ಧಾರವಾಡ | ಪತ್ನಿಗೆ ಮಾತ್ರವಲ್ಲ, ತಂದೆಗೂ ವಿಮೆ ಹಣ ನೀಡುವಂತೆ ಗ್ರಾಹಕ ಆಯೋಗ ತೀರ್ಪು

Date:

ವಿಮಾ ಹಣವನ್ನು ಮೃತ ವ್ಯಕ್ತಿಯ ಪತ್ನಿಗೆ ನೀಡಿರುವ ವಿಮಾ ಕಂಪನಿಯ ಕ್ರಮಕ್ಕೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ಆಕ್ಷೇಪಿಸಿದ್ದು, ವಿಮಾ ಪಾಲಿಸಿಯ ನಾಮಿನಿದಾರ ಆಗಿರುವ ಮೃತ ವ್ಯಕ್ತಿಯ ತಂದೆಗೂ ವಿಮಾ ಹಣ ಪಾವತಿಸುವಂತೆ ಸೂಚಿಸಿದೆ.

2017ರಲ್ಲಿ ಸರ್ವ ಸುರಕ್ಷಾ ಲಾಭದ ವಿಮಾ ಪಾಲಿಸಿಯನ್ನು ಎಚ್‌ಡಿಎಫ್‌ಸಿ ಎರಗೋ ವಿಮಾ ಕಂಪನಿಯಿಂದ ಹುಬ್ಬಳ್ಳಿಯ ಆನಂದ ನಗರ ನಿವಾಸಿಯಾಗಿದ್ದ ಆಶೀಫ್ ಮುಲ್ಲಾ ಪಡೆದಿದ್ದರು. ಅದು 10 ಲಕ್ಷ ರೂ. ಮೌಲ್ಯದ ಪಾಲಿಸಿಯಾಗಿತ್ತು. ವಿಮಾದಾರ 7,646 ರೂ. ಹಣ ಪ್ರೀಮಿಯಂ ಕಟ್ಟಿದ್ದು, ಈ ಪಾಲಿಸಿಗೆ ವಿಮಾದಾರರಾಗಿದ್ದ ಆಸೀಫ್ ತಮ್ಮ ತಂದೆ ಅಲ್ಲಾಭಕ್ಷ ಮುಲ್ಲಾ ಅವರನ್ನು ನಾಮಿನಿಯನ್ನಾಗಿ ಮಾಡಿದ್ದರು.

2019ರ ಡಿಸೆಂಬರ್‌ 19ರಂದು ಗದಗ ಹುಲಕೋಟಿ ಹತ್ತಿರ ಹೋಗುವಾಗ ಲಾರಿ ಮತ್ತು ಬೈಕಿಗೆ ಢಿಕ್ಕಿಯಾಗಿ ವಿಮಾದಾರ ಆಸೀಫ್ ಅಪಘಾತದಲ್ಲಿ ಮೃತಪಟ್ಟಿದ್ದರು. ಈ ಬಗ್ಗೆ ಗದಗ ಪೊಲೀಸ್ ಠಾಣೆಯಲ್ಲಿ ಲಾರಿ ಚಾಲಕನ ಮೇಲೆ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಎಲ್ಲ ದಾಖಲೆಗಳನ್ನು ಪಡೆದು ನಾಮಿನಿಯಾಗಿದ್ದ ತಂದೆ ಅಲ್ಲಾಭಕ್ಷ ಮುಲ್ಲಾ ಅವರು, ಮೃತನ ವಿಮೆ ಕ್ಲೈಮ್‌ ಮಾಡಿಕೊಡುವಂತೆ  ಅರ್ಜಿ ಸಲ್ಲಿಸಿದ್ದರು. ಆದರೆ ವಿಮಾ ಕಂಪನಿಯು ಈ ಕ್ಲೈಮ್‌ ಅರ್ಜಿಯನ್ನು ಪರಿಗಣಿಸದೆ ಮೃತನ ಹೆಂಡತಿ ನೂರ್ ಜಹಾನಬಿ ಅವರಿಗೆ 10 ಲಕ್ಷ ರೂ. ವಿಮಾ ಹಣ ಸಂದಾಯ ಮಾಡಿತ್ತು.

