ಧಾರವಾಡ | ಜಾತ್ರಿ ಕಾದಂಬರಿಯಲ್ಲಿ ಹಳ್ಳಿ ವಾತಾವರಣ ವಾಸ್ತವವಾಗಿ ಮೂಡಿಬಂದಿದೆ : ಪ್ರೊ. ಮುಕುಂದ ರಾಜ್

Date:

ಸ್ವಾತಂತ್ರ್ಯ ಪೂರ್ವದಲ್ಲಿ ಗ್ರಾಮದ ಪ್ರಮುಖರು ಬ್ರಿಟೀಷರ ಪರವಾಗಿದ್ದರೆ; ಜನಸಾಮಾನ್ಯರು ಭಯದಿಂದ ಬದುಕುತ್ತಿದ್ದ ಚಿತ್ರಣವನ್ನು ಪ್ರೊ. ಧರಣೇಂದ್ರ ಕುರಕುರಿ ತಮ್ಮ ಜಾತ್ರಿ ಕಾದಂಬರಿಯಲ್ಲಿ ಕಾಣಿಸಿದ್ದಾರೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ. ಎನ್.ಎಸ್.ಮುಕುಂದರಾಜ್ ಧಾರವಾಡದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಏರ್ಪಡಿಸಿದ್ದ ಜಾತ್ರಿ ಕಾದಂಬರಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಜಾತ್ರಿ ಕಾದಂಬರಿಯಲ್ಲಿ ಹಳ್ಳಿಯ ವಾತಾವರಣ ವಾಸ್ತವವಾಗಿ ಇರುವದನ್ನು ಕಾಣಬಹುದು. ಧಾರವಾಡದ ಸುತ್ತಮುತ್ತಲಿನ ಭಾಷೆ, ಕಥಾ ನಿರೂಪಣೆ, ಅಭಿವ್ಯಕ್ತಿ ಚೆನ್ನಾಗಿ ವ್ಯಕ್ತವಾಗಿದೆ ಮತ್ತು ಸ್ವಾತಂತ್ರ್ಯ ನಂತರದ ಹಳ್ಳಿಗಳ ಪರಿಸ್ಥಿತಿ, ಮೌಲ್ಯಗಳ ಅಧಃಪಥನ, ರಾಜಕೀಯ ವ್ಯವಸ್ಥೆಯನ್ನು ಈ ಕಾದಂಬರಿಯಲ್ಲಿ ಕಾಣಬಹುದು ಎಂದರು.

ಸಾಹಿತಿ ವೆಂಕಟೇಶ್ ಮಾಚಕನೂರ ಮಾತನಾಡಿ, ಕಾದಂಬರಿಯಲ್ಲಿ ವ್ಯಕ್ತವಾದ ಸೂಕ್ಷ್ಮ ಸಂವೇದನೆಗಳನ್ನು ಉದಾಹರಣೆಗಳೊಂದಿಗೆ ವಿಶ್ಲೇಷಿಸಿದರು. ಕಾದಂಬರಿಕಾರ ಪ್ರೊ. ಧರಣೇಂದ್ರ ಕುರಕುರಿ ಕಾದಂಬರಿಯ ಹಿನ್ನೆಲೆಯನ್ನು ವಿವರಿಸಿದರು. ಡಾ. ಕೆ ಬಿ ಪವಾರ ಜಾತ್ರಿ ಕಾದಂಬರಿಯಲ್ಲಿ ಬಳಸಿಕೊಂಡ ಜನಪದ ಸಾಹಿತ್ಯದ ಔಚಿತ್ಯ ವನ್ನು ಕುರಿತು ಮಾತನಾಡಿದರು.‌ ಕಾದಂಬರಿಯ ಪ್ರಕಾಶಕರಾದ ಸವಿತಾ ಯಾಜಿ ಮಾತನಾಡಿ, ಪ್ರಕಾಶಕರ ಮತ್ತು ಬರಹಗಾರರ ಹಾಗೂ ಓದುಗರ ಸಂಬಂದವನ್ನು ವಿವರಿಸಿದರು. ಜಿಲ್ಲಾ ಕನ್ನಡ ಪರಿಷತ್ತು ಜಿಲ್ಲಾ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಹಿತ್ಯ ಪರಿಷತ್ತು ಸಾಹಿತಿಗಳು ರಚಿಸಿದ ಪ್ರತಿಗಳ ಬಿಡುಗಡೆಗೆ ಸದಾ ಪ್ರೋತ್ಸಾಹಿಸುತ್ತಾ ಬಂದಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ? ಉತ್ತರ ಕನ್ನಡ | ಅನಾಥರನ್ನು ಕರೆತಂದು ಸಲಹುವ ಕಾರ್ಯ ಎಲ್ಲರಿಂದ ಸಾಧ್ಯವಿಲ್ಲ: ಗಣೇಶ್ ನಾಯ್ಕ

ತಾಲೂಕಿನ ಕಸಾಪ ಅಧ್ಯಕ್ಷ ಮಹಾಂತೇಶ ನರೇಗಲ್ ಪ್ರಾರ್ಥಿಸಿದರು. ಪ್ರೊ. ಕೆ ಎಸ್ ಕೌಜಲಗಿ ಸ್ವಾಗತಿಸಿದರು. ಡಾ.‌ಜಿನದತ್ ಹಡಗಲಿ ವಂದನಾರ್ಪಣೆ ಮಾಡಿದರು. ತಾರಾ ಹೆಗಡೆ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಸತೀಶ್ ಕುಲಕರ್ಣಿ, ಪದ್ಮಾ ಚಿನ್ಮಯಿ, ಎಸ್.ಎಮ್.ದಾನಪ್ಪಗೌಡರ, ಶಾಂತವೀರ ಬೆಟಗೇರಿ, ಶಾಂತರಾಜ ಮಲ್ಲಸಮುದ್ರ, ಚೆನ್ನಪ್ಪ ಅಂಗಡಿ, ಡಾ. ಬಸು ಬೆವಿನಗಿಡದ, ಸರಸ್ವತಿ ಕಳಸದ, ಡಾ . ಹೇಮಾ ಪಟ್ಟಣಶೆಟ್ಟಿ, ವಿದ್ಯಾ ವಂಟಮುರಿ, ಸಿದ್ದಮ್ಮ ಅಡಿವೆನ್ನವರ, ಚನ್ನಬಸಪ್ಪ ಧಾರವಾಡ ಶೆಟ್ಟರ್, ಎಸ್ ಎಚ್ ಪ್ರತಾಪ್, ಎಸ್ ಕೆ ಕೊಪ್ಪಾ, ನಾಗೇಂದ್ರ ಕೆಂಪಣ್ಣವರ, ಪ್ರೊ. ಎಸ್ ಎಮ್ ಸಾತ್ಮಾರ, ಎಫ್ ಬಿ ಕಣವಿ, ಗಂಗಾಧರ ಗಾಡದ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...