ಧಾರವಾಡ | ಕಪ್ಪತಗುಡ್ಡ ಸಂರಕ್ಷಿಸುವ ಹೊಣೆ ಯುವ ಪೀಳಿಗೆಯ ಮೇಲಿದೆ: ನಂದಿವೇರಿ ಸ್ವಾಮೀಜಿ

Date:

ಸಸ್ಯ ಮತ್ತು ಜೀವ ಸಂಕುಲದ ಪ್ರತೀಕವಾಗಿರುವ ಕಪ್ಪತಗುಡ್ಡ ರಕ್ಷಣೆಗೆ ನಿರಂತರ ಹೋರಾಟ ಮತ್ತು ಜಾಗೃತಿ ನಡೆಯುವುದು ಅನಿವಾರ್ಯವಾಗಿದ್ದು, ಮುಂದಿನ ದಿನಗಳಲ್ಲಿಯೂ ಅದನ್ನು ಸಂರಕ್ಷಿಸುವ ಹೊಣೆ ಯುವ ಪೀಳಿಗೆ ಮೇಲಿದೆ ಎಂದು ಕಪ್ಪತಗುಡ್ಡ ನಂದಿವೇರಿ ಮಠದ ಶಿವಕುಮಾರ ಸ್ವಾಮೀಜಿ ಹೇಳಿದರು.

ಧಾರವಾಡ ನಗರದ ಕವಿವಿಯ ಸಿನೆಟ್ ಹಾಲ್‌ನಲ್ಲಿ ಗಾಂಧಿ ಅಧ್ಯಯನ ವಿಭಾಗ ಹಮ್ಮಿಕೊಂಡಿದ್ದ ಸಮಕಾಲೀನ ಪರಿಸರ ಬಿಕ್ಕಟ್ಟಿನ ಸಂದರ್ಭದಲ್ಲಿ ಗಾಂಧಿ ಚಿಂತನೆ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಔಷಧಿ ಸಸ್ಯ ಸಂಕುಲ, ಉತ್ತಮ ಹವಾಗುಣ, ಶುದ್ಧ ಜಲಸಂಪತ್ತು ಇರುವ ಕಪ್ಪತಗುಡ್ಡದ ಮೇಲೆ ದುಷ್ಟ ಶಕ್ತಿಗಳು ಕಣ್ಣಿಟ್ಟಿವೆ. ಇದನ್ನು ಲೂಟಿ ಹೊಡೆಯಲು ಕಾಲ ಕಾಲಕ್ಕೆ ನಾನಾ ತಂತ್ರ ಮಾಡುತ್ತಿದ್ದಾರೆ. ಆದರೆ ಅದನ್ನು ಉಳಿಸಿಕೊಳ್ಳಲು ಮುಂದಿನ ಪೀಳಿಗೆ ಸಜ್ಜಾಗಬೇಕು. ಯುವಕರು ವರ್ಷಕ್ಕೆ ಒಂದು ಬಾರಿಯಾದರೂ ಕಪ್ಪತಗುಡ್ಡಕ್ಕೆ ಚಾರಣ ಹೋಗಿ, ಅದರ ರಕ್ಷಣೆಗೆ ಕಂಕಣ ಕಟ್ಟಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಗುಬ್ಬಿ | ಶಾಲೆ ಮುಂದೆ ಜಿಲೆಟಿನ್ ಕಡ್ಡಿ ಸ್ಫೋಟ: ವಿದ್ಯಾರ್ಥಿಯ ಕೈಗೆ ಗಂಭೀರ ಗಾಯ

ಚಿತ್ರನಟ ಸುರೇಶ ಹೆಬ್ಳಿಕರ್ ಮಾತನಾಡಿ, ತಂತ್ರಜ್ಞಾನ ಆಧಾರಿತ ಅಭಿವೃದ್ಧಿಯಿಂದ ಪರಿಸರ ತೀವ್ರ ನಾಶವಾಗುತ್ತಿದೆ. ದೇಶಿ ಸಿದ್ದಾಂತಗಳ ಮೇಲೆ ಗಾಂಧಿಜಿ ತತ್ವಗಳ ಮೇಲೆ ಮತ್ತೆ ಪರಿಸರ ಸುಧಾರಿಸಲು ಅವಕಾಶವಿದ್ದು, ಯುವ ಪೀಳಿಗೆ ಸರಳ ಜೀವನ ರೂಢಿಸಿಕೊಳ್ಳಬೇಕು. ಆರ್ಥಿಕ ಪ್ರಗತಿ ಪರಿಸರ ನಾಶಕ್ಕೆ ಕಾರಣವಾಗದಂತಹ ದಾರಿ ಹುಡುಕಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಪ್ರಭಾರ ಕುಲಪತಿ ಡಾ.ಬಿ.ಎಂ.ಪಾಟೀಲ್ ಮಾತನಾಡಿ, ಜಗತ್ತು ಎಲ್ಲರ ಆಸೆಗಳನ್ನು ಪೂರೈಸಬಲ್ಲದು. ಪರಿಸರ ಜಾಗೃತಿ ಯುವ ಪೀಳಿಗೆಯಲ್ಲಿ ಹೆಚ್ಚಬೇಕಿದೆ ಎಂದರು.

ಅರ್ಥಶಾಸ್ತ್ರಜ್ಞ ಡಾ.ಗೋಪಾಲ ಕಡಿಕೋಡಿ, ಗಾಂಧಿ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಶಿವಾನಂದ ಶೆಟ್ಟರ, ಪಕ್ಷಿ ತಜ್ಞ ಆರ್.ಜಿ.ತಿಮ್ಮಾಪೂರ, ಹರ್ಷವರ್ಧನ ಶೀಲವಂತ, ಬಾಲಚಂದ್ರ ಜಾಬಶೆಟ್ಟಿ ಅವರುಗಳು ಪರಿಸರ ಮತ್ತು ಗಾಂಧಿ ಚಿಂತನೆ ಕುರಿತು ವಿಷಯ ಮಂಡಿಸಿದರು. ಕವಿವಿ ಎನ್‌ಎಸ್‌ಎಸ್ ಘಟಕದ ಮುಖ್ಯಸ್ಥ ಡಾ.ಮಹಾದೇವ ದಳಪತಿ ಕಾರ್ಯಕ್ರಮ ನಿರೂಪಿಸಿದರು. ಡಾ.ಎಸ್.ಬಿ.ಬಸೆಟ್ಟಿ ಸ್ವಾಗತಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...