ಧಾರವಾಡ | ಜಾನಪದ ಸಾಹಿತ್ಯದಲ್ಲಿ ಮಹಿಳೆಯರ ಪಾತ್ರವೇ ಪ್ರಧಾನವಾಗಿದೆ: ಜ್ಯೋತಿ ಪಾಟೀಲ್

Date:

ಜಾನಪದ ಸಾಹಿತ್ಯದಲ್ಲಿ ಮಹಿಳೆಯರ ಪಾತ್ರವೇ ಪ್ರಧಾನವಾಗಿದ್ದು, ಅವರ ಜೀವನಾನುಭವಗಳೇ ಜಾನಪದ ಹಾಡುಗಳಾಗಿ ರೂಪುಗೊಂಡಿವೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಜ್ಯೋತಿ ಪಾಟೀಲ್ ಹೇಳಿದರು.

ಕರ್ನಾಟಕ ವಿದ್ಯಾವರ್ಧಕ ಸಂಘವು ಆಯೋಜಿಸಿದ್ದ ಜಯಶ್ರೀ ಗುತ್ತಲ ದತ್ತಿ ಕಾರ್ಯಕ್ರಮದಲ್ಲಿ ‘ಜಯಶ್ರೀ ಗುತ್ತಲ ಜಾನಪದ ಪುರಸ್ಕಾರ-೨೦೨೫’ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದ ಅವರು, ಗ್ರಾಮೀಣ ಬದುಕಿನ ಒಳನೋಟಗಳೇ ಜಾನಪದ ಸಾಹಿತ್ಯದಲ್ಲಿವೆ. ತಮ್ಮ ಬದುಕಿನ ನೋವು-ನಲಿವುಗಳನ್ನು ಹಾಡಿನ ಮೂಲಕ ಹೊರಹಾಕಿ ಮಹಿಳೆಯರು ಜಾನಪದ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಕುಟುಂಬ ನಿರ್ವಹಣೆಯ ಜೊತೆಗೆ ಮಹಿಳೆಯರು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದು ಅಭಿನಂದನೀಯ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಪೂರ್ಣಾ ಪಾಟೀಲ ಮಾತನಾಡಿ, ಜಾನಪದ ಸಾಹಿತ್ಯವು ಜನಪದರ ಜೀವನದ ಸಮಗ್ರ ಚಿತ್ರಣ ನೀಡುತ್ತದೆ. ಕುಟ್ಟುವಾಗ, ಬೀಸುವಾಗ, ಮದುವೆ ಹಾಗೂ ಹಬ್ಬಗಳಲ್ಲಿ ಮಹಿಳೆಯರು ಹಾಡುವ ಹಾಡುಗಳಲ್ಲಿ ತವರುಮನೆ ಸಿರಿ, ಹೆಣ್ಣುಮಕ್ಕಳ ನೈಜ ಬದುಕು ಅನಾವರಣಗೊಂಡಿದೆ. ಜೀವನದ ನೈಜತೆಯೇ ಜಾನಪದದಲ್ಲಿದೆ. ಮಹಿಳೆಯರು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಮುಖ್ಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧ್ಯಕ್ಷತೆ ವಹಿಸಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಡಾ. ಹನಮಂತ ಡಂಬಳ ಮಾತನಾಡಿ, ಜಯಶ್ರೀ ಗುತ್ತಲ ಅವರು ಇಂದು ನಮ್ಮೊಂದಿಗಿಲ್ಲದಿದ್ದರೂ, ಎಸ್.ಬಿ. ಗುತ್ತಲ ಅವರು ದತ್ತಿ ಇಡುವ ಮೂಲಕ ಅವರನ್ನು ಸ್ಮರಿಸುತ್ತಾ ಜೀವಂತವಾಗಿರಿಸಿದ್ದಾರೆ. ಸಂಗೀತ ಪರಂಪರೆಯ ಹಿನ್ನೆಲೆಯಿದ್ದ ಕಾರಣ ಜಯಶ್ರೀ ಗುತ್ತಲ ಅವರಿಗೆ ಜಾನಪದದಲ್ಲಿ ಸಾಧನೆ ಮಾಡಲು ಸಾಧ್ಯವಾಯಿತು ಎಂದು ಸ್ಮರಿಸಿದರು. ಎಲ್ಲ ಮಹಿಳಾ ಮಂಡಳಗಳ ಹಾಡುಗಳನ್ನು ಕೇಳಿ ಸಂತೋಷವಾಯಿತು ಎಂದು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ನಡೆದ ಮೂಲ ಜಾನಪದ ಹಾಡುಗಳ ಸ್ಪರ್ಧೆಯನ್ನು ಮನೋರೋಗ ತಜ್ಞ ಡಾ. ಆನಂದ ಪಾಂಡುರಂಗಿ ಉದ್ಘಾಟಿಸಿದರು. ಸ್ಪರ್ಧೆಯಲ್ಲಿ ಒಟ್ಟು 36 ಮಹಿಳಾ ಮಂಡಳಗಳು ಭಾಗವಹಿಸಿದ್ದವು.

