ಧಾರವಾಡ | ಎಸ್‌ಐಆರ್ ಕೈಬಿಡಲು ಚುನಾವಣಾ ಆಯೋಗಕ್ಕೆ ಎಸ್‌ಯುಸಿಐ ಒತ್ತಾಯ

Date:

ದೇಶದಲ್ಲಿ ಅತ್ಯಂತ ವಿವಾದಕ್ಕೆ ಒಳಗಾದ ಮತ್ತು ದುಡಿಯುವ ಜನರ ಮೂಲಭೂತ ಹಕ್ಕುಗಳಿಗೆ ಸಂಚಕಾರ ತರುತ್ತಿರುವ ಆರೋಪದ ಮೇಲೆ SIR ಅನ್ನು ಕೈ ಬಿಡುವಂತೆ ಕೇಂದ್ರ ಚುನಾವಣಾ ಆಯೋಗವನ್ನು ಒತ್ತಾಯಿಸಿ, ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ನಗರದ ವಿವೇಕಾನಂದ ವೃತ್ತದಲ್ಲಿ SIR ಮತಪಟ್ಟಿಯ ತೀವ್ರತಮ ಪರಿಷ್ಕರಣೆ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಈ ಸಂಧರ್ಭದಲ್ಲಿ ಪಕ್ಷದ ರಾಜ್ಯ ಸೆಕ್ರೆಟರಿಯೆಟ್ ಸದಸ್ಯ ರಾಮಾಂಜನಪ್ಪ ಆಲ್ದಳ್ಳಿ ಮಾತನಾಡಿ, “ದೇಶದಲ್ಲಿ ಅತ್ಯಂತ ವಿವಾದಕ್ಕೆ ಒಳಗಾದಂತಹ ವಿಶೇಷ ತೀವ್ರತಮ ಪರಿಷ್ಕರಣೆ (SIR) ಕೋಟ್ಯಂತರ ಜನತೆಯಲ್ಲಿ ಆತಂಕ ಮೂಡಿಸಿದೆ. ಮತ ಪಟ್ಟಿಯ ಪರಿಷ್ಕರಣೆಯ ಉದ್ದೇಶ ಬಿಟ್ಟುಹೋದ ಮತದಾರರನ್ನು ಪಟ್ಟಿಯಲ್ಲಿ ಸೇರಿಸಿ ಮತದಾನದ ಹಕ್ಕನ್ನು ಜನತೆಗೆ ನೀಡುವುದು ಆಗಬೇಕೇ ವಿನಃ ಮತದಾನದ ಹಕ್ಕನ್ನು ಕಸಿಯುದಲ್ಲ. ಆದರೆ ಬಿಹಾರದಲ್ಲಿ ನಡೆದ ವಿದ್ಯಮಾನ ಇದಕ್ಕೆ ವಿರುದ್ಧವಾಗಿದೆ. ಈ ಪರಿಷ್ಕರಣೆಯಲ್ಲಿ ಸುಮಾರು 65 ಲಕ್ಷಕ್ಕೂ ಹೆಚ್ಚು ಜನಗಳ ಹೆಸರನ್ನು ಮತ ಪಟ್ಟಿಯಿಂದ ಕೈ ಬಿಟ್ಟಿರುವುದು ಮತ್ತು ಬದುಕಿರುವವರನ್ನು ಮೃತರು ಎಂದು ಘೋಷಣೆ ಮಾಡಿರುವುದು 65 ಲಕ್ಷ ಜನರ ಬದುಕನ್ನು ಅಯೋಮಯಗೊಳಿಸಿದೆ” ಎಂದರು.