ಈ ಹಿನ್ನೆಲೆಯಲ್ಲಿ ತಂದೆ ಅಲ್ಲಾಭಕ್ಷ ಮುಲ್ಲಾ ಅವರು, “ಮೃತನ ವಿಮಾ ಪಾಲಿಸಿಗೆ ನಾಮಿನಿ ಆಗಿರುವುದರಿಂದ ವಿಮಾ ಹಣವನ್ನು ತನಗೆ ಕೊಡಬೇಕಾಗಿತ್ತು. ಆದರೆ ವಿಮಾ ಕಂಪನಿ ಅವರು ತನ್ನ ಕ್ಲೈಮನ್ನು ಧಿಕ್ಕರಿಸಿ ಮೃತನ ಹೆಂಡತಿಗೆ ವಿಮಾ ಹಣ 10 ಲಕ್ಷ ರೂ. ಕೊಟ್ಟಿರುವುದು ತಪ್ಪು. ಅಂತಹ ವಿಮಾ ಕಂಪನಿಯವರ ನಡವಳಿಕೆ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆಯಾಗುತ್ತದೆ. ಹೀಗಾಗಿ ವಿಮಾ ಕಂಪನಿಯವರ ಮೇಲೆ ಸೂಕ್ತ ಕ್ರಮ ಕೈಗೊಂಡು ತನಗೆ ಪರಿಹಾರ ಕೊಡಿಸಬೇಕು” ಎಂದು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ದೂರಿನನ್ವಯ ಅಧ್ಯಕ್ಷ ಈಶಪ್ಪ ಭೂತೆ ಮತ್ತು ಸದಸ್ಯರುಗಳಾದ ವಿಶಾಲಾಕ್ಷಿ ಬೋಳಶೆಟ್ಟಿ, ಪ್ರಭು ಹಿರೇಮಠ ಒಳಗೊಂಡ ಆಯೋಗವು ವಿಚಾರಣೆ ಕೈಗೊಂಡಿದ್ದು, “ದೂರುದಾರ ಅಲ್ಲಾಭಕ್ಷ ಮೃತ ಆಸೀಫ್ ಮುಲ್ಲಾರವರ ತಂದೆಯಾಗಿದ್ದು, ವಿಮಾ ಪಾಲಿಸಿಗೆ ನಾಮಿನಿಯೂ ಆಗಿದ್ದಾರೆ. 2015ರಲ್ಲಿ ಆಗಿರುವ ವಿಮಾ ಕಾಯ್ದೆಯ ತಿದ್ದುಪಡಿಯಂತೆ ವಿಮಾದಾರ ಮೃತನಾದಲ್ಲಿ ವಿಮಾ ಪಾಲಸಿಯ ಹಣ ಪಡೆಯಲು ನಾಮಿನಿ ಮಾತ್ರ ಅರ್ಹರಿದ್ದಾರೆ. ಆದರೆ ಈ ಪ್ರಕರಣದಲ್ಲಿ ನಾಮಿನಿಯನ್ನು ಬಿಟ್ಟು, ಮೃತನ ಹೆಂಡತಿ ನೂರಜಹಾನಬಿಗೆ ವಿಮಾ ಕಂಪನಿಯವರು ಹಣ ಸಂದಾಯ ಮಾಡಿರುವುದು ವಿಮಾ ನಿಯಮಕ್ಕೆ ವಿರುದ್ಧವಾಗಿದೆ” ಎಂದು ತಿಳಿಸಿದರು.

“ವಿಮಾ ಕಂಪನಿಯವರ ನಡವಳಿಕೆ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ. ತಮ್ಮದೇ ವಿಮಾ ನಿಯಮಕ್ಕೆ ವ್ಯತಿರಿಕ್ತವಾಗಿ ಮೃತನ ಹೆಂಡತಿಗೆ ವಿಮಾ ಹಣ ನೀಡಿರುವುದನ್ನು ಆಯೋಗ ಒಪ್ಪಿಕೊಂಡಿಲ್ಲ. ವಿಮಾ ನಿಯಮದಂತೆ ನಾಮಿನಿಯಾದ ದೂರುದಾರ ವಿಮಾ ಪಾಲಿಸಿ ಮೊತ್ತ ₹10 ಲಕ್ಷ ಪಡೆಯಲು ಅರ್ಹರಿದ್ದಾರೆ” ಎಂದು ಆಯೋಗ ತೀರ್ಪು ನೀಡಿದೆ.

ಈ ಸುದ್ದಿ ಓದಿದ್ದೀರಾ? ಕೆಎಸ್‌ಒಯು ಹಗರಣ | ಎಫ್‌ಐಆರ್ ದಾಖಲು; ಸಿಬಿಐ ತನಿಖೆ ಆರಂಭ

“ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ನಾಮಿನಿಯಾದ ದೂರುದಾರನಿಗೆ ವಿಮಾ ಕಂಪನಿ ವಿಮಾ ಮೊತ್ತ ₹10 ಲಕ್ಷ ಕೊಡುಬೇಕು. ದೂರುದಾರರಿಗೆ ಆಗಿರುವ ಅನಾನುಕೂಲ ಮತ್ತು ಮಾನಸಿಕ ತೊಂದರೆಗಾಗಿ ₹50,000 ಪರಿಹಾರ ಮತ್ತು ₹5,000 ಪ್ರಕರಣದ ಖರ್ಚು ವೆಚ್ಚ ನೀಡಬೇಕು” ಎಂದು  ಆಯೋಗ ತಿಳಿಸಿದೆ.

“ಒಂದು ತಿಂಗಳ ಒಳಗಾಗಿ ₹10ಲಕ್ಷ ವಿಮಾ ಮೊತ್ತ ಕೊಡಲು ವಿಫಲರಾದಲ್ಲಿ ತೀರ್ಪು ನೀಡಿದ ದಿನಾಂಕದಿಂದ ವಿಮಾ ಮೊತ್ತದ ಮೇಲೆ ಶೇ.8ರಂತೆ ಬಡ್ಡಿ ಲೆಕ್ಕ ಹಾಕಿ ಕೊಡಬೇಕು” ಎಂದು  ಆಯೋಗ ಎದುರುದಾರರಿಗೆ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...