ಧಾರವಾಡ | ಸ್ವೀಪ್ ಕಾರ್ಯಾಗಾರ; ವಿದ್ಯಾರ್ಥಿಗಳಿಗೆ ಮತದಾನದ ಅರಿವು

Date:

ಧಾರವಾಡ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಡಿ.11ರಂದು ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಕಾಲೇಜು, ಶಿಕ್ಷಣ ವಿಭಾಗ, ವ್ಯೆದ್ಯಕೀಯ ಶಿಕ್ಷಣ, ತಾಂತ್ರಿಕ ಶಿಕ್ಷಣ ಹಾಗೂ ನರ್ಸಿಂಗ್ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗಾಗಿ ಚುನಾವಣಾ ಸಾಕ್ಷರತಾ ಸಂಘ ಇಎಲ್‍ಸಿ, ಸ್ವೀಪ್ ಹಾಗೂ ಎಸ್‍ಎಸ್‍ಆರ್ ಕುರಿತು ಕಾರ್ಯಾಗಾರವನ್ನು ಹಮ್ಮಿಕೊಂಡಿತ್ತು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸ್ವೀಪ್ ನೋಡಲ್ ಅಧಿಕಾರಿ ಟಿ.ಕೆ. ಸ್ವರೂಪ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಮತದಾನದ ಮಹತ್ವ, ವಿಎಚ್‍ಎ ಮೊಬೈಲ್ ಆ್ಯಪ್ ಹಾಗೂ ಇಎಲ್‍ಸಿಗಳ ಮುಖಾಂತರ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಕೈಗೊಳ್ಳುವ ಕಾರ್ಯ ಚಟುವಟಿಕೆ ಕುರಿತು ವಿದ್ಯಾರ್ಥಿಗಳಿಗೆ ತಿಳವಳಿಕೆ ನೀಡಿದರು.

ಶಿಬಿರಾರ್ತಿಗಳಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾರ್ಯಾಗಾರದಲ್ಲಿ  ಯೋಜನಾ ನಿರ್ದೇಶಕಿ ರೇಖಾ ಡೊಳ್ಳಿನ, ಸಂಪನ್ಮೂಲ ವ್ಯಕ್ತಿಗಳಾಗಿ ಕೆ.ಎಮ್.ಶೇಖ್‌, ವಿಜಯಕುಮಾರ ಮಾನೆ, ವಾಯ್.ಎಚ್. ಭಜಂತ್ರಿ ಹಾಗೂ ಭರತ ಚಂದನಕುಮಾರವರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...