ಧಾರವಾಡ | ನಾಡಿನ ಏಕೀಕರಣಕ್ಕಾಗಿ ಹೋರಾಡಿದ ಮಹಾನ್ ಸಂಶೋಧಕ ತಲ್ಲೂರ ರಾಯನಗೌಡ: ಯ.ರು. ಪಾಟೀಲ

Date:

ದೇಶದ ಸ್ವಾತಂತ್ರ್ಯಕ್ಕಾಗಿ ಹಾಗೂ ನಾಡಿನ ಏಕೀಕರಣಕ್ಕಾಗಿ ಹೋರಾಡಿದ ಮಹಾನ್ ಹೋರಾಟಗಾರ ದಿ. ತಲ್ಲೂರ ರಾಯನಗೌಡ ಪಾಟೀಲರ ಶ್ರಮವು ಇತಿಹಾಸ ಮತ್ತು ಸಂಶೋಧನಾ ಪರಂಪರೆಯಲ್ಲಿ ಸದಾ ಸ್ಮರಣೀಯ ಎಂದು ಕಿತ್ತೂರಿನ ಚಾರಿತ್ರಿಕ ಕಾದಂಬರಿಕಾರ ಯ.ರು. ಪಾಟೀಲ ಕರ್ನಾಟಕ ವಿದ್ಯಾವರ್ಧಕ ಸಂಘವು ತಲ್ಲೂರ ರಾಯನಗೌಡ ಪಾಟೀಲ ಸ್ಮಾರಕ ಸಂಸ್ಥೆಯ ದತ್ತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ತಲ್ಲೂರ ರಾಯನಗೌಡರು-ಇತಿಹಾಸ ಪ್ರಜ್ಞೆ’ ಕುರಿತು ಉಪನ್ಯಾಸ ನೀಡುತ್ತಾ ಮಾತನಾಡಿದರು.

ದಿ. ತಲ್ಲೂರ ರಾಯನಗೌಡ ಪಾಟೀಲರು ದೇಶದ ಸ್ವಾತಂತ್ರ್ಯ ಪೂರ್ವದಲ್ಲೇ ರಾಣಿ ಚೆನ್ನಮ್ಮ ಇತಿಹಾಸ ಮಂಡಳಿಯನ್ನು ಸ್ಥಾಪಿಸಿದರು. ಬ್ರಿಟನ್‌ನಿಂದ ರಾಣಿ ಚೆನ್ನಮ್ಮನ ಇತಿಹಾಸದ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಿ, ಅದನ್ನು ದಾಖಲೆಯ ರೂಪದಲ್ಲಿ ಕೃತಿ ರಚಿಸಿ ಪ್ರಕಟಿಸಿದರು. ಒಳ್ಳೆಯ ಸಾಹಿತಿಗಳೂ ಆದ ಅವರು ‘ಮಲ್ಲಸರ್ಜ ಕಾವ್ಯ’ ಹಾಗೂ ‘ಕಿತ್ತೂರು ಬಂಡಾಯ ಕಾವ್ಯವನ್ನು ಸಂಪಾದಿಸಿ ಕಿತ್ತೂರು ಇತಿಹಾಸದ ಮೇಲೆ ಬೆಳಕು ಚೆಲ್ಲಿದರು. ರಾಯನಗೌಡ್ರು ‘ಜನಸೇವೆಯೇ ಜನಾರ್ಧನನ ಸೇವೆ’ ಎಂದು ನಂಬಿದ ಜನಸೇವಕರಾಗಿದ್ದರು” ಎಂದು ಹೇಳಿದರು.

ಬೆಳಗಾವಿಯ ಸಾಹಿತಿ ಬಸವರಾಜ ಗಾರ್ಗಿ ಮಾತನಾಡಿ, ರಾಯನಗೌಡ್ರು ಸ್ವಾತಂತ್ರ್ಯ ಹೋರಾಟಗಾರ ಮಾತ್ರವಲ್ಲದೆ, ಭವ್ಯ ಭಾರತದ ಉಜ್ವಲ ಕನಸುಗಾರರೂ ಆಗಿದ್ದರು. ತಮ್ಮ ಆದರ್ಶ ನಡೆ-ನುಡಿಗಳಿಂದ ಅವರು ಜನಮಾನಸದ ವ್ಯಕ್ತಿಯಾಗಿ ರೂಪುಗೊಂಡವರು ಎಂದು ಹೇಳಿದರು. ಕ.ವಿ.ವ. ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಮಾತನಾಡಿ, ರಾಯನಗೌಡ್ರು ದೇಶಭಕ್ತ ಸಂತರು ಮಾತ್ರವಲ್ಲ, ವಿಚಾರವಾದಿಗಳೂ ಆದ ಬಹುಮುಖ ವ್ಯಕ್ತಿತ್ವ ಉಳ್ಳವರು. ‘ಮನೆ ನಿಮ್ಮದು, ಸೇವೆ ನಮ್ಮದು’ ಎಂಬುದು ಅವರ ಧ್ಯೇಯ ವಾಕ್ಯವಾಗಿತ್ತು. ಸಮಾಜ ಸೇವೆಯಲ್ಲಿಯೇ ತೃಪ್ತರಾದ ಅವರು ಸರ್ವಧರ್ಮ ಸಮನ್ವಯತೆಯ ಪ್ರತಿಪಾದಕರು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶ್ರಾಂತ ಪ್ರಾಚಾರ್ಯ ಡಾ. ಎ.ಎಲ್. ಪಾಟೀಲ ಯ.ರು. ಪಾಟೀಲರು ಬರೆದ ‘ಬೆಳಕು ಬಿತ್ತಿದವರು’ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿ, ಈ ಕೃತಿಯಲ್ಲಿ 10 ಜನ ಸಾಧಕರು ಬೆಳಕು ಬಿತ್ತಿದ ಬಗೆಯ ಬಗ್ಗೆ ವಿವರಿಸಲಾಗಿದೆ. ಈ ಗ್ರಂಥವು ಓದುಗರಿಗೆ ಮತ್ತು ಸಂಶೋಧನೆಯ ವಿದ್ಯಾರ್ಥಿಗಳಿಗೆ ಆಕರ ಗ್ರಂಥವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಸಾಲಭಾದೆಗೆ ಮನನೊಂದು ರೈತ ಆತ್ಮಹತ್ಯೆ

ವಿಶ್ರಾಂತ ಪ್ರಾಚಾರ್ಯ ಎಂ.ಎಸ್. ಇಂಚಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ದತ್ತಿದಾನಿಗಳ ಪರವಾಗಿ ಶಂಕರಗೌಡ ಪಾಟೀಲ ಉಪಸ್ಥಿತರಿದ್ದರು. ವೀರಣ್ಣ ಒಡ್ಡೀನ ಸ್ವಾಗತಿಸಿದರು ಮತ್ತು ವಿಶ್ವೇಶ್ವರಿ ಬ. ಹಿರೇಮಠ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಡಾ. ಬಸವರಾಜ ಜಗಜಂಪಿ, ಡಾ. ಸರಜೂ ಕಾಟ್ಕರ, ಕೆ.ಜಿ. ದೇವರಮನಿ, ಶಾಂತಕ್ಕಾ ಪಾಟೀಲ, ತಲ್ಲೂರ ರಾಯನಗೌಡ ಪಾಟೀಲ ಪರಿವಾರದವರು ಸೇರಿದಂತೆ ಅನೇಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...