪ ಆಯುಕ್ತ ಕೆ ಪ್ರಶಾಂತಕುಮಾರ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಶಶಿಧರ ಚನ್ನಪ್ಪ ಗೌಡರ, ವಿಶ್ವಜ್ಞ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಪೊಲೀಸ್, ಅಬಕಾರಿ ಇಲಾಖೆಗಳ ಹಿರಿಯ ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...