ಹುಬ್ಬಳ್ಳಿಯ ವಾಗ್ದೇವಿ ಮಹಿಳಾ ಮಂಡಳ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ‘ಜಯಶ್ರೀ ಗುತ್ತಲ ಜಾನಪದ ಪುರಸ್ಕಾರ-2025’ ನ್ನು ತಮ್ಮದಾಗಿಸಿಕೊಂಡಿತು. ಹುಬ್ಬಳ್ಳಿ ಶ್ರೀಗೌರಿ ಭಜನಾ ಮಂಡಳ ದ್ವಿತೀಯ ಹಾಗೂ ಧಾರವಾಡದ ರುಕ್ಮಿಣಿ ಪಾಂಡುರಂಗ ಭಜನಾ ಮಂಡಳಿ ತೃತೀಯ ಬಹುಮಾನ ಪಡೆದವು. ಧಾರವಾಡದ ತುಂಗಭದ್ರಾ ಮಹಿಳಾ ವೇದಿಕೆ, ಗಾನ ಚಿಂತನಾ ಮಹಿಳಾ ಮಂಡಳ ಮತ್ತು ಶ್ರೀರಾಮ ಜಯರಾಮ ಗುಂಪು ಮಹಿಳಾ ಮಂಡಳಕ್ಕೆ ಸಮಾಧಾನಕರ ಬಹುಮಾನಗಳನ್ನು ನೀಡಲಾಯಿತು.

ಸ್ಪರ್ಧೆಯ ತೀರ್ಪುಗಾರರಾಗಿ ಎನ್.ಆರ್. ಕುಲಕರ್ಣಿ, ವಿಜಯೇಂದ್ರ ಅರ್ಚಕ ಮತ್ತು ಶ್ರುತಿ ಕುಲಕರ್ಣಿ ಆಗಮಿಸಿದ್ದರು. ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಡಾ. ಕೃತಿಕಾ ಸತ್ಯಬೋಧ ಗುತ್ತಲ ಅವರು ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು. ದತ್ತಿ ದಾನಿ ಎಸ್.ಬಿ. ಗುತ್ತಲ ಅವರು ದತ್ತಿಯ ಕುರಿತು ಮಾತನಾಡಿದರು. ಶಂಕರ ಕುಂಬಿ ಸ್ವಾಗತಿಸಿದರು. ವಿಶ್ವೇಶ್ವರಿ ಬಿ. ಹಿರೇಮಠ ನಿರೂಪಿಸಿ, ವಂದಿಸಿದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಗಾಯತ್ರಿ ಜೊತೆಗೆ ಮುಕಳೆಪ್ಪ ಮದುವೆ; ಲವ್ ಜಿಹಾದ್ ಎಂದ ಬಜರಂಗದಳ

ಕಾರ್ಯಕ್ರಮದಲ್ಲಿ ಬಸವಪ್ರಭು ಹೊಸಕೇರಿ, ಸತೀಶ ತುರಮರಿ, ಶಂಕರ ಹಲಗತ್ತಿ, ಶಿವಾನಂದ ಭಾವಿಕಟ್ಟಿ, ವೀರಣ್ಣ ಒಡ್ಡೀನ, ಡಾ. ಜಿನದತ್ತ ಹಡಗಲಿ, ಶ್ರೀಧರ ಕುಲಕರ್ಣಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...