ಧಾರವಾಡ | ಶತಮಾನದ ಕೆಲಗೇರಿ ಕೆರೆ ಸ್ವಚ್ಛತೆಗೆ 20 ದಿನಗಳ ಗಡುವು ನೀಡಿದ ನ್ಯಾ. ಕೆ.ಎನ್.ಫಣೀಂದ್ರ

Date:

ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರು 1911 ರಲ್ಲಿ ಕಟ್ಟಿಸಿರುವ ಧಾರವಾಡ ಕೆಲಗೇರಿ ಕೆರೆ ಶತಮಾನ ಕಂಡಿದೆ. ಚರಂಡಿ ನೀರು, ಅಂತರಗಂಗೆ, ಕಳೆ, ಕಸ ತೆಗೆದು ಸ್ವಚ್ಛಗೊಳಿಸಿ ಕೆರೆಯನ್ನು ಶಾಪಮುಕ್ತಗೊಳಿಸಲು ಮುಂದಿನ 20 ದಿನಗಳ ಗಡುವು ನೀಡುತ್ತೇನೆ. ಈ ಕುರಿತು ಆಗಿರುವ ಕರ್ತವ್ಯಲೋಪ ಗುರುತಿಸಿ, ಸೂಕ್ತ ತನಿಖೆ ಕೈಗೊಳ್ಳಲು ಲೋಕಾಯುಕ್ತದಿಂದ ಸ್ವಯಂ ದೂರು ದಾಖಲಿಸಲಾಗುತ್ತಿದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ತಿಳಿಸಿದರು.

ನವೆಂಬರ್ 20ರಂದು ನಗರದ ಕೆಲಗೇರಿ ಕೆರೆಗೆ ಭೇಟಿ ನೀಡಿ, ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಉಪ ಲೋಕಾಯುಕ್ತ ನ್ಯಾಮೂರ್ತಿಗಳು ಸಾರ್ವಜನಿಕರೊಂದಿಗೆ ಸ್ವತಃ ಎರಡು ಕೀ.ಮಿ ನಡೆಯುವ ಮೂಲಕ ಕೆರೆಯ ಅವ್ಯವಸ್ಥೆ ಪರಿಶೀಲಿಸಿದರು. ಕೆರೆ ಅಭಿವೃದ್ಧಿಗಾಗಿ ಅವರೇ ಸ್ವಯಂ ಪ್ರೇರಿತ ದೂರು ದಾಖಲು ಮಾಡಿದ್ದರು.

ಕೆರೆ ನಿರ್ವಹಣೆ ಹಾಗೂ ಕೆರೆ ಮಾಲಿಕತ್ವ ಸೇರಿದಂತೆ ಎಲ್ಲರನ್ನು ಈ ಪ್ರಕರಣದಲ್ಲಿ ಪಾರ್ಟಿ ಮಾಡಲಾಗುತ್ತದೆ. ಕೆರೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಮತ್ತು ತಾಂತ್ರಿಕ ವರದಿಯನ್ನು ಸಲ್ಲಿಸಬೇಕು. ಮಹಾನಗರ ಪಾಲಿಕೆಯವರು ಈಗಾಗಲೇ ರೂ. 150 ಕೋಟಿ ಮೊತ್ತದ ಪ್ರಸ್ತಾವನೆ ಸಿದ್ದಗೊಳಿಸಿರುವದಾಗಿ ತಿಳಿಸಿದ್ದಾರೆ. ಇದನ್ನು ಸಹ ಪಡೆದುಕೊಂಡು ನೇರವಾಗಿ ರಾಜ್ಯಪಾಲರನ್ನು ಭೇಟಿ ಮಾಡಿ, ಕೆರೆ ಸಮಸ್ಯೆಯನ್ನು ಮನವರಿಕೆ ಮಾಡಿಕೊಡುತ್ತೇನೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲಗೇರಿ ಕೆರೆ ನಿರ್ವಹಣೆ ಮತ್ತು ಮಾಲಿಕತ್ವದ ವಿಚಾರದಲ್ಲಿ ಕೃಷಿ ವಿಶ್ವವಿದ್ಯಾಲಯ ಹಾಗೂ ಮಹಾನಗರಪಾಲಿಕೆಗಳು ಪರಸ್ಪರ ಬೊಟ್ಟು ತೋರಿಸಿ, ಕೆರೆ ಸ್ವಚ್ಛತೆ, ಅಭಿವೃದ್ಧಿಯನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಕೆರೆಯಲ್ಲಿ ಸಾಕಷ್ಟು ಅಂತರಗಂಗೆ ಬೆಳೆದಿದೆ. ಕೆರೆ ವಾಕಿಂಗ್ ಪಾಥ್‍ದಲ್ಲಿ ಗಿಡಗಂಟಿ ಬೆಳೆದಿದೆ. ಚರಂಡಿ ನೀರು ಕೆರೆ ಸೇರುತ್ತಿದೆ. ಕೆರೆಯ ಸುತ್ತಲಿನ ಜನ ಮನೆಯ ದಿನಬಳಕೆ ತ್ಯಾಜ್ಯ, ಕಸಕಡ್ಡಿ ತಂದು ಕೆರೆಯಲ್ಲಿ ಹಾಕುತ್ತಿದ್ದಾರೆ. ಇದರ ಬಗ್ಗೆ ಯಾರು ಗಮನ ಹರಿಸಿಲ್ಲ ಎಂದು ತಮ್ಮ ಅಸಮಾದಾನ ವ್ಯಕ್ತಪಡಿಸಿ, ಮುಂದಿನ 20 ದಿನದಲ್ಲಿ ಕೆರೆ ಸ್ವಚ್ಛಗೊಳಿಸಿ, ಸುಂದರಗೊಳಿಸದಿದ್ದರೆ ಕಠಿಣ ಕ್ರಮ ಜರುಗಿಸಲಾಗುವುದು. 20 ದಿನಗಳ ನಂತರ ನಾನೇ ಕೆರೆ ನೋಡಲು ಬರುತ್ತೇನೆ ಎಂದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಇಲಾಖೆಗಳ ಸಮನ್ವಯ ಸಾಧಿಸಿ, ಕೆರೆ ಅಭಿವೃದ್ದಿಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಮಹಾನಗರಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಅವರು ಮಾತನಾಡಿ, ನಾಳೆಯಿಂದ ಕೆರೆ ಸ್ವಚ್ಛತಾ ಕಾರ್ಯ ಆರಂಭಿಸುವದಾಗಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...