ಧಾರವಾಡ | ಚೆನ್ನಮ್ಮ ವೃತ್ತವನ್ನು ಪ್ರತಿಭಟನಾ ರಹಿತ ವಲಯವನ್ನಾಗಿಸಲು ಸಲ್ಲಿಸಿದ್ದ ಪ್ರಸ್ತಾವ ನನೆಗುದಿಗೆ

Date:

ವಾಣಿಜ್ಯ ನಗರಿ ಹುಬ್ಬಳ್ಳಿ ವಾಣಿಜ್ಯ ವಹಿವಾಟುಗಳಿಗೆ ಎಷ್ಟು ಪ್ರಸಿದ್ಧವೋ ಕಿತ್ತೂರು ರಾಣಿ ಚೆನ್ನಮ್ಮ ವೃತ್ತ ಪ್ರತಿಭಟನೆಗಳಿಗಾಗಿ ಅಷ್ಟೇ ಹೆಸರು ಮಾಡಿದೆ. ಇಲ್ಲಿ ನಡೆಯುವ ಪ್ರತಿಭಟನೆಗಳಿಂದ ಹುಬ್ಬಳ್ಳಿಯ ವಾಹನ ಸವಾರರು ತುಂಬಾ ತೊಂದರೆ ಮತ್ತು ಸಂಚಾರ ದಟ್ಟಣೆ ಅನುಭವಿಸುತ್ತಿರುವುದರಿಂದ, ಇದನ್ನು ತಡೆಯುವ ನಿಟ್ಟಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವೃತ್ತವನ್ನು (ಕೆಸಿ ಸರ್ಕಲ್‌) ಪ್ರತಿಭಟನಾ ರಹಿತ ವಲಯವನ್ನಾಗಿ ಮಾಡಲು ಸಲ್ಲಿಸಿದ್ದ ಪ್ರಸ್ತಾವನೆ ನನೆಗುದಿಗೆ ಬಿದ್ದಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ಗೆ ಹೋಲುವ ಪ್ರತಿಭಟನಾ ವಲಯವನ್ನು ಸ್ಥಾಪಿಸಲು ನಾಗರಿಕ ಅಧಿಕಾರಿಗಳು ಯೋಜಿಸಿದ್ದರು. ಆದರೆ, ನಗರದ ರಾಷ್ಟ್ರೀಯ ಹೆದ್ದಾರಿಗಳನ್ನು ಸಂಪರ್ಕಿಸುವ ಪ್ರಮುಖ ಜಂಕ್ಷನ್ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆಗಳನ್ನು ತಗ್ಗಿಸಲು ಯಾವುದೇ ಮಹತ್ವದ ಕ್ರಮಗಳನ್ನು ಕೈಗೊಂಡಿಲ್ಲ. ಚುನಾಯಿತ ಪ್ರತಿನಿಧಿಗಳಿಗೆ ಹೈಕೋರ್ಟ್ ರಸ್ತೆ ತಡೆಗಾಗಿ ದಂಡ ವಿಧಿಸಿದ ನಂತರ ಈ ವಿಶೇಷ ಪ್ರತಿಭಟನಾ ವಲಯದ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದೆ.

ಮಾಧ್ಯಮದವರೊಂದಿಗೆ ಮಾತನಾಡಿರುವ ಸಾಮಾಜಿಕ ಕಾರ್ಯಕರ್ತ ಡಾ. ಎಂ.ಸಿ.ಸಿಂಧೂರ್, ‘ಇಂದಿನ ದಿನಗಳಲ್ಲಿ ಮೂಲಭೂತ ಸೇವೆ ಪಡೆಯಲು ಜನರು ಕಷ್ಟಪಡುತ್ತಿದ್ದಾರೆ. ಬೇಡಿಕೆ ಈಡೇರಿಕೆಗೆ ಪ್ರತಿಭಟನೆಯೇ ದಾರಿಯಾಗಿದೆ. ಹುಬ್ಬಳ್ಳಿ ಮತ್ತು ಧಾರವಾಡ ಎರಡರಲ್ಲೂ ಪ್ರತ್ಯೇಕ ಪ್ರತಿಭಟನಾ ವಲಯಗಳ ಅವಶ್ಯಕತೆ ಇದೆ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಸಂಬಂಧಪಟ್ಟ ಅಧಿಕಾರಿಗಳು ಪ್ರತಿಭಟನೆಗೆ ಬಸ್ ಟರ್ಮಿನಲ್‌, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ ಹಾಗೂ ಮುಖ್ಯ ರಸ್ತೆಗಳಿಂದ ದೂರವಿರುವಂತೆ ಪ್ರತಿಭಟನಾ ಸ್ಥಳವನ್ನು ಸೂಚಿಸಬೇಕಿದೆ. ಇದರಿಂದ ವಾಹನ ಚಾಲಕರು ಮತ್ತು ಪ್ರಯಾಣಿಕರು ತೊಂದರೆ ಅನುಭವಿಸುವುದು ತಪ್ಪುತ್ತದೆ’ ಎಂದಿದ್ದಾರೆ.

ಸಿ.ಎಂ.ನೂರ್ ಮನ್ಸೂರ್ ಮತ್ತು ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಅವರು ಪೌರಾಯುಕ್ತರಾಗಿದ್ದಾಗ ಪ್ರತಿಭಟನಾ ವಿಶೇಷ ವಲಯದ ಕಲ್ಪನೆ ವೇಗ ಪಡೆದುಕೊಂಡಿತ್ತು. ಆ ವೇಳೆ ಪೊಲೀಸ್ ಕಮಿಷನರ್ ಬಿ.ಎ. ಪದ್ಮನಯನ್ ಅವರ ಅಭಿಪ್ರಾಯವನ್ನೂ ಕೇಳಿದ್ದರು. ಅಂದಿನಿಂದ ಯೋಜನೆ ಮುಂದುವರಿದಿಲ್ಲ.

ಪ್ರತಿಭಟನೆಗೆ ಶಾಶ್ವತ ಸ್ಥಳವನ್ನು ಸೂಚಿಸುವವರೆಗೆ, ಎಚ್‌ಡಿಎಂಸಿ ಅಧಿಕಾರಿಗಳು ಎಂಜಿ ಪಾರ್ಕ್ ಬಳಿಯ ಭೂಮಿಯನ್ನು ಗುರುತಿಸಿ ವಸತಿ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಿ ವಿನ್ಯಾಸಗೊಳಿಸಿದ್ದರು. ಆದರೆ, ಈ ಯೋಜನೆ ಕಾರ್ಯರೂಪಕ್ಕೆ ಬರುವಲ್ಲಿ ಸೋತಿತು ಎನ್ನುತ್ತಾರೆ ಎಂ.ಸಿ.ಸಿಂಧೂರ್.

ಎಚ್‌ಡಿಎಂಸಿ ಕಮಿಷನರ್ ಈಶ್ವರ ಉಳ್ಳಾಗಡ್ಡಿ ಮಾತನಾಡಿ, ‘ವಿಶೇಷ ಪ್ರತಿಭಟನಾ ವಲಯಕ್ಕೆ ಸ್ಥಳ ಹುಡುಕಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಶೀಘ್ರವೇ ಪ್ರತಿಭಟನಾ ವಲಯವನ್ನು ಸೂಚಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರಿನ ಫ್ರೀಡಂ ಪಾರ್ಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಮಾಧ್ಯಮಗಳಿಗೆ ಉತ್ತರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...