“ಇದಲ್ಲದೆ ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಎಲ್ಲಕ್ಕಿಂತ ಮುಖ್ಯವಾಗಿ ಮತದಾರರ ಚೀಟಿ ಊರ್ಜಿತ ದಾಖಲೆಗಳಲ್ಲ ಎಂದು ಆಯೋಗವು ಆದೇಶ ನೀಡಿದೆ. ಚುನಾವಣಾ ಆಯೋಗವು ತಾನೇ ಫೋಟೋ ಲಗತಿಸಿ ನೀಡಿರುವ ಮತದಾರರ ಗುರುತಿನ ಚೀಟಿಯನ್ನು ಮೂಲಭೂತ ದಾಖಲೆ ಎಂದು ಒಪ್ಪುವುದಿಲ್ಲ ಎಂದಿರುವುದೇ ಬಹುದೊಡ್ಡ ವಿಪರ್ಯಾಸವಾಗಿದೆ. ಪ್ರಪಂಚದ ಬಹುದೊಡ್ಡ ಪ್ರಜಾಪ್ರಭುತ್ವ ದೇಶ ಎಂದು ಬಿಂಬಿಸುವ ಭಾರತ ದೇಶದಲ್ಲಿ ಚುನಾವಣಾ ಆಯೋಗವು ಅಪ್ರಜಾಂತಂತ್ರಿಕವಾಗಿ ಅಮಾನೀಯವಾಗಿ ಈ ದೇಶದ ಪ್ರಜೆಗಳಲ್ಲ ಎಂದು ಮುಗ್ಧ ಜನರನ್ನು ಬಿಂಬಿಸುತ್ತಿರುವುದು ಜನವಿರೋಧಿ ನಡೆಯಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಧಾರವಾಡ | ಗಾಂಧಿ ಜಯಂತಿ ಅಂಗವಾಗಿ ಜಿಲ್ಲಾ, ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ್ ಜಡಗನ್ನವರ ಮಾತನಾಡಿ, “ಇತ್ತೀಚೆಗೆ ಮುಕ್ತಾಯವಾದ ಕೆಲವು ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ಮತಪಟ್ಟಿಯಲ್ಲಿ ಲಕ್ಷಾಂತರ ನಕಲಿ ಮತದಾರರ ಸೇರ್ಪಡೆ, ನಕಲಿ ಮತದಾನ, ನಕಲಿ ಮತ್ತು ಅಮಾನ್ಯ ವಿಳಾಸಗಳಿರುವುದು ದೃಢಪಟ್ಟಿದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಮಂದಿ ವಾಸಿಸಲು ಸಾಧ್ಯವಾಗುವ ಮನೆಯ ವಿಳಾಸದಲ್ಲಿ 80 ಮತದಾರರು ದಾಖಲಾಗಿರುವ, ಒಬ್ಬನೇ ವ್ಯಕ್ತಿ ಹಲವಾರು ಮತಗಟ್ಟೆಗಳ ಪಟ್ಟಿಯಲ್ಲಿ ಇರುವುದು ಇಂತಹ ವಿದ್ಯಾಮಾನಗಳಿಂದ ಚುನಾವಣಾ ಆಯೋಗದ ಕಾರ್ಯ ವೈಖರಿಯನ್ನು ಜಗಜ್ಜಾಹೀರುಪಡಿಸಿದೆ. ಇದನ್ನು ಜನತೆ ಅರ್ಥ ಮಾಡಿಕೊಂಡು ದಿನ ನಿತ್ಯ ಅನುಭವಿಸುತ್ತಿರುವ ಸಮಸ್ಯೆಗಳ ವಿರುದ್ಧ ಒಟ್ಟುಗೂಡಿ ಪ್ರತಿಭಟಿಸಬೇಕು” ಎಂದು ಕರೆ ನೀಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಸದಸ್ಯ ಭುವನಾ ಬಳ್ಳಾರಿ, ಭವಾನಿ ಶಂಕರ, ಮಧುಲತಾ ಗೌಡರ್, ದೀಪಾ ಧಾರವಾಡ, ಶರಣು ಗೋನವಾರ, ಪಕ್ಷದ ಸದಸ್ಯರುಗಳು, ಬೆಂಬಲಿಗರು, ಹಿತೈಷಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...