ಧಾರವಾಡ | ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಮುಸ್ಲಿಮರೂ ಹೆಚ್ಚಾಗಿ ಪಾಲ್ಗೊಂಡಿದ್ದರು: ಸಚಿವ ಸಂತೋಷ್ ಲಾಡ್

Date:

ಭಾರತದಿಂದ ಬ್ರಿಟಿಷರನ್ನು ಓಡಿಸುವ ಹೋರಾಟದಲ್ಲಿ ಮುಸ್ಲಿಂ ಸಮುದಾಯದವರೂ ಹೆಚ್ಚಾಗಿ ಪಾಲ್ಗೊಂಡಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದವರು ಮುಸ್ಲಿಂ ಸಮುದಾಯದವರು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಧಾರವಾಡದಲ್ಲಿ ಸಂತೋಷ್ ಲಾಡ್ ಪೌಂಡೇಶನ್ ಆಯೋಜಿಸಿದ್ದ ಮುಸ್ಲಿಂ ಸಮುದಾಯದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. “ನಮ್ಮ ಭಾರತ ದೇಶದಲ್ಲಿ ಜಾತಿ ಮತ ಬೇಧವಿಲ್ಲದೆ ಎಲ್ಲರೂ ಒಟ್ಟಾಗಿ ದೇಶ ಕಟ್ಟುವ ಕೆಲಸಕ್ಕೆ ಮುಸಲ್ಮಾನರು ಮುಂದೆ ಬರಬೇಕು. ಎಲ್ಲಿಯವರೆಗೆ ಹಿಂದೂ ಮುಸ್ಲಿಂ ಸಮಾಜದವರು ಅಣ್ಣ ತಮ್ಮಂದಿರಾಗಿ ಇರುತ್ತಾರೋ ಅಲ್ಲಿಯವರೆಗೆ ಈ ದೇಶ ಒಡೆಯಲು ಸಾಧ್ಯವಿಲ್ಲ” ಎಂದರು

ನಮ್ಮ ದೇಶ ಭಾರತಕ್ಕೆ ಗಂಡಾಂತರ ಎದುರಾಗಿದೆ ಜಾತಿ ಮತ್ತು ಧರ್ಮದ ಹೆಸರಿನಲ್ಲಿಯೇ ರಾಜಕೀಯ ಮಾಡುವುದನ್ನು ನಿಲ್ಲಿಸಲು ನಾವು ನೀವೆಲ್ಲರೂ ಜವಾಬ್ದಾರರು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಮಾತನಾಡಿ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸಂತೋಷ್ ಲಾಡ್ ಪೌಂಡೇಶನ್  ಗುರುತಿಸಿ ಗೌರವಿಸುವ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ತಿಳಿಸಿದರು.

ಅಂಜುಮನ್ ಕಾರ್ಯದರ್ಶಿ ಖಾದೀರ್ ನಜೀಮ ಸರಗಿರೋ ಅವರು ಪರಿಚಯಿಸಿದರು. ಇಂಡಿಪೆಂಡೆಂಟ್ ಸಂಗ್ರಾಮ್ ನ್ಯೂಸ ಚಾನೆಲ್‌ನ ಸಂಪಾದಕ ಎಂ.ಕೆ.ನದಾಫ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಲವಾರು ಮುಸ್ಲಿಂರನ್ನು ಸಂತೋಷ್ ಲಾಡ್ ಸನ್ಮಾನಿಸಿದರು. ಡಾ.ಖೈರುದ್ದೀನ ಶೇಖ ಕಾರ್ಯಕ್ರಮ ನಿರೂಪಿಸಿದರು, ಸಾವಿರಾರು ಮುಸಲ್ಮಾನರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...