ಧಾರವಾಡ | ಜಾತಿ, ಧರ್ಮಕ್ಕಿಂತಲೂ ದೇಶದ ಹಿತಾಸಕ್ತಿಯೇ ಮುಖ್ಯ: ಡಾ. ವೀಣಾ ಬಿರಾದಾರ

Date:

ಜಾತಿ ಮತ್ತು ಧರ್ಮಕ್ಕಿಂತಲೂ ದೇಶದ ಹಿತಾಸಕ್ತಿಯೇ ಮುಖ್ಯ. ಧರ್ಮ ಯಾವುದೇ ಇರಲಿ, ನಾವೆಲ್ಲರೂ ಭಾರತೀಯರು ಎಂಬ ಉದಾತ್ತ ಭಾವನೆಯನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ಧಾರವಾಡದ ಸಾಯಿ ಮಹಾವಿದ್ಯಾಲಯದ ಅಧ್ಯಕ್ಷೆ ಡಾ. ವೀಣಾ ಬಿರಾದಾರ ಸಾಯಿ ಕಾಲೇಜಿನಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪವು ಆಯೋಜಿಸಿದ್ದ ಶಿಕ್ಷಣದಲ್ಲಿ ರಾಷ್ಟ್ರೀಯ ಭಾವೈಕ್ಯತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತದ ಏಳಿಗೆಯೇ ನಮ್ಮೆಲ್ಲರ ಧ್ಯೇಯವಾಗಬೇಕು. ಎಲ್ಲಾ ಮತ-ಪಂಥಗಳ ಜೀವನ ಶೈಲಿ ಮತ್ತು ನೀತಿ-ನಿಯಮಗಳ ಕುರಿತು ಗೌರವ ಭಾವನೆ ನಮ್ಮಲ್ಲಿ ಬೆಳೆಯಬೇಕು. ಬಸವಾದಿ ಶರಣರು ಮತ್ತು ಭಕ್ತಿ ಪಂಥದ ಪ್ರತಿಪಾದಕರು ಸಹ ಸರ್ವಸಮಾನತೆಯನ್ನು ತರಲು ಸಾಮರಸ್ಯದ ಬದುಕೇ ಶ್ರೇಷ್ಠ ಎಂದು ಸಾರಿದ್ದರು ಎಂದರು.

​ಉಪನ್ಯಾಸಕರಾಗಿ ಧಾರವಾಡ ಜಿಲ್ಲಾ ಇತಿಹಾಸ ಬೋಧಕರ ಸಂಘದ ಅಧ್ಯಕ್ಷ ಉದಯ ನಾಯಕ ಮಾತನಾಡಿ, “ದೇಶದ ಪ್ರಗತಿಯ ಪಥದಲ್ಲಿ ಜಾತಿಯ ವಿಷ ಬೀಜ ಕಪ್ಪು ಚುಕ್ಕೆಯಾಗಿದೆ. ನಮ್ಮ ಜಾತಿ-ಧರ್ಮ, ಆಚಾರ-ವಿಚಾರಗಳು ವಿಭಿನ್ನವಾಗಿದ್ದರೂ ನಾವೆಲ್ಲಾ ಭಾರತೀಯರು ಎಂಬ ಉದಾತ್ತ ಭಾವನೆಯೇ ಮುಖ್ಯ. ವೈವಿಧ್ಯತೆಯಲ್ಲಿ ಏಕತೆ ನಮ್ಮೆಲ್ಲರ ಸಂಸ್ಕೃತಿಯಾಗಬೇಕು. ನಾವೆಲ್ಲರೂ ಪರಸ್ಪರ ದ್ವೇಷ, ಅಸೂಯೆ ದೂರವಿರಿಸಿ ಅನ್ಯೋನ್ಯತೆಯಿಂದ ಬಾಳಬೇಕು” ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡೈಟ್ ನಿವೃತ್ತ ಉಪನ್ಯಾಸಕ ಕೆ.ಜಿ.ದೇವರಮನಿ ಮಾತನಾಡಿ, “ಭಾವೈಕ್ಯತೆಯ ಭಾವನೆ ಮೊದಲು ನಮ್ಮ ಮನೆಯಿಂದಲೇ ಪ್ರಾರಂಭವಾಗಬೇಕು. ಧರ್ಮ, ಜಾತಿಗಿಂತ ಮಾನವೀಯತೆ ಶ್ರೇಷ್ಠ ಎಂಬ ಭಾವನೆಯನ್ನು ನಾವೆಲ್ಲಾ ಅಳವಡಿಸಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ಸ್ವಸಹಾಯ ಗುಂಪುಗಳ ಮಹಿಳೆಯರೇ ನಿರ್ವಹಿಸುವ ಅಕ್ಕ-ಕಫೆ ಉದ್ಘಾಟನೆ

ಸವಿತಾ ಕರಿಕಟ್ಟಿ ಸ್ವಾಗತಿಸಿದರು. ಕ.ವಿ.ವ. ಸಂಘದ ಶಿಕ್ಷಣ ಮಂಟಪದ ಸಂಚಾಲಕ ವೀರಣ್ಣ ಒಡ್ಡೀನ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಮೌನೇಶ ಬಡಿಗೇರ ನಿರೂಪಿಸಿದರು. ಎಂ. ಜಿ. ಸುಬೇದಾರ